Homeಕರ್ನಾಟಕಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

ಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

- Advertisement -
- Advertisement -

ಬೆಂಗಳೂರು: ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿನ ರೈತಪರ ನೀತಿಯನ್ನು ಕೇಂದ್ರ ಸರ್ಕಾರ ಮೆಚ್ಚಿ ಪ್ರಶಸ್ತಿ ನೀಡಿದೆ. ಇದನ್ನು ಕರ್ನಾಟಕ ಮಾಡೆಲ್ ಎಂದೂ ಬಣ್ಣಿಸಿ, ಇತರ ರಾಜ್ಯಗಳಿಗೂ ಇದನ್ನು ಅನುಸರಿಸುವಂತೆ ಹೇಳಿತ್ತು. ಈಗ ರಾಜ್ಯ ಸರ್ಕಾರ ಈ ಯೋಜನೆ ಬಗ್ಗೆ ಯಾವುದೇ ತನಿಖೆ ನಡೆಸಿದರೂ ನಾನು ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅಕ್ರಮ ನಡೆದಿದೆ, ಇದರ ತನಿಖೆ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರವು ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಈ ಕುರಿತು ಪ್ರಸ್ತಾಪಿಸಿರುವ ಬಗ್ಗೆ ಮಾಧ್ಯಮಗಳು ಶನಿವಾರ ಪ್ರಶ್ನಿಸಿದಾಗ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಚರಿತ್ರೆಯನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ನಾನು ಯಾವ ಯೋಜನೆ ಮಾಡಿದ್ದೇನೆ, ಎಷ್ಟು ಪಾರದರ್ಶಕವಾಗಿ ಮಾಡಿದ್ದೇನೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿದಿದೆ. ಸೋಲಾರ್ ಪಾರ್ಕ್ ಯೋಜನೆಯಲ್ಲಿ ಬಳಕೆಯಾದ ಜಮೀನು ರೈತರ ಬಳಿಯೇ ಉಳಿದುಕೊಂಡು, ರೈತರೇ 20 ಮೆಗವ್ಯಾಟ್ ವಿದ್ಯುತ್ ಉತ್ಪಾದಿಸುವಂತಾಗಿದೆ” ಎಂದು ವಿವರಿಸಿದ್ದಾರೆ.

“ಈ ಯೋಜನೆ ಬಗ್ಗೆ ಈಗಿನ ಸಚಿವರು ಹಾಗೂ ಮಂತ್ರಿಗಳಿಗೆ ಎಷ್ಟು ಗೊತ್ತಿದೆಯೋ, ಇಲ್ಲವೋ ತಿಳಿದಿಲ್ಲ. ಅವರು ದಾಖಲೆಗಳನ್ನು ತೆಗೆದು ನೋಡಲಿ. ರಾಷ್ಟ್ರೀಯ ಮಟ್ಟದ ಇಂಧನ ಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್, ಇತರ ಸಚಿವರು ಹಾಗೂ ಪ್ರಧಾನಿಗಳು ನನಗೆ ಪ್ರಶಸ್ತಿ ನೀಡಿದ್ದಾರೆ. ಈ ಯೋಜನೆಯಲ್ಲಿ ರೈತರ ಪರ ತೆಗೆದುಕೊಳ್ಳಲಾದ ನೀತಿಯನ್ನು ಕರ್ನಾಟಕದ ಮಾಡೆಲ್ ಎಂದು ಕರೆದು ಎಲ್ಲಾ ರಾಜ್ಯಗಳು ಇದನ್ನು ಪಾಲಿಸುವಂತೆ ಪತ್ರ ಬರೆಯಲಾಗಿತ್ತು. ಈ ದಾಖಲೆ ನನ್ನ ಬಳಿಯೇ ಇದೆ” ಎಂದು ಮಾಹಿತಿ ನೀಡಿದ್ದಾರೆ.

“ಈ ಯೋಜನೆಗೆ 6 ತಿಂಗಳ ಮುಂಚಿತವಾಗಿ ಜಾಹೀರಾತು ನೀಡಿ ಟೆಂಡರ್ ಕರೆಯಲಾಗಿತ್ತು. ಇದೆಲ್ಲವನ್ನೂ ರಾಜ್ಯದ ಅಧಿಕಾರಿಗಳು ಮಾಡಿದ್ದರು. ಈಗಿನ ಇಲಾಖೆ ಕಾರ್ಯದರ್ಶಿಗಳು, ಸರ್ಕಾರ ಯಾರನ್ನೂ ಕೆಆರ್‌ಸಿ ಮುಖ್ಯಸ್ಥರನ್ನಾಗಿ ಮಾಡಿದೆಯೋ ಅವರೂ ಈ ಯೋಜನೆ ಭಾಗವಾಗಿದ್ದರು. ಅವರನ್ನೇ ಈ ಯೋಜನೆ ಬಗ್ಗೆ ಕೇಳಲಿ, ತನಿಖೆ ಮಾಡಲಿ. ಈ ಯೋಜನೆಯಲ್ಲಿ ನಾನು ಸಣ್ಣ ತಪ್ಪು ಮಾಡಿದ್ದರೂ ಎಂತಹುದೇ ಶಿಕ್ಷೆಗೆ ನಾನು ಬದ್ಧ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ ಉತ್ಪಾದನೆ ಎಷ್ಟಿತ್ತು? ಜವಾಬ್ದಾರಿ ಬಿಡುವಾಗ ಉತ್ಪಾದನೆ ಎಷ್ಟಕ್ಕೆ ಏರಿಕೆಯಾಗಿತ್ತು ಎಂದು ಈಗ ಮಾತನಾಡುವುದಿಲ್ಲ. ಎಲ್ಲ ದಾಖಲೆಗಳು ನನ್ನ ಬಳಿಯೇ ಇವೆ. ಯಾವುದೇ ರೀತಿಯ ತನಿಖೆಗೂ ಸಿದ್ಧ. ನಾನು ಅದನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

“ನಾನು ಇಂಧನ ಇಲಾಖೆಯಲ್ಲಿ ಮಾಡಿರುವ ಕೆಲಸದ ಸತ್ಯಾಂಶ ಮುಚ್ಚಿಹಾಕಿದರೆ ಅದರ ಪರಿಣಾಮ ಅವರಿಗೆ ತಗುಲುತ್ತದೆ. ಸತ್ಯಾಂಶವನ್ನು ಅವರು ಮುಚ್ಚಿಹಾಕಬಾರದು. ಈಗ ಇಡೀ ರಾಜ್ಯದಲ್ಲಿ ಯಾವ್ಯಾವ ಹಗರಣ ನಡೆದಿವೆ, ಬಿಟ್ ಕಾಯಿನ್ ಪ್ರಕರಣದಿಂದ ಹಿಡಿದು ಏನೆಲ್ಲ ಪ್ರಕರಣಗಳನ್ನು ಅವರು ಹೇಗೆಲ್ಲಾ ಮುಚ್ಚಿಹಾಕಿದ್ದಾರೆ ಎಂದು ಗೊತ್ತಿದೆ. ಅವರು ಏನು ಮಾಡುತ್ತಾರೋ ಮಾಡಲಿ, ಸಮಯ ಬಂದಾಗ ನಾನು ಮಾತನಾಡುತ್ತೇನೆ” ಎಂದಿದ್ದಾರೆ.

ಇ.ಡಿ. ಸಮನ್ಸ್ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, “ಇ.ಡಿ. ಅವರಿಗೆ ನಾನು ಎಲ್ಲಾ ಉತ್ತರ ನೀಡಿದ್ದೆ. ಆದರೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖಾಧಿಕಾರಿ ಬದಲಾಗಿದ್ದಾರೆ ಎಂದು 7ನೇ ತಾರೀಖು ವಿಚಾರಣೆಗೆ ಹಾಜರಾಗುವಂತೆ ನನಗೆ ಹಾಗೂ ನನ್ನ ಸಹೋದರನಿಗೆ ನೊಟೀಸ್ ನೀಡಿದ್ದಾರೆ. ಅವರು ಕೆಲವು ದಾಖಲೆ ಕೇಳಿದ್ದು ಅವುಗಳನ್ನು ಸಲ್ಲಿಸಿದ್ದೇನೆ. ಇನ್ನು ಕೆಲವು ದಾಖಲೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ಕಳಿಸುತ್ತೇನೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ. ಪದೇ ಪದೇ ನಮಗೆ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

ತುಮಕೂರು ಜಿಲ್ಲಾ ಆಸ್ಪತ್ರೆಯ ನಿರ್ಲಕ್ಷ್ಯದಿಂದಾದ ಗರ್ಭಿಣಿ ಹಾಗೂ ಅವಳಿ ಮಕ್ಕಳ ಸಾವಿನ ಕುರಿತು ಮಾತನಾಡಿದ ಅವರು, “ಇದು ಸರ್ಕಾರದ ವೈಫಲ್ಯ. ಈ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಿಲ್ಲ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಅದಕ್ಕೆ ಇದೇ ಸಾಕ್ಷಿ. ಸರ್ಕಾರಕ್ಕೆ ಜನರ ನೋವು, ಭಾವನೆ ಗೊತ್ತಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸುವುದು ತಿಳಿದಿಲ್ಲ” ಎಂದು ವಿವಾದಿಸಿದ್ದಾರೆ.

“ಸರ್ಕಾರ ಈಗ ಅಧಿಕಾರಿಗಳ ಅಮಾನತು ಮಾಡುವುದಾದರೆ, ಆಕ್ಸಿಜನ್ ದುರಂತ ಸಂದರ್ಭದಲ್ಲಿ 36 ಜನ ಸತ್ತಾಗ ಯಾಕೆ ಅಮಾನತು ಮಾಡಲಿಲ್ಲ. ಆಗ ಯಾವುದೇ ಅಧಿಕಾರಿ ವಿರುದ್ಧ ಕ್ರಮವೂ ಇಲ್ಲ, ಸಚಿವರ ರಾಜೀನಾಮೆ ಇಲ್ಲ. ನಾನು ಸಂತ್ರಸ್ತ ಕುಟುಂಬಗಳಿಗೆ ಹೋಗಿ ತಲಾ 1 ಲಕ್ಷ ಚೆಕ್ ನೀಡಿ ಸಾಂತ್ವನ ಹೇಳಿದೆ. ಕೋವಿಡ್‌ನಿಂದ ಸತ್ತವರಿಗೂ ಸರ್ಕಾರ ಈವರೆಗೂ ಪರಿಹಾರ ಹಣ ನೀಡಿಲ್ಲ. ರಾಜ್ಯದ ಎಲ್ಲಾ ಭಾಗಗಳಿಂದ ಈ ವಿಚಾರವಾಗಿ ಮಾಹಿತಿ ಸಂಗ್ರಹಿಸಿ ನಂತರ ಈ ಬಗ್ಗೆ ಮಾತನಾಡುತ್ತೇನೆ. ಇದು ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ಇಡೀ ಸರ್ಕಾರದ ವೈಫಲ್ಯ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...