Homeಕರ್ನಾಟಕಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

ಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

- Advertisement -
- Advertisement -

ಬೆಂಗಳೂರು: ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿನ ರೈತಪರ ನೀತಿಯನ್ನು ಕೇಂದ್ರ ಸರ್ಕಾರ ಮೆಚ್ಚಿ ಪ್ರಶಸ್ತಿ ನೀಡಿದೆ. ಇದನ್ನು ಕರ್ನಾಟಕ ಮಾಡೆಲ್ ಎಂದೂ ಬಣ್ಣಿಸಿ, ಇತರ ರಾಜ್ಯಗಳಿಗೂ ಇದನ್ನು ಅನುಸರಿಸುವಂತೆ ಹೇಳಿತ್ತು. ಈಗ ರಾಜ್ಯ ಸರ್ಕಾರ ಈ ಯೋಜನೆ ಬಗ್ಗೆ ಯಾವುದೇ ತನಿಖೆ ನಡೆಸಿದರೂ ನಾನು ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅಕ್ರಮ ನಡೆದಿದೆ, ಇದರ ತನಿಖೆ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರವು ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಈ ಕುರಿತು ಪ್ರಸ್ತಾಪಿಸಿರುವ ಬಗ್ಗೆ ಮಾಧ್ಯಮಗಳು ಶನಿವಾರ ಪ್ರಶ್ನಿಸಿದಾಗ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಚರಿತ್ರೆಯನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ನಾನು ಯಾವ ಯೋಜನೆ ಮಾಡಿದ್ದೇನೆ, ಎಷ್ಟು ಪಾರದರ್ಶಕವಾಗಿ ಮಾಡಿದ್ದೇನೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿದಿದೆ. ಸೋಲಾರ್ ಪಾರ್ಕ್ ಯೋಜನೆಯಲ್ಲಿ ಬಳಕೆಯಾದ ಜಮೀನು ರೈತರ ಬಳಿಯೇ ಉಳಿದುಕೊಂಡು, ರೈತರೇ 20 ಮೆಗವ್ಯಾಟ್ ವಿದ್ಯುತ್ ಉತ್ಪಾದಿಸುವಂತಾಗಿದೆ” ಎಂದು ವಿವರಿಸಿದ್ದಾರೆ.

“ಈ ಯೋಜನೆ ಬಗ್ಗೆ ಈಗಿನ ಸಚಿವರು ಹಾಗೂ ಮಂತ್ರಿಗಳಿಗೆ ಎಷ್ಟು ಗೊತ್ತಿದೆಯೋ, ಇಲ್ಲವೋ ತಿಳಿದಿಲ್ಲ. ಅವರು ದಾಖಲೆಗಳನ್ನು ತೆಗೆದು ನೋಡಲಿ. ರಾಷ್ಟ್ರೀಯ ಮಟ್ಟದ ಇಂಧನ ಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್, ಇತರ ಸಚಿವರು ಹಾಗೂ ಪ್ರಧಾನಿಗಳು ನನಗೆ ಪ್ರಶಸ್ತಿ ನೀಡಿದ್ದಾರೆ. ಈ ಯೋಜನೆಯಲ್ಲಿ ರೈತರ ಪರ ತೆಗೆದುಕೊಳ್ಳಲಾದ ನೀತಿಯನ್ನು ಕರ್ನಾಟಕದ ಮಾಡೆಲ್ ಎಂದು ಕರೆದು ಎಲ್ಲಾ ರಾಜ್ಯಗಳು ಇದನ್ನು ಪಾಲಿಸುವಂತೆ ಪತ್ರ ಬರೆಯಲಾಗಿತ್ತು. ಈ ದಾಖಲೆ ನನ್ನ ಬಳಿಯೇ ಇದೆ” ಎಂದು ಮಾಹಿತಿ ನೀಡಿದ್ದಾರೆ.

“ಈ ಯೋಜನೆಗೆ 6 ತಿಂಗಳ ಮುಂಚಿತವಾಗಿ ಜಾಹೀರಾತು ನೀಡಿ ಟೆಂಡರ್ ಕರೆಯಲಾಗಿತ್ತು. ಇದೆಲ್ಲವನ್ನೂ ರಾಜ್ಯದ ಅಧಿಕಾರಿಗಳು ಮಾಡಿದ್ದರು. ಈಗಿನ ಇಲಾಖೆ ಕಾರ್ಯದರ್ಶಿಗಳು, ಸರ್ಕಾರ ಯಾರನ್ನೂ ಕೆಆರ್‌ಸಿ ಮುಖ್ಯಸ್ಥರನ್ನಾಗಿ ಮಾಡಿದೆಯೋ ಅವರೂ ಈ ಯೋಜನೆ ಭಾಗವಾಗಿದ್ದರು. ಅವರನ್ನೇ ಈ ಯೋಜನೆ ಬಗ್ಗೆ ಕೇಳಲಿ, ತನಿಖೆ ಮಾಡಲಿ. ಈ ಯೋಜನೆಯಲ್ಲಿ ನಾನು ಸಣ್ಣ ತಪ್ಪು ಮಾಡಿದ್ದರೂ ಎಂತಹುದೇ ಶಿಕ್ಷೆಗೆ ನಾನು ಬದ್ಧ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ ಉತ್ಪಾದನೆ ಎಷ್ಟಿತ್ತು? ಜವಾಬ್ದಾರಿ ಬಿಡುವಾಗ ಉತ್ಪಾದನೆ ಎಷ್ಟಕ್ಕೆ ಏರಿಕೆಯಾಗಿತ್ತು ಎಂದು ಈಗ ಮಾತನಾಡುವುದಿಲ್ಲ. ಎಲ್ಲ ದಾಖಲೆಗಳು ನನ್ನ ಬಳಿಯೇ ಇವೆ. ಯಾವುದೇ ರೀತಿಯ ತನಿಖೆಗೂ ಸಿದ್ಧ. ನಾನು ಅದನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

“ನಾನು ಇಂಧನ ಇಲಾಖೆಯಲ್ಲಿ ಮಾಡಿರುವ ಕೆಲಸದ ಸತ್ಯಾಂಶ ಮುಚ್ಚಿಹಾಕಿದರೆ ಅದರ ಪರಿಣಾಮ ಅವರಿಗೆ ತಗುಲುತ್ತದೆ. ಸತ್ಯಾಂಶವನ್ನು ಅವರು ಮುಚ್ಚಿಹಾಕಬಾರದು. ಈಗ ಇಡೀ ರಾಜ್ಯದಲ್ಲಿ ಯಾವ್ಯಾವ ಹಗರಣ ನಡೆದಿವೆ, ಬಿಟ್ ಕಾಯಿನ್ ಪ್ರಕರಣದಿಂದ ಹಿಡಿದು ಏನೆಲ್ಲ ಪ್ರಕರಣಗಳನ್ನು ಅವರು ಹೇಗೆಲ್ಲಾ ಮುಚ್ಚಿಹಾಕಿದ್ದಾರೆ ಎಂದು ಗೊತ್ತಿದೆ. ಅವರು ಏನು ಮಾಡುತ್ತಾರೋ ಮಾಡಲಿ, ಸಮಯ ಬಂದಾಗ ನಾನು ಮಾತನಾಡುತ್ತೇನೆ” ಎಂದಿದ್ದಾರೆ.

ಇ.ಡಿ. ಸಮನ್ಸ್ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, “ಇ.ಡಿ. ಅವರಿಗೆ ನಾನು ಎಲ್ಲಾ ಉತ್ತರ ನೀಡಿದ್ದೆ. ಆದರೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖಾಧಿಕಾರಿ ಬದಲಾಗಿದ್ದಾರೆ ಎಂದು 7ನೇ ತಾರೀಖು ವಿಚಾರಣೆಗೆ ಹಾಜರಾಗುವಂತೆ ನನಗೆ ಹಾಗೂ ನನ್ನ ಸಹೋದರನಿಗೆ ನೊಟೀಸ್ ನೀಡಿದ್ದಾರೆ. ಅವರು ಕೆಲವು ದಾಖಲೆ ಕೇಳಿದ್ದು ಅವುಗಳನ್ನು ಸಲ್ಲಿಸಿದ್ದೇನೆ. ಇನ್ನು ಕೆಲವು ದಾಖಲೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ಕಳಿಸುತ್ತೇನೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ. ಪದೇ ಪದೇ ನಮಗೆ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

ತುಮಕೂರು ಜಿಲ್ಲಾ ಆಸ್ಪತ್ರೆಯ ನಿರ್ಲಕ್ಷ್ಯದಿಂದಾದ ಗರ್ಭಿಣಿ ಹಾಗೂ ಅವಳಿ ಮಕ್ಕಳ ಸಾವಿನ ಕುರಿತು ಮಾತನಾಡಿದ ಅವರು, “ಇದು ಸರ್ಕಾರದ ವೈಫಲ್ಯ. ಈ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಿಲ್ಲ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಅದಕ್ಕೆ ಇದೇ ಸಾಕ್ಷಿ. ಸರ್ಕಾರಕ್ಕೆ ಜನರ ನೋವು, ಭಾವನೆ ಗೊತ್ತಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸುವುದು ತಿಳಿದಿಲ್ಲ” ಎಂದು ವಿವಾದಿಸಿದ್ದಾರೆ.

“ಸರ್ಕಾರ ಈಗ ಅಧಿಕಾರಿಗಳ ಅಮಾನತು ಮಾಡುವುದಾದರೆ, ಆಕ್ಸಿಜನ್ ದುರಂತ ಸಂದರ್ಭದಲ್ಲಿ 36 ಜನ ಸತ್ತಾಗ ಯಾಕೆ ಅಮಾನತು ಮಾಡಲಿಲ್ಲ. ಆಗ ಯಾವುದೇ ಅಧಿಕಾರಿ ವಿರುದ್ಧ ಕ್ರಮವೂ ಇಲ್ಲ, ಸಚಿವರ ರಾಜೀನಾಮೆ ಇಲ್ಲ. ನಾನು ಸಂತ್ರಸ್ತ ಕುಟುಂಬಗಳಿಗೆ ಹೋಗಿ ತಲಾ 1 ಲಕ್ಷ ಚೆಕ್ ನೀಡಿ ಸಾಂತ್ವನ ಹೇಳಿದೆ. ಕೋವಿಡ್‌ನಿಂದ ಸತ್ತವರಿಗೂ ಸರ್ಕಾರ ಈವರೆಗೂ ಪರಿಹಾರ ಹಣ ನೀಡಿಲ್ಲ. ರಾಜ್ಯದ ಎಲ್ಲಾ ಭಾಗಗಳಿಂದ ಈ ವಿಚಾರವಾಗಿ ಮಾಹಿತಿ ಸಂಗ್ರಹಿಸಿ ನಂತರ ಈ ಬಗ್ಗೆ ಮಾತನಾಡುತ್ತೇನೆ. ಇದು ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ಇಡೀ ಸರ್ಕಾರದ ವೈಫಲ್ಯ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...