Homeಕರ್ನಾಟಕಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

ಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

- Advertisement -
- Advertisement -

ಬೆಂಗಳೂರು: ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿನ ರೈತಪರ ನೀತಿಯನ್ನು ಕೇಂದ್ರ ಸರ್ಕಾರ ಮೆಚ್ಚಿ ಪ್ರಶಸ್ತಿ ನೀಡಿದೆ. ಇದನ್ನು ಕರ್ನಾಟಕ ಮಾಡೆಲ್ ಎಂದೂ ಬಣ್ಣಿಸಿ, ಇತರ ರಾಜ್ಯಗಳಿಗೂ ಇದನ್ನು ಅನುಸರಿಸುವಂತೆ ಹೇಳಿತ್ತು. ಈಗ ರಾಜ್ಯ ಸರ್ಕಾರ ಈ ಯೋಜನೆ ಬಗ್ಗೆ ಯಾವುದೇ ತನಿಖೆ ನಡೆಸಿದರೂ ನಾನು ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅಕ್ರಮ ನಡೆದಿದೆ, ಇದರ ತನಿಖೆ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರವು ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಈ ಕುರಿತು ಪ್ರಸ್ತಾಪಿಸಿರುವ ಬಗ್ಗೆ ಮಾಧ್ಯಮಗಳು ಶನಿವಾರ ಪ್ರಶ್ನಿಸಿದಾಗ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಚರಿತ್ರೆಯನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ನಾನು ಯಾವ ಯೋಜನೆ ಮಾಡಿದ್ದೇನೆ, ಎಷ್ಟು ಪಾರದರ್ಶಕವಾಗಿ ಮಾಡಿದ್ದೇನೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿದಿದೆ. ಸೋಲಾರ್ ಪಾರ್ಕ್ ಯೋಜನೆಯಲ್ಲಿ ಬಳಕೆಯಾದ ಜಮೀನು ರೈತರ ಬಳಿಯೇ ಉಳಿದುಕೊಂಡು, ರೈತರೇ 20 ಮೆಗವ್ಯಾಟ್ ವಿದ್ಯುತ್ ಉತ್ಪಾದಿಸುವಂತಾಗಿದೆ” ಎಂದು ವಿವರಿಸಿದ್ದಾರೆ.

“ಈ ಯೋಜನೆ ಬಗ್ಗೆ ಈಗಿನ ಸಚಿವರು ಹಾಗೂ ಮಂತ್ರಿಗಳಿಗೆ ಎಷ್ಟು ಗೊತ್ತಿದೆಯೋ, ಇಲ್ಲವೋ ತಿಳಿದಿಲ್ಲ. ಅವರು ದಾಖಲೆಗಳನ್ನು ತೆಗೆದು ನೋಡಲಿ. ರಾಷ್ಟ್ರೀಯ ಮಟ್ಟದ ಇಂಧನ ಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್, ಇತರ ಸಚಿವರು ಹಾಗೂ ಪ್ರಧಾನಿಗಳು ನನಗೆ ಪ್ರಶಸ್ತಿ ನೀಡಿದ್ದಾರೆ. ಈ ಯೋಜನೆಯಲ್ಲಿ ರೈತರ ಪರ ತೆಗೆದುಕೊಳ್ಳಲಾದ ನೀತಿಯನ್ನು ಕರ್ನಾಟಕದ ಮಾಡೆಲ್ ಎಂದು ಕರೆದು ಎಲ್ಲಾ ರಾಜ್ಯಗಳು ಇದನ್ನು ಪಾಲಿಸುವಂತೆ ಪತ್ರ ಬರೆಯಲಾಗಿತ್ತು. ಈ ದಾಖಲೆ ನನ್ನ ಬಳಿಯೇ ಇದೆ” ಎಂದು ಮಾಹಿತಿ ನೀಡಿದ್ದಾರೆ.

“ಈ ಯೋಜನೆಗೆ 6 ತಿಂಗಳ ಮುಂಚಿತವಾಗಿ ಜಾಹೀರಾತು ನೀಡಿ ಟೆಂಡರ್ ಕರೆಯಲಾಗಿತ್ತು. ಇದೆಲ್ಲವನ್ನೂ ರಾಜ್ಯದ ಅಧಿಕಾರಿಗಳು ಮಾಡಿದ್ದರು. ಈಗಿನ ಇಲಾಖೆ ಕಾರ್ಯದರ್ಶಿಗಳು, ಸರ್ಕಾರ ಯಾರನ್ನೂ ಕೆಆರ್‌ಸಿ ಮುಖ್ಯಸ್ಥರನ್ನಾಗಿ ಮಾಡಿದೆಯೋ ಅವರೂ ಈ ಯೋಜನೆ ಭಾಗವಾಗಿದ್ದರು. ಅವರನ್ನೇ ಈ ಯೋಜನೆ ಬಗ್ಗೆ ಕೇಳಲಿ, ತನಿಖೆ ಮಾಡಲಿ. ಈ ಯೋಜನೆಯಲ್ಲಿ ನಾನು ಸಣ್ಣ ತಪ್ಪು ಮಾಡಿದ್ದರೂ ಎಂತಹುದೇ ಶಿಕ್ಷೆಗೆ ನಾನು ಬದ್ಧ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ ಉತ್ಪಾದನೆ ಎಷ್ಟಿತ್ತು? ಜವಾಬ್ದಾರಿ ಬಿಡುವಾಗ ಉತ್ಪಾದನೆ ಎಷ್ಟಕ್ಕೆ ಏರಿಕೆಯಾಗಿತ್ತು ಎಂದು ಈಗ ಮಾತನಾಡುವುದಿಲ್ಲ. ಎಲ್ಲ ದಾಖಲೆಗಳು ನನ್ನ ಬಳಿಯೇ ಇವೆ. ಯಾವುದೇ ರೀತಿಯ ತನಿಖೆಗೂ ಸಿದ್ಧ. ನಾನು ಅದನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

“ನಾನು ಇಂಧನ ಇಲಾಖೆಯಲ್ಲಿ ಮಾಡಿರುವ ಕೆಲಸದ ಸತ್ಯಾಂಶ ಮುಚ್ಚಿಹಾಕಿದರೆ ಅದರ ಪರಿಣಾಮ ಅವರಿಗೆ ತಗುಲುತ್ತದೆ. ಸತ್ಯಾಂಶವನ್ನು ಅವರು ಮುಚ್ಚಿಹಾಕಬಾರದು. ಈಗ ಇಡೀ ರಾಜ್ಯದಲ್ಲಿ ಯಾವ್ಯಾವ ಹಗರಣ ನಡೆದಿವೆ, ಬಿಟ್ ಕಾಯಿನ್ ಪ್ರಕರಣದಿಂದ ಹಿಡಿದು ಏನೆಲ್ಲ ಪ್ರಕರಣಗಳನ್ನು ಅವರು ಹೇಗೆಲ್ಲಾ ಮುಚ್ಚಿಹಾಕಿದ್ದಾರೆ ಎಂದು ಗೊತ್ತಿದೆ. ಅವರು ಏನು ಮಾಡುತ್ತಾರೋ ಮಾಡಲಿ, ಸಮಯ ಬಂದಾಗ ನಾನು ಮಾತನಾಡುತ್ತೇನೆ” ಎಂದಿದ್ದಾರೆ.

ಇ.ಡಿ. ಸಮನ್ಸ್ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, “ಇ.ಡಿ. ಅವರಿಗೆ ನಾನು ಎಲ್ಲಾ ಉತ್ತರ ನೀಡಿದ್ದೆ. ಆದರೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖಾಧಿಕಾರಿ ಬದಲಾಗಿದ್ದಾರೆ ಎಂದು 7ನೇ ತಾರೀಖು ವಿಚಾರಣೆಗೆ ಹಾಜರಾಗುವಂತೆ ನನಗೆ ಹಾಗೂ ನನ್ನ ಸಹೋದರನಿಗೆ ನೊಟೀಸ್ ನೀಡಿದ್ದಾರೆ. ಅವರು ಕೆಲವು ದಾಖಲೆ ಕೇಳಿದ್ದು ಅವುಗಳನ್ನು ಸಲ್ಲಿಸಿದ್ದೇನೆ. ಇನ್ನು ಕೆಲವು ದಾಖಲೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ಕಳಿಸುತ್ತೇನೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ. ಪದೇ ಪದೇ ನಮಗೆ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

ತುಮಕೂರು ಜಿಲ್ಲಾ ಆಸ್ಪತ್ರೆಯ ನಿರ್ಲಕ್ಷ್ಯದಿಂದಾದ ಗರ್ಭಿಣಿ ಹಾಗೂ ಅವಳಿ ಮಕ್ಕಳ ಸಾವಿನ ಕುರಿತು ಮಾತನಾಡಿದ ಅವರು, “ಇದು ಸರ್ಕಾರದ ವೈಫಲ್ಯ. ಈ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಿಲ್ಲ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಅದಕ್ಕೆ ಇದೇ ಸಾಕ್ಷಿ. ಸರ್ಕಾರಕ್ಕೆ ಜನರ ನೋವು, ಭಾವನೆ ಗೊತ್ತಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸುವುದು ತಿಳಿದಿಲ್ಲ” ಎಂದು ವಿವಾದಿಸಿದ್ದಾರೆ.

“ಸರ್ಕಾರ ಈಗ ಅಧಿಕಾರಿಗಳ ಅಮಾನತು ಮಾಡುವುದಾದರೆ, ಆಕ್ಸಿಜನ್ ದುರಂತ ಸಂದರ್ಭದಲ್ಲಿ 36 ಜನ ಸತ್ತಾಗ ಯಾಕೆ ಅಮಾನತು ಮಾಡಲಿಲ್ಲ. ಆಗ ಯಾವುದೇ ಅಧಿಕಾರಿ ವಿರುದ್ಧ ಕ್ರಮವೂ ಇಲ್ಲ, ಸಚಿವರ ರಾಜೀನಾಮೆ ಇಲ್ಲ. ನಾನು ಸಂತ್ರಸ್ತ ಕುಟುಂಬಗಳಿಗೆ ಹೋಗಿ ತಲಾ 1 ಲಕ್ಷ ಚೆಕ್ ನೀಡಿ ಸಾಂತ್ವನ ಹೇಳಿದೆ. ಕೋವಿಡ್‌ನಿಂದ ಸತ್ತವರಿಗೂ ಸರ್ಕಾರ ಈವರೆಗೂ ಪರಿಹಾರ ಹಣ ನೀಡಿಲ್ಲ. ರಾಜ್ಯದ ಎಲ್ಲಾ ಭಾಗಗಳಿಂದ ಈ ವಿಚಾರವಾಗಿ ಮಾಹಿತಿ ಸಂಗ್ರಹಿಸಿ ನಂತರ ಈ ಬಗ್ಗೆ ಮಾತನಾಡುತ್ತೇನೆ. ಇದು ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ಇಡೀ ಸರ್ಕಾರದ ವೈಫಲ್ಯ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...