Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಪಾವಗಡ: ಈ ಬಾರಿಯೂ ವೆಂಕಟರಮಣಪ್ಪ - ತಿಮ್ಮರಾಯಪ್ಪ ಕುಟುಂಬದ ನಡುವೆಯೇ ಹಣಾಹಣಿ

ಪಾವಗಡ: ಈ ಬಾರಿಯೂ ವೆಂಕಟರಮಣಪ್ಪ – ತಿಮ್ಮರಾಯಪ್ಪ ಕುಟುಂಬದ ನಡುವೆಯೇ ಹಣಾಹಣಿ

- Advertisement -
- Advertisement -

ಆಂಧ್ರ ಪ್ರದೇಶದ ಗಡಿಗೆ ಅಂಟಿಕೊಂಡಿರುವ, ಹೆಚ್ಚಾಗಿ ತೆಲುಗು ಭಾಷಿಕರೆ ಇರುವ ತುಮಕೂರು ಜಿಲ್ಲೆಯ ಹಿಂದುಳಿದ ತಾಲ್ಲೂಕು ಎನಿಸಿಕೊಂಡ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಬಿರುಸು ಪಡೆದಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪಾವಗಡ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪನವರು ಸದ್ಯ ಶಾಸಕರಾಗಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಅವರು ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು ತಮ್ಮ ಪುತ್ರ ಹೆಚ್.ವಿ ವೆಂಕಟೇಶ್‌ರವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವಂತೆ ನೋಡಿಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಕೂದಲೆಳೆ ಅಂತರದಲ್ಲಿ ಸೋಲು ಕಂಡ ಜೆಡಿಎಸ್ ಪಕ್ಷದ ತಿಮ್ಮರಾಯಪ್ಪನವರು ಮತ್ತೆ ಕಣಕ್ಕೆ ಧುಮುಕಿದ್ದಾರೆ. ಕ್ಷೇತ್ರದ ಸ್ಥಿತಿಗತಿ ಹೀಗಿದೆ.

ಇದುವರೆಗೂ ಪಾವಗಡದಲ್ಲಿ 15 ಚುನಾವಣೆಗಳು ನಡೆದಿವೆ. ಅದರಲ್ಲಿ 10 ಬಾರಿ ಕಾಂಗ್ರೆಸ್ ಪಕ್ಷವೇ ಜಯ ಗಳಿಸಿದೆ. ಜೆಡಿಎಸ್ ಎರಡು ಬಾರಿ, ಜನತಾದಳ ಮತ್ತು ಜನತಾ ಪಕ್ಷ ತಲಾ ಒಮ್ಮೆ ಮತ್ತು ಒಂದು ಬಾರಿ ಪಕ್ಷೇತರ ಅಭ್ಯರ್ಥಿ ಜಯ ಗಳಿಸಿದ್ದಾರೆ. ಈ ಕ್ಷೇತ್ರದ ವಿಶೇಷವೆಂದರೆ ಇಲ್ಲಿ ಯಾರೂ ಸಹ ಸತತವಾಗಿ ಎರಡನೇ ಬಾರಿ ಗೆಲ್ಲಲು ಸಾಧ್ಯವಾಗಿಲ್ಲ.

1951ರಲ್ಲಿ ಮೈಸೂರು ಸಂಸ್ಥಾನದ ಭಾಗವಾಗಿದ್ದಾಗ ಪಾವಗಡ ದ್ವಿಸದಸ್ಯತ್ವ ಹೊಂದಿತ್ತು. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. 1978ರಲ್ಲಿ ಇಂದಿರಾ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವವರೆಗೂ ಕಾಂಗ್ರೆಸ್ ಪಾರುಪತ್ಯ ಮೆರೆದಿತ್ತು. ಆದರೆ 1983ರಲ್ಲಿ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿ ಉಗ್ರನರಸಿಂಹಪ್ಪ ಗೆಲುವು ಕಂಡರು. 1985ರಲ್ಲಿ ಸೋಮ್ಲಾ ನಾಯ್ಕ್ ಜನತಾ ಪಕ್ಷದಿಂದ ಆಯ್ಕೆಯಾಗಿದ್ದರು.

1989ರಲ್ಲಿ ವೆಂಕಟರಮಣಪ್ಪನವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. 1994ರಲ್ಲಿ ಸೋಮ್ಲಾ ನಾಯಕ್ ಜನತಾದಳದಿಂದ ಜಯ ಕಂಡರೆ 1999ರಲ್ಲಿ ಮತ್ತೆ ವೆಂಕಟರಮಣಪ್ಪನವರು ಕಾಂಗ್ರೆಸ್‌ನಿಂದ ಆರಿಸಿಬಂದರು. 2004ರಲ್ಲಿ ಜೆಡಿಎಸ್‌ನ ಕೆ.ಎಂ ತಿಮ್ಮರಾಯಪ್ಪನವರು ಗೆದ್ದುಬಂದರು. 2008ರಲ್ಲಿ ವೆಂಕಟರಮಣಪ್ಪನವರ ಬದಲು ಡಾ.ಗಾಯಿತ್ರಿ ದೇವಿ ಎಂಬುವವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಸೋಮ್ಲಾ ನಾಯ್ಕ್ ಬಿಜೆಪಿ ಸೇರಿ ಅಭ್ಯರ್ಥಿಯಾದರು. ಜೆಡಿಎಸ್‌ನಿಂದ ತಿಮ್ಮರಾಯಪ್ಪನವರು ಕಣಕ್ಕಿಳಿದಿದ್ದರು. ಆದರೆ ವೆಂಕಟರಮಣಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಕಂಡು ಮೂರನೇ ಬಾರಿಗೆ ಶಾಸಕರಾದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕನೇ ಸ್ಥಾನಕ್ಕೆ ಕುಸಿದಿತ್ತು!

2013ರ ಚುನಾವಣೆಯಲ್ಲಿ ವೆಂಕಟರಮಣಪ್ಪನವರ ಬದಲಿಗೆ ಅವರ ಪುತ್ರ ಹೆಚ್.ವಿ ವೆಂಕಟೇಶ್‌ ಕಾಂಗ್ರೆಸ್ ಅಭ್ಯರ್ಥಿಯಾದರು. ಜೆಡಿಎಸ್‌ನಿಂದ ತಿಮ್ಮರಾಯಪ್ಪನವರು ಕಣಕ್ಕಿಳಿದರು. ಇಬ್ಬರ ನಡುವಿನ ಪೈಪೋಟಿಯಲ್ಲಿ ತಿಮ್ಮರಾಯಪ್ಪನವರು 4,863 ಮತಗಳ ಅಂತರದಲ್ಲಿ ಗೆದ್ದು ಎರಡನೇ ಭಾರಿಗೆ ಶಾಸಕರಾದರು.

2018ರಲ್ಲಿ ಕಾಂಗ್ರೆಸ್‌ನಿಂದ ಮತ್ತೆ ವೆಂಕಟರಮಣಪ್ಪನವರು ಕಣಕ್ಕಿಳಿದರು. ಜೆಡಿಎಸ್‌ನ ತಿಮ್ಮರಾಯಪ್ಪನವರು ಎದುರಾಳಿಯಾಗಿದ್ದರು. ಇವರಿಬ್ಬರ ನಡುವಿನ ಜಿದ್ದಾಜಿದ್ದಿನ ಹೋರಾಟದಲ್ಲಿ ವೆಂಕಟರಮಣಪ್ಪನವರು 72,974 ಮತಗಳನ್ನು ಪಡೆದರೆ ತಿಮ್ಮರಾಯಪ್ಪನವರು 72,565 ಮತಗಳನ್ನು ಪಡೆದು ಕೇವಲ 409 ಮತಗಳ ಅಂತರದಿಂದ ಸೋಲುಂಡರು. ವೆಂಕಟರಮಣಪ್ಪ ನಾಲ್ಕನೇ ಬಾರಿಗೆ ಶಾಸಕರಾಗಿ, ಸಚಿವರೂ ಆಗಿದ್ದರು.

ಒಟ್ಟು 2 ಲಕ್ಷ ಮತಗಳಿರುವ ಪಾವಗಡ ಪ.ಜಾ ಮೀಸಲು ಕ್ಷೇತ್ರವಾಗಿದೆ. ಪರಿಶಿಷ್ಟ ಜಾತಿಯ 55,000 ಮತಗಳಿದ್ದರೆ, ಪರಿಶಿಷ್ಟ ಪಂಗಡ 35,000 ಮತಗಳಿವೆ. 10,000 ಮುಸ್ಲಿಂ ಮತಗಳು ಇವೆ ಎನ್ನಲಾಗಿದೆ.

ಹಾಲಿ ಪರಿಸ್ಥಿತಿ

ವೆಂಕಟರಮಣಪ್ಪನವರು ಯಾವುದೇ ಅಹಂ ಇಲ್ಲದೆ ಎಲ್ಲರ ಕೈಗೆ ಸಿಗುತ್ತಾರೆ. ಜನರ ಕೆಲಸಗಳನ್ನು ಮಾಡಿಕೊಡುತ್ತಾರೆ. ಎಲ್ಲರ ಫೋನ್ ತೆಗೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತವೆ. ಆದರೆ ತಮ್ಮ ಊರಿಗೆ ರಸ್ತೆ ಕೇಳಿದ ಯುವಕನ ಕಪಾಳಕ್ಕೆ ಹೊಡೆದಿದ್ದರು, 4 ದಶಕಗಳಿಂದ ಕಾಂಗ್ರೆಸ್‌ನಲ್ಲಿ ಅವರೊಬ್ಬರೆ ಅಧಿಕಾರದಲ್ಲಿದ್ದಾರೆ ಎಂಬ ಆರೋಪಗಳು ಸಹ ಅವರ ಮೇಲಿವೆ. ಅವರ ಕುಟುಂಬ ಸದಸ್ಯರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಕೊಡಬಾರದು ಎಂಬ ಒತ್ತಾಯವನ್ನು ಸ್ಥಳೀಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮುಂದಿಟ್ಟಿದ್ದರು. ಆದರೆ ಅದಕ್ಕೆ ಸೊಪ್ಪು ಹಾಕದ ಕಾಂಗ್ರೆಸ್ ಅವರು ಪುತ್ರ ಹೆಚ್.ವಿ ವೆಂಕಟೇಶ್‌ರವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿಸಿದೆ.

ಜೆಡಿಎಸ್ ಪಕ್ಷವು ಮಾಜಿ ಶಾಸಕ ತಿಮ್ಮರಾಯಪ್ಪನವರಿಗೆ ಮತ್ತೊಂದು ಅವಕಾಶ ನೀಡಿದೆ. ಅವರು ಕ್ಷೇತ್ರದ ಸಂಪ್ರದಾಯದಂತೆ ಈ ಬಾರಿ ಜನ ತನ್ನನ್ನು ಆಯ್ಕೆ ಮಾಡುತ್ತಾರೆ ಎಂದು ನಂಬಿ ಕೆಲಸ ಮಾಡುತ್ತಿದ್ದಾರೆ.

ಕೃಷ್ಣ ನಾಯ್ಕ್ ಎಂಬುವವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜನಾರ್ದನ ರೆಡ್ಡಿಯ ಕೆಆರ್‌ಪಿಪಿ ಪಕ್ಷದಿಂದ ನೇರಳೇಕುಂಟೆ ನಾಗೇಂದ್ರ ಕುಮಾರ್ ಕಣಕ್ಕಿಳಿದಿದ್ದಾರೆ.

2023ರ ಸಾಧ್ಯತೆಗಳು

ಜೆಡಿಎಸ್ ಪಕ್ಷದ ತಿಮ್ಮರಾಯಪ್ಪ ಅವರು ಪರಿಶಿಷ್ಟ ಜಾತಿಯ ಎಡಗೈ ಸಮುದಾಯದವರಾಗಿದ್ದಾರೆ. ಕಾಂಗ್ರೆಸ್‌ನ ಹೆಚ್.ವಿ ವೆಂಕಟೇಶ್ ಬೋವಿ ಸಮುದಾಯಕ್ಕೆ ಸೇರಿದ್ದಾರೆ. ಕೆಆರ್‌ಪಿಪಿ ಪಕ್ಷದ ನಾಗೇಂದ್ರ ಕುಮಾರ್ ಸಹ ಬೋವಿ ಸಮುದಾಯದವರೆ ಆಗಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯ್ಕ್ ಲಂಬಾಣಿ ಸಮುದಾಯಕ್ಕೆ ಸೇರಿದ್ದಾರೆ. ಆದರೆ ನೇರ ಪೈಪೋಟಿ ಇರುವುದು ಜೆಡಿಎಸ್‌ನ ತಿಮ್ಮರಾಯಪ್ಪ ಮತ್ತು ಕಾಂಗ್ರೆಸ್‌ನ ಹೆಚ್.ವಿ ವೆಂಕಟೇಶ್‌ರವರ ನಡುವೆ. ಇಲ್ಲಿ ಒಮ್ಮೆ ಗೆದ್ದವರು ಮುಂದಿನ ಚುನಾವಣೆಯಲ್ಲಿ ಗೆದ್ದ ಇತಿಹಾಸವಿಲ್ಲ. ಆದರೆ ಹಾಲಿ ಅಭ್ಯರ್ಥಿಗಳಿಬ್ಬರೂ ತಮ್ಮ ಹಿಂದಿನ ಚುನಾವಣೆಯಲ್ಲಿ ಸೋಲು ಕಂಡವರೆ ಆಗಿದ್ದು, ಜನ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ಫಲಿತಾಂಶದ ದಿನವೇ ತಿಳಿಯಬಹುದಾಗಿದೆ.

ಇದನ್ನೂ ಓದಿ; ಕೆ.ಆರ್.ನಗರ ಕ್ಷೇತ್ರ ಸಮೀಕ್ಷೆ: ಅನುಕಂಪದಲ್ಲಿ `ರವಿ’ ಮೂಡುವರೇ? ಪ್ರಭಾವದಲ್ಲಿ `ಸಾರಾ’ ಗೆಲ್ಲುವರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...