Homeಕರ್ನಾಟಕಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

ಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

- Advertisement -
- Advertisement -

ಬೆಂಗಳೂರು: ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿನ ರೈತಪರ ನೀತಿಯನ್ನು ಕೇಂದ್ರ ಸರ್ಕಾರ ಮೆಚ್ಚಿ ಪ್ರಶಸ್ತಿ ನೀಡಿದೆ. ಇದನ್ನು ಕರ್ನಾಟಕ ಮಾಡೆಲ್ ಎಂದೂ ಬಣ್ಣಿಸಿ, ಇತರ ರಾಜ್ಯಗಳಿಗೂ ಇದನ್ನು ಅನುಸರಿಸುವಂತೆ ಹೇಳಿತ್ತು. ಈಗ ರಾಜ್ಯ ಸರ್ಕಾರ ಈ ಯೋಜನೆ ಬಗ್ಗೆ ಯಾವುದೇ ತನಿಖೆ ನಡೆಸಿದರೂ ನಾನು ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅಕ್ರಮ ನಡೆದಿದೆ, ಇದರ ತನಿಖೆ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರವು ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಈ ಕುರಿತು ಪ್ರಸ್ತಾಪಿಸಿರುವ ಬಗ್ಗೆ ಮಾಧ್ಯಮಗಳು ಶನಿವಾರ ಪ್ರಶ್ನಿಸಿದಾಗ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಚರಿತ್ರೆಯನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ನಾನು ಯಾವ ಯೋಜನೆ ಮಾಡಿದ್ದೇನೆ, ಎಷ್ಟು ಪಾರದರ್ಶಕವಾಗಿ ಮಾಡಿದ್ದೇನೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿದಿದೆ. ಸೋಲಾರ್ ಪಾರ್ಕ್ ಯೋಜನೆಯಲ್ಲಿ ಬಳಕೆಯಾದ ಜಮೀನು ರೈತರ ಬಳಿಯೇ ಉಳಿದುಕೊಂಡು, ರೈತರೇ 20 ಮೆಗವ್ಯಾಟ್ ವಿದ್ಯುತ್ ಉತ್ಪಾದಿಸುವಂತಾಗಿದೆ” ಎಂದು ವಿವರಿಸಿದ್ದಾರೆ.

“ಈ ಯೋಜನೆ ಬಗ್ಗೆ ಈಗಿನ ಸಚಿವರು ಹಾಗೂ ಮಂತ್ರಿಗಳಿಗೆ ಎಷ್ಟು ಗೊತ್ತಿದೆಯೋ, ಇಲ್ಲವೋ ತಿಳಿದಿಲ್ಲ. ಅವರು ದಾಖಲೆಗಳನ್ನು ತೆಗೆದು ನೋಡಲಿ. ರಾಷ್ಟ್ರೀಯ ಮಟ್ಟದ ಇಂಧನ ಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್, ಇತರ ಸಚಿವರು ಹಾಗೂ ಪ್ರಧಾನಿಗಳು ನನಗೆ ಪ್ರಶಸ್ತಿ ನೀಡಿದ್ದಾರೆ. ಈ ಯೋಜನೆಯಲ್ಲಿ ರೈತರ ಪರ ತೆಗೆದುಕೊಳ್ಳಲಾದ ನೀತಿಯನ್ನು ಕರ್ನಾಟಕದ ಮಾಡೆಲ್ ಎಂದು ಕರೆದು ಎಲ್ಲಾ ರಾಜ್ಯಗಳು ಇದನ್ನು ಪಾಲಿಸುವಂತೆ ಪತ್ರ ಬರೆಯಲಾಗಿತ್ತು. ಈ ದಾಖಲೆ ನನ್ನ ಬಳಿಯೇ ಇದೆ” ಎಂದು ಮಾಹಿತಿ ನೀಡಿದ್ದಾರೆ.

“ಈ ಯೋಜನೆಗೆ 6 ತಿಂಗಳ ಮುಂಚಿತವಾಗಿ ಜಾಹೀರಾತು ನೀಡಿ ಟೆಂಡರ್ ಕರೆಯಲಾಗಿತ್ತು. ಇದೆಲ್ಲವನ್ನೂ ರಾಜ್ಯದ ಅಧಿಕಾರಿಗಳು ಮಾಡಿದ್ದರು. ಈಗಿನ ಇಲಾಖೆ ಕಾರ್ಯದರ್ಶಿಗಳು, ಸರ್ಕಾರ ಯಾರನ್ನೂ ಕೆಆರ್‌ಸಿ ಮುಖ್ಯಸ್ಥರನ್ನಾಗಿ ಮಾಡಿದೆಯೋ ಅವರೂ ಈ ಯೋಜನೆ ಭಾಗವಾಗಿದ್ದರು. ಅವರನ್ನೇ ಈ ಯೋಜನೆ ಬಗ್ಗೆ ಕೇಳಲಿ, ತನಿಖೆ ಮಾಡಲಿ. ಈ ಯೋಜನೆಯಲ್ಲಿ ನಾನು ಸಣ್ಣ ತಪ್ಪು ಮಾಡಿದ್ದರೂ ಎಂತಹುದೇ ಶಿಕ್ಷೆಗೆ ನಾನು ಬದ್ಧ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ ಉತ್ಪಾದನೆ ಎಷ್ಟಿತ್ತು? ಜವಾಬ್ದಾರಿ ಬಿಡುವಾಗ ಉತ್ಪಾದನೆ ಎಷ್ಟಕ್ಕೆ ಏರಿಕೆಯಾಗಿತ್ತು ಎಂದು ಈಗ ಮಾತನಾಡುವುದಿಲ್ಲ. ಎಲ್ಲ ದಾಖಲೆಗಳು ನನ್ನ ಬಳಿಯೇ ಇವೆ. ಯಾವುದೇ ರೀತಿಯ ತನಿಖೆಗೂ ಸಿದ್ಧ. ನಾನು ಅದನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

“ನಾನು ಇಂಧನ ಇಲಾಖೆಯಲ್ಲಿ ಮಾಡಿರುವ ಕೆಲಸದ ಸತ್ಯಾಂಶ ಮುಚ್ಚಿಹಾಕಿದರೆ ಅದರ ಪರಿಣಾಮ ಅವರಿಗೆ ತಗುಲುತ್ತದೆ. ಸತ್ಯಾಂಶವನ್ನು ಅವರು ಮುಚ್ಚಿಹಾಕಬಾರದು. ಈಗ ಇಡೀ ರಾಜ್ಯದಲ್ಲಿ ಯಾವ್ಯಾವ ಹಗರಣ ನಡೆದಿವೆ, ಬಿಟ್ ಕಾಯಿನ್ ಪ್ರಕರಣದಿಂದ ಹಿಡಿದು ಏನೆಲ್ಲ ಪ್ರಕರಣಗಳನ್ನು ಅವರು ಹೇಗೆಲ್ಲಾ ಮುಚ್ಚಿಹಾಕಿದ್ದಾರೆ ಎಂದು ಗೊತ್ತಿದೆ. ಅವರು ಏನು ಮಾಡುತ್ತಾರೋ ಮಾಡಲಿ, ಸಮಯ ಬಂದಾಗ ನಾನು ಮಾತನಾಡುತ್ತೇನೆ” ಎಂದಿದ್ದಾರೆ.

ಇ.ಡಿ. ಸಮನ್ಸ್ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, “ಇ.ಡಿ. ಅವರಿಗೆ ನಾನು ಎಲ್ಲಾ ಉತ್ತರ ನೀಡಿದ್ದೆ. ಆದರೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖಾಧಿಕಾರಿ ಬದಲಾಗಿದ್ದಾರೆ ಎಂದು 7ನೇ ತಾರೀಖು ವಿಚಾರಣೆಗೆ ಹಾಜರಾಗುವಂತೆ ನನಗೆ ಹಾಗೂ ನನ್ನ ಸಹೋದರನಿಗೆ ನೊಟೀಸ್ ನೀಡಿದ್ದಾರೆ. ಅವರು ಕೆಲವು ದಾಖಲೆ ಕೇಳಿದ್ದು ಅವುಗಳನ್ನು ಸಲ್ಲಿಸಿದ್ದೇನೆ. ಇನ್ನು ಕೆಲವು ದಾಖಲೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ಕಳಿಸುತ್ತೇನೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ. ಪದೇ ಪದೇ ನಮಗೆ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

ತುಮಕೂರು ಜಿಲ್ಲಾ ಆಸ್ಪತ್ರೆಯ ನಿರ್ಲಕ್ಷ್ಯದಿಂದಾದ ಗರ್ಭಿಣಿ ಹಾಗೂ ಅವಳಿ ಮಕ್ಕಳ ಸಾವಿನ ಕುರಿತು ಮಾತನಾಡಿದ ಅವರು, “ಇದು ಸರ್ಕಾರದ ವೈಫಲ್ಯ. ಈ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಿಲ್ಲ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಅದಕ್ಕೆ ಇದೇ ಸಾಕ್ಷಿ. ಸರ್ಕಾರಕ್ಕೆ ಜನರ ನೋವು, ಭಾವನೆ ಗೊತ್ತಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸುವುದು ತಿಳಿದಿಲ್ಲ” ಎಂದು ವಿವಾದಿಸಿದ್ದಾರೆ.

“ಸರ್ಕಾರ ಈಗ ಅಧಿಕಾರಿಗಳ ಅಮಾನತು ಮಾಡುವುದಾದರೆ, ಆಕ್ಸಿಜನ್ ದುರಂತ ಸಂದರ್ಭದಲ್ಲಿ 36 ಜನ ಸತ್ತಾಗ ಯಾಕೆ ಅಮಾನತು ಮಾಡಲಿಲ್ಲ. ಆಗ ಯಾವುದೇ ಅಧಿಕಾರಿ ವಿರುದ್ಧ ಕ್ರಮವೂ ಇಲ್ಲ, ಸಚಿವರ ರಾಜೀನಾಮೆ ಇಲ್ಲ. ನಾನು ಸಂತ್ರಸ್ತ ಕುಟುಂಬಗಳಿಗೆ ಹೋಗಿ ತಲಾ 1 ಲಕ್ಷ ಚೆಕ್ ನೀಡಿ ಸಾಂತ್ವನ ಹೇಳಿದೆ. ಕೋವಿಡ್‌ನಿಂದ ಸತ್ತವರಿಗೂ ಸರ್ಕಾರ ಈವರೆಗೂ ಪರಿಹಾರ ಹಣ ನೀಡಿಲ್ಲ. ರಾಜ್ಯದ ಎಲ್ಲಾ ಭಾಗಗಳಿಂದ ಈ ವಿಚಾರವಾಗಿ ಮಾಹಿತಿ ಸಂಗ್ರಹಿಸಿ ನಂತರ ಈ ಬಗ್ಗೆ ಮಾತನಾಡುತ್ತೇನೆ. ಇದು ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ಇಡೀ ಸರ್ಕಾರದ ವೈಫಲ್ಯ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...