HomeUncategorizedಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

ಪಾವಗಡದ ಮೇಲೆ ಸಂಸದ ನಾರಾಯಣಸ್ವಾಮಿಯ ದಿಢೀರ್ ಮಮಕಾರದ ಮರ್ಮವೇನು ಗೊತ್ತಾ?

- Advertisement -
- Advertisement -

ತಿಂಗಳಿಗೆ ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದುಹೋಗುತ್ತಿರುವ ಸಂಸದ ನಾರಾಯಣಸ್ವಾಮಿ ಅವರಿಗೆ ಪಾವಗಡದ ಮೇಲೆ ದಿಢೀರ್ ಅಂತ ಪ್ರೀತಿ ಉಕ್ಕಿ ಬರಲು ಕಾರಣವೇನಿರಬಹುದು..

 

 

 

 

ಪಾವಗಡ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರ. ಇಲ್ಲಿ ದಲಿತರದ್ದೇ ಮೇಲುಗೈ, ಅಂದ್ರೆ ಜನಸಂಖ್ಯೆ ಯಲ್ಲಿ ಮಾತ್ರವೇ ಹೊರತು ಅಧಿಕಾರ ಅನುಭವಿಸಲು ಅಲ್ಲ. ದಲಿತ ಸಮುದಾಯದ ಅಭ್ಯರ್ಥಿಯೇ ಶಾಸಕರಾಗಿ ಆಯ್ಕೆಯಾಗಿ ಬಂದರೂ ಪರೋಕ್ಷವಾಗಿ ಆಡಳಿತ ನಡೆಸುವವರು ಬೇರೆಯವರು. ಶಾಸಕರು ಮತ್ತು ಪಕ್ಷದ ಸಂಪೂರ್ಣ ಹಿಡಿತ ರೆಡ್ಡಿಗಳು ಮತ್ತು ಲಿಂಗಾಯತರ ಕೈಯಲ್ಲಿರುತ್ತದೆ. ಶಾಸಕರು ರಬ್ಬರ್ ಸ್ಟಾಂಪ್. ಮೇಲ್ಜಾತಿ ಮುಖಂಡರ ಮಾತು ಕೇಳದ ಶಾಸಕರು ಮುಂದಿನ ಚುನಾವಣೆಯಲ್ಲಿ ಆಯ್ಕೆಯಾಗುವುದಿಲ್ಲ ಅಥವ ಪಕ್ಷದ ಹೈಕಮಾಂಡ್‍ಗೆ ಚಾಡಿ ಹೇಳಿ ವ್ಯವಸ್ಥಿತವಾಗಿ ಟಿಕೆಟ್ ತಪ್ಪಿಸುವ ಪಿತೂರಿಯೂ ನಡೆಯುತ್ತದೆ. ಆದ್ದರಿಂದ ಇಲ್ಲಿನ ಶಾಸಕರು ಮೇಲ್ವರ್ಗದ ಮುಖಂಡರ ಜೊತೆ ಹೊಂದಿಕೊಂಡೇ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಪಾವಗಡ ತಾಲೂಕಿನಲ್ಲಿ ಮೊದಲ ಸ್ಥಾನದಲ್ಲಿ ಎಡಗೈ ಸಮುದಾಯ, ಬೋವಿ, ಲಂಬಾಣಿ ಸಮುದಾಯ, ಗೊಲ್ಲರು ಮತ್ತು ನಾಯಕರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಮತಗಳೇ ನಿರ್ಣಾಯಕ. ಯಾವ ಅಭ್ಯರ್ಥಿ ಮೂರು ಜನಾಂಗದ ಮತ ಪಡೆಯುತ್ತಾರೋ ಅವರು ಶಾಸಕರಾಗಿ ಆಯ್ಕೆಯಾಗುವುದು ಖಚಿತ. ಹೀಗಾಗಿ ಇದುವರೆಗೆ ಎಡಗೈ ಸಮುದಾಯದವರು, ಲಂಬಾಣಿ ಮತ್ತು ಬೋವಿ ಸಮುದಾಯದಿಂದ ಶಾಸಕರಾಗಿದ್ದಾರೆ. ಹಿಂದಿನಿಂದಲೂ ಒಮ್ಮೆ ಜೆಡಿಎಸ್ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸುತ್ತಾ ಬಂದಿದ್ದಾರೆ.

ಆದರೆ ಈಗ ಪಾವಗಡ ತಾಲೂಕು ಭಿನ್ನರಾಜಕೀಯ ಚಟುವಟಿಕೆಗಳಿಗೆ ವೇದಿಕೆ ಒದಗಿಸಿದಂತೆ ಕಂಡುಬರುತ್ತಿದೆ. 2019ರ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಎ.ನಾರಾಯಣಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದು ಕ್ಷೇತ್ರದಲ್ಲಿ ತಿರುಗಾಟ ಹೆಚ್ಚಾಗಿದೆ. ಪ್ರತಿ ತಿಂಗಳು ಕನಿಷ್ಟ ನಾಲ್ಕೈದು ಬಾರಿ ಪಾವಗಡಕ್ಕೆ ಬಂದು ಹೋಗುತ್ತಿರುವುದು ಸಂದೇಹಕ್ಕೆ ಕಾರಣವಾಗಿದೆ. ದಿಢೀರ್ ಪಾವಗಡ ತಾಲೂಕಿನ ಮೇಲೆ ಸಂಸದ ನಾರಾಯಣಸ್ವಾಮಿ ಅವರಿಗೆ ಪ್ರೀತಿ ಉಕ್ಕಿ ಬರಲು ಕಾರಣವೇನು? ಪದೇಪದೇ ಭೇಟಿ ಮಾಡುತ್ತಿರುವ ಉದ್ದೇಶವೇನು ಎಂಬ ಮಾತುಗಳ ಪತ್ರಕರ್ತವಲಯದಿಂದ ಕೇಳಿಬರತೊಡಗಿವೆ.

ಕಳೆದ ಆಗಸ್ಟ್‍ನಲ್ಲಿ ಪಾವಗಡದ ಹಳ್ಳಿಗಳಿಗೆ ಭೇಟಿ ನೀಡಿದ ನಾರಾಯಣಸ್ವಾಮಿ ಗಣೇಶ ಹಬ್ಬದಲ್ಲಿ ಯುವಕರಿಗೆ ಹಣ ಹಂಚಿ ಹೋಗಿರುವುದು ಗುಟ್ಟಾಗಿ ಉಳಿದಿಲ್ಲ. ಇದರಿಂದ ನಾರಾಯಣಸ್ವಾಮಿ ಬಗ್ಗೆ ಯುವಪೀಳಿಗೆ ಪ್ರೀತಿ ಬೆಳೆಸಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಂಧುವೊಬ್ಬರನ್ನು ಪಾವಗಡ ಮೀಸಲು ಕ್ಷೇತ್ರದಲ್ಲಿ ಸ್ಪರ್ಧೆಗಿಳಿಸಿ ಗೆಲ್ಲಿಸಿಕೊಳ್ಳುವ ತಯಾರಿ ನಡೆಸಿದ್ದಾರೆ. ಇದಕ್ಕೆ ಪೂರಕವೆಂಬ ಪ್ರಚಾರದ ತಂತ್ರಗಳನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಎನ್ನುತ್ತವೆ ಸ್ಥಳೀಯ ಮೂಲಗಳು.

 

 

 

 

ಬೆಂಗಳೂರಿನ ಆನೇಕಲ್ ಮುನಿವೆಂಕಟಪ್ಪ ಲೇಔಟ್‍ನಲ್ಲಿ ವಾಸವಾಗಿರುವ ನಾರಾಯಣಸ್ವಾಮಿ ಕೋಟ್ಯಂತರ ರೂಪಾಯಿ ಒಡೆಯ. 2019ರ ಚುನಾವಣೆಯಲ್ಲಿ ಅವರೇ ಘೋಷಿಸಿಕೊಂಡಂತೆ ಒಂದು ಕೆ.ಜಿ. ಚಿನ್ನ, 5 ಕೆ.ಜಿ. ಬೆಳ್ಳಿ ಸೇರಿದಂತೆ 99,96,842 ರೂ ಮೌಲ್ಯದ ಚರಾಸ್ತಿ ಇದೆ. ರಿಲಯನ್ಸ್ ಇನ್ಸೂರೆನ್ಸ್‍ನಲ್ಲಿ ಇಟ್ಟಿರುವ ಮೊತ್ತವೂ ಇದರಲ್ಲಿ ಸೇರಿದೆ. ಸ್ಥಿರಾಸ್ತಿ ಮೌಲ್ಯ 8 ಕೋಟಿ, 65 ಲಕ್ಷದ 40 ಸಾವಿರ 842 ರೂಪಾಯಿ. ಹತ್ತಿರತ್ತಿರ ಒಂಬತ್ತು ಕೋಟಿಯ ಕುಳ. ಈ ಕಾರಣಕ್ಕಾಗಿಯೆ ನೀರಿನಂತೆ ಹಣ ಖರ್ಚು ಮಾಡುತ್ತಾರೆಂಬ ಹೆಸರೂ ಇದೆ.

ಪಾವಗಡದಲ್ಲಿ ನಡೆಯುವ ಪ್ರತಿ ಮೀಟಿಂಗ್‍ಗೂ ಬರುತ್ತಾರೆ. ಅತ್ಯಂತ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಾರೆ. ಇವರು ಹೀಗೆ ಚಟುವಟಿಕೆಯಿಂದ ಓಡಾಡುವುದು ನೋಡಿದರೆ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು. ನಾರಾಯಣಸ್ವಾಮಿ ಯುವಕರನ್ನು ಸಂಘಟಿಸುತ್ತಿರುವುದು ಕಾಂಗ್ರೆಸ್ ಮುಖಂಡ ಹಾಲಿ ಶಾಸಕ ವೆಂಕಟರವಣಪ್ಪ ಮತ್ತು ಜೆಡಿಎಸ್ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಅವರಲ್ಲಿ ತಳಮಳ ಶುರುವಾಗಿದೆ.

ಪ್ರಯೋಗಗಳ ಮೇಲೆ ಪ್ರಯೋಗ ನಡೆಸುತ್ತಿರುವ ಬಿಜೆಪಿ ಇಲ್ಲಿ ಖಾತೆ ತೆರೆಯಲು ಕಸರತ್ತು ನಡೆಸುತ್ತಿದೆ. ಮೊದಲ ಬಾರಿಗೆ ಬಿಜೆಪಿ ಲಂಬಾಣಿ ಸಮುದಾಯದ ಸೋಮ್ಲಾನಾಯಕ್ ಅವರನ್ನು ಕಣಕ್ಕೆ ಇಳಿಸಿತು. ಆದರೆ ಸೋಲು ಕಂಡಿತು. ಮತ್ತೆ ಕೃಷ್ಣಾನಾಯಕ್ ಅವರನ್ನು ಕಣಕ್ಕಿಳಿಸಿದಾಗಲೂ ಸೋತುಸುಣ್ಣವಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೋವಿ ಸಮುದಾಯದ ಬಲರಾಂ ಅವರನ್ನು ಕಣಕ್ಕಿಳಿಸಿದರೂ ಪ್ರಯೋಜನವಾಗಲಿಲ್ಲ. ಆದರೆ ಓಟಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿರುವುದು ಕಂಡುಬಂದಿದೆ.

ಮತ ಪ್ರಮಾಣ ಹೆಚ್ಚಾಗಲು ಕಾರಣವೂ ಇದೆ. ಆರ್.ಎಸ್.ಎಸ್. ಭಜರಂಗದಳ ಸಂಘಟನೆಗಳು ಒಳಗೊಳಗೆ ಕೆಲಸ ಮಾಡುತ್ತಿವೆ. ಈಗ ನಾರಾಯಣಸ್ವಾಮಿ ಪಾವಗಡಕ್ಕೆ ಬಂದಿರುವುದು ಬಿಜೆಪಿ ಬಲಗೊಳ್ಳಲು ಕಾರಣವಾಗಲಿದೆ. ಪರಿಶಿಷ್ಟ ಸಮುದಾಯದ ಮತಗಳನ್ನು ಹಿಡಿಗಂಟಾಗಿ ಇಟ್ಟುಕೊಂಡರೆ ಕಮಲ ಅರಳುವುದು ಖಚಿತ ಎಂದು ಭಾವಿಸಿರುವ ಸಂಸದರು ಪಾವಗಡ ಕ್ಷೇತ್ರಕ್ಕೆ ಪದೇಪದೇ ಭೇಟಿ ನೀಡುವುದು ಮಾಡುತ್ತಿದ್ದಾರೆ.
ಈ ಹಿಂದೆ ಸದ್ದುಗದ್ದಲವಿಲ್ಲದೆ ಯಾವುದೇ ಪ್ರಚಾರ ಇಲ್ಲದೇ ಕೆಲಸದಲ್ಲಿ ತೊಡಗಿದ್ದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ವೆಂಕಟರವಣಪ್ಪ, ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಹಾಲಿ ಸಂಸದರ ಅಬ್ಬರದ ಪ್ರಚಾರವನ್ನು ನೋಡಿ ತಳಮಳಗೊಂಡಿರುವುದಂತೂ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....