Homeಕರ್ನಾಟಕಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

ಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

- Advertisement -
- Advertisement -

ಬೆಂಗಳೂರು: ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿನ ರೈತಪರ ನೀತಿಯನ್ನು ಕೇಂದ್ರ ಸರ್ಕಾರ ಮೆಚ್ಚಿ ಪ್ರಶಸ್ತಿ ನೀಡಿದೆ. ಇದನ್ನು ಕರ್ನಾಟಕ ಮಾಡೆಲ್ ಎಂದೂ ಬಣ್ಣಿಸಿ, ಇತರ ರಾಜ್ಯಗಳಿಗೂ ಇದನ್ನು ಅನುಸರಿಸುವಂತೆ ಹೇಳಿತ್ತು. ಈಗ ರಾಜ್ಯ ಸರ್ಕಾರ ಈ ಯೋಜನೆ ಬಗ್ಗೆ ಯಾವುದೇ ತನಿಖೆ ನಡೆಸಿದರೂ ನಾನು ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅಕ್ರಮ ನಡೆದಿದೆ, ಇದರ ತನಿಖೆ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರವು ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಈ ಕುರಿತು ಪ್ರಸ್ತಾಪಿಸಿರುವ ಬಗ್ಗೆ ಮಾಧ್ಯಮಗಳು ಶನಿವಾರ ಪ್ರಶ್ನಿಸಿದಾಗ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಚರಿತ್ರೆಯನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ನಾನು ಯಾವ ಯೋಜನೆ ಮಾಡಿದ್ದೇನೆ, ಎಷ್ಟು ಪಾರದರ್ಶಕವಾಗಿ ಮಾಡಿದ್ದೇನೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿದಿದೆ. ಸೋಲಾರ್ ಪಾರ್ಕ್ ಯೋಜನೆಯಲ್ಲಿ ಬಳಕೆಯಾದ ಜಮೀನು ರೈತರ ಬಳಿಯೇ ಉಳಿದುಕೊಂಡು, ರೈತರೇ 20 ಮೆಗವ್ಯಾಟ್ ವಿದ್ಯುತ್ ಉತ್ಪಾದಿಸುವಂತಾಗಿದೆ” ಎಂದು ವಿವರಿಸಿದ್ದಾರೆ.

“ಈ ಯೋಜನೆ ಬಗ್ಗೆ ಈಗಿನ ಸಚಿವರು ಹಾಗೂ ಮಂತ್ರಿಗಳಿಗೆ ಎಷ್ಟು ಗೊತ್ತಿದೆಯೋ, ಇಲ್ಲವೋ ತಿಳಿದಿಲ್ಲ. ಅವರು ದಾಖಲೆಗಳನ್ನು ತೆಗೆದು ನೋಡಲಿ. ರಾಷ್ಟ್ರೀಯ ಮಟ್ಟದ ಇಂಧನ ಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್, ಇತರ ಸಚಿವರು ಹಾಗೂ ಪ್ರಧಾನಿಗಳು ನನಗೆ ಪ್ರಶಸ್ತಿ ನೀಡಿದ್ದಾರೆ. ಈ ಯೋಜನೆಯಲ್ಲಿ ರೈತರ ಪರ ತೆಗೆದುಕೊಳ್ಳಲಾದ ನೀತಿಯನ್ನು ಕರ್ನಾಟಕದ ಮಾಡೆಲ್ ಎಂದು ಕರೆದು ಎಲ್ಲಾ ರಾಜ್ಯಗಳು ಇದನ್ನು ಪಾಲಿಸುವಂತೆ ಪತ್ರ ಬರೆಯಲಾಗಿತ್ತು. ಈ ದಾಖಲೆ ನನ್ನ ಬಳಿಯೇ ಇದೆ” ಎಂದು ಮಾಹಿತಿ ನೀಡಿದ್ದಾರೆ.

“ಈ ಯೋಜನೆಗೆ 6 ತಿಂಗಳ ಮುಂಚಿತವಾಗಿ ಜಾಹೀರಾತು ನೀಡಿ ಟೆಂಡರ್ ಕರೆಯಲಾಗಿತ್ತು. ಇದೆಲ್ಲವನ್ನೂ ರಾಜ್ಯದ ಅಧಿಕಾರಿಗಳು ಮಾಡಿದ್ದರು. ಈಗಿನ ಇಲಾಖೆ ಕಾರ್ಯದರ್ಶಿಗಳು, ಸರ್ಕಾರ ಯಾರನ್ನೂ ಕೆಆರ್‌ಸಿ ಮುಖ್ಯಸ್ಥರನ್ನಾಗಿ ಮಾಡಿದೆಯೋ ಅವರೂ ಈ ಯೋಜನೆ ಭಾಗವಾಗಿದ್ದರು. ಅವರನ್ನೇ ಈ ಯೋಜನೆ ಬಗ್ಗೆ ಕೇಳಲಿ, ತನಿಖೆ ಮಾಡಲಿ. ಈ ಯೋಜನೆಯಲ್ಲಿ ನಾನು ಸಣ್ಣ ತಪ್ಪು ಮಾಡಿದ್ದರೂ ಎಂತಹುದೇ ಶಿಕ್ಷೆಗೆ ನಾನು ಬದ್ಧ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ ಉತ್ಪಾದನೆ ಎಷ್ಟಿತ್ತು? ಜವಾಬ್ದಾರಿ ಬಿಡುವಾಗ ಉತ್ಪಾದನೆ ಎಷ್ಟಕ್ಕೆ ಏರಿಕೆಯಾಗಿತ್ತು ಎಂದು ಈಗ ಮಾತನಾಡುವುದಿಲ್ಲ. ಎಲ್ಲ ದಾಖಲೆಗಳು ನನ್ನ ಬಳಿಯೇ ಇವೆ. ಯಾವುದೇ ರೀತಿಯ ತನಿಖೆಗೂ ಸಿದ್ಧ. ನಾನು ಅದನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

“ನಾನು ಇಂಧನ ಇಲಾಖೆಯಲ್ಲಿ ಮಾಡಿರುವ ಕೆಲಸದ ಸತ್ಯಾಂಶ ಮುಚ್ಚಿಹಾಕಿದರೆ ಅದರ ಪರಿಣಾಮ ಅವರಿಗೆ ತಗುಲುತ್ತದೆ. ಸತ್ಯಾಂಶವನ್ನು ಅವರು ಮುಚ್ಚಿಹಾಕಬಾರದು. ಈಗ ಇಡೀ ರಾಜ್ಯದಲ್ಲಿ ಯಾವ್ಯಾವ ಹಗರಣ ನಡೆದಿವೆ, ಬಿಟ್ ಕಾಯಿನ್ ಪ್ರಕರಣದಿಂದ ಹಿಡಿದು ಏನೆಲ್ಲ ಪ್ರಕರಣಗಳನ್ನು ಅವರು ಹೇಗೆಲ್ಲಾ ಮುಚ್ಚಿಹಾಕಿದ್ದಾರೆ ಎಂದು ಗೊತ್ತಿದೆ. ಅವರು ಏನು ಮಾಡುತ್ತಾರೋ ಮಾಡಲಿ, ಸಮಯ ಬಂದಾಗ ನಾನು ಮಾತನಾಡುತ್ತೇನೆ” ಎಂದಿದ್ದಾರೆ.

ಇ.ಡಿ. ಸಮನ್ಸ್ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, “ಇ.ಡಿ. ಅವರಿಗೆ ನಾನು ಎಲ್ಲಾ ಉತ್ತರ ನೀಡಿದ್ದೆ. ಆದರೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖಾಧಿಕಾರಿ ಬದಲಾಗಿದ್ದಾರೆ ಎಂದು 7ನೇ ತಾರೀಖು ವಿಚಾರಣೆಗೆ ಹಾಜರಾಗುವಂತೆ ನನಗೆ ಹಾಗೂ ನನ್ನ ಸಹೋದರನಿಗೆ ನೊಟೀಸ್ ನೀಡಿದ್ದಾರೆ. ಅವರು ಕೆಲವು ದಾಖಲೆ ಕೇಳಿದ್ದು ಅವುಗಳನ್ನು ಸಲ್ಲಿಸಿದ್ದೇನೆ. ಇನ್ನು ಕೆಲವು ದಾಖಲೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ಕಳಿಸುತ್ತೇನೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ. ಪದೇ ಪದೇ ನಮಗೆ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

ತುಮಕೂರು ಜಿಲ್ಲಾ ಆಸ್ಪತ್ರೆಯ ನಿರ್ಲಕ್ಷ್ಯದಿಂದಾದ ಗರ್ಭಿಣಿ ಹಾಗೂ ಅವಳಿ ಮಕ್ಕಳ ಸಾವಿನ ಕುರಿತು ಮಾತನಾಡಿದ ಅವರು, “ಇದು ಸರ್ಕಾರದ ವೈಫಲ್ಯ. ಈ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಿಲ್ಲ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಅದಕ್ಕೆ ಇದೇ ಸಾಕ್ಷಿ. ಸರ್ಕಾರಕ್ಕೆ ಜನರ ನೋವು, ಭಾವನೆ ಗೊತ್ತಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸುವುದು ತಿಳಿದಿಲ್ಲ” ಎಂದು ವಿವಾದಿಸಿದ್ದಾರೆ.

“ಸರ್ಕಾರ ಈಗ ಅಧಿಕಾರಿಗಳ ಅಮಾನತು ಮಾಡುವುದಾದರೆ, ಆಕ್ಸಿಜನ್ ದುರಂತ ಸಂದರ್ಭದಲ್ಲಿ 36 ಜನ ಸತ್ತಾಗ ಯಾಕೆ ಅಮಾನತು ಮಾಡಲಿಲ್ಲ. ಆಗ ಯಾವುದೇ ಅಧಿಕಾರಿ ವಿರುದ್ಧ ಕ್ರಮವೂ ಇಲ್ಲ, ಸಚಿವರ ರಾಜೀನಾಮೆ ಇಲ್ಲ. ನಾನು ಸಂತ್ರಸ್ತ ಕುಟುಂಬಗಳಿಗೆ ಹೋಗಿ ತಲಾ 1 ಲಕ್ಷ ಚೆಕ್ ನೀಡಿ ಸಾಂತ್ವನ ಹೇಳಿದೆ. ಕೋವಿಡ್‌ನಿಂದ ಸತ್ತವರಿಗೂ ಸರ್ಕಾರ ಈವರೆಗೂ ಪರಿಹಾರ ಹಣ ನೀಡಿಲ್ಲ. ರಾಜ್ಯದ ಎಲ್ಲಾ ಭಾಗಗಳಿಂದ ಈ ವಿಚಾರವಾಗಿ ಮಾಹಿತಿ ಸಂಗ್ರಹಿಸಿ ನಂತರ ಈ ಬಗ್ಗೆ ಮಾತನಾಡುತ್ತೇನೆ. ಇದು ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ಇಡೀ ಸರ್ಕಾರದ ವೈಫಲ್ಯ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...