Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಪಾವಗಡ: ಈ ಬಾರಿಯೂ ವೆಂಕಟರಮಣಪ್ಪ - ತಿಮ್ಮರಾಯಪ್ಪ ಕುಟುಂಬದ ನಡುವೆಯೇ ಹಣಾಹಣಿ

ಪಾವಗಡ: ಈ ಬಾರಿಯೂ ವೆಂಕಟರಮಣಪ್ಪ – ತಿಮ್ಮರಾಯಪ್ಪ ಕುಟುಂಬದ ನಡುವೆಯೇ ಹಣಾಹಣಿ

- Advertisement -
- Advertisement -

ಆಂಧ್ರ ಪ್ರದೇಶದ ಗಡಿಗೆ ಅಂಟಿಕೊಂಡಿರುವ, ಹೆಚ್ಚಾಗಿ ತೆಲುಗು ಭಾಷಿಕರೆ ಇರುವ ತುಮಕೂರು ಜಿಲ್ಲೆಯ ಹಿಂದುಳಿದ ತಾಲ್ಲೂಕು ಎನಿಸಿಕೊಂಡ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಬಿರುಸು ಪಡೆದಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪಾವಗಡ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪನವರು ಸದ್ಯ ಶಾಸಕರಾಗಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಅವರು ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು ತಮ್ಮ ಪುತ್ರ ಹೆಚ್.ವಿ ವೆಂಕಟೇಶ್‌ರವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವಂತೆ ನೋಡಿಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಕೂದಲೆಳೆ ಅಂತರದಲ್ಲಿ ಸೋಲು ಕಂಡ ಜೆಡಿಎಸ್ ಪಕ್ಷದ ತಿಮ್ಮರಾಯಪ್ಪನವರು ಮತ್ತೆ ಕಣಕ್ಕೆ ಧುಮುಕಿದ್ದಾರೆ. ಕ್ಷೇತ್ರದ ಸ್ಥಿತಿಗತಿ ಹೀಗಿದೆ.

ಇದುವರೆಗೂ ಪಾವಗಡದಲ್ಲಿ 15 ಚುನಾವಣೆಗಳು ನಡೆದಿವೆ. ಅದರಲ್ಲಿ 10 ಬಾರಿ ಕಾಂಗ್ರೆಸ್ ಪಕ್ಷವೇ ಜಯ ಗಳಿಸಿದೆ. ಜೆಡಿಎಸ್ ಎರಡು ಬಾರಿ, ಜನತಾದಳ ಮತ್ತು ಜನತಾ ಪಕ್ಷ ತಲಾ ಒಮ್ಮೆ ಮತ್ತು ಒಂದು ಬಾರಿ ಪಕ್ಷೇತರ ಅಭ್ಯರ್ಥಿ ಜಯ ಗಳಿಸಿದ್ದಾರೆ. ಈ ಕ್ಷೇತ್ರದ ವಿಶೇಷವೆಂದರೆ ಇಲ್ಲಿ ಯಾರೂ ಸಹ ಸತತವಾಗಿ ಎರಡನೇ ಬಾರಿ ಗೆಲ್ಲಲು ಸಾಧ್ಯವಾಗಿಲ್ಲ.

1951ರಲ್ಲಿ ಮೈಸೂರು ಸಂಸ್ಥಾನದ ಭಾಗವಾಗಿದ್ದಾಗ ಪಾವಗಡ ದ್ವಿಸದಸ್ಯತ್ವ ಹೊಂದಿತ್ತು. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. 1978ರಲ್ಲಿ ಇಂದಿರಾ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವವರೆಗೂ ಕಾಂಗ್ರೆಸ್ ಪಾರುಪತ್ಯ ಮೆರೆದಿತ್ತು. ಆದರೆ 1983ರಲ್ಲಿ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿ ಉಗ್ರನರಸಿಂಹಪ್ಪ ಗೆಲುವು ಕಂಡರು. 1985ರಲ್ಲಿ ಸೋಮ್ಲಾ ನಾಯ್ಕ್ ಜನತಾ ಪಕ್ಷದಿಂದ ಆಯ್ಕೆಯಾಗಿದ್ದರು.

1989ರಲ್ಲಿ ವೆಂಕಟರಮಣಪ್ಪನವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. 1994ರಲ್ಲಿ ಸೋಮ್ಲಾ ನಾಯಕ್ ಜನತಾದಳದಿಂದ ಜಯ ಕಂಡರೆ 1999ರಲ್ಲಿ ಮತ್ತೆ ವೆಂಕಟರಮಣಪ್ಪನವರು ಕಾಂಗ್ರೆಸ್‌ನಿಂದ ಆರಿಸಿಬಂದರು. 2004ರಲ್ಲಿ ಜೆಡಿಎಸ್‌ನ ಕೆ.ಎಂ ತಿಮ್ಮರಾಯಪ್ಪನವರು ಗೆದ್ದುಬಂದರು. 2008ರಲ್ಲಿ ವೆಂಕಟರಮಣಪ್ಪನವರ ಬದಲು ಡಾ.ಗಾಯಿತ್ರಿ ದೇವಿ ಎಂಬುವವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಸೋಮ್ಲಾ ನಾಯ್ಕ್ ಬಿಜೆಪಿ ಸೇರಿ ಅಭ್ಯರ್ಥಿಯಾದರು. ಜೆಡಿಎಸ್‌ನಿಂದ ತಿಮ್ಮರಾಯಪ್ಪನವರು ಕಣಕ್ಕಿಳಿದಿದ್ದರು. ಆದರೆ ವೆಂಕಟರಮಣಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಕಂಡು ಮೂರನೇ ಬಾರಿಗೆ ಶಾಸಕರಾದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕನೇ ಸ್ಥಾನಕ್ಕೆ ಕುಸಿದಿತ್ತು!

2013ರ ಚುನಾವಣೆಯಲ್ಲಿ ವೆಂಕಟರಮಣಪ್ಪನವರ ಬದಲಿಗೆ ಅವರ ಪುತ್ರ ಹೆಚ್.ವಿ ವೆಂಕಟೇಶ್‌ ಕಾಂಗ್ರೆಸ್ ಅಭ್ಯರ್ಥಿಯಾದರು. ಜೆಡಿಎಸ್‌ನಿಂದ ತಿಮ್ಮರಾಯಪ್ಪನವರು ಕಣಕ್ಕಿಳಿದರು. ಇಬ್ಬರ ನಡುವಿನ ಪೈಪೋಟಿಯಲ್ಲಿ ತಿಮ್ಮರಾಯಪ್ಪನವರು 4,863 ಮತಗಳ ಅಂತರದಲ್ಲಿ ಗೆದ್ದು ಎರಡನೇ ಭಾರಿಗೆ ಶಾಸಕರಾದರು.

2018ರಲ್ಲಿ ಕಾಂಗ್ರೆಸ್‌ನಿಂದ ಮತ್ತೆ ವೆಂಕಟರಮಣಪ್ಪನವರು ಕಣಕ್ಕಿಳಿದರು. ಜೆಡಿಎಸ್‌ನ ತಿಮ್ಮರಾಯಪ್ಪನವರು ಎದುರಾಳಿಯಾಗಿದ್ದರು. ಇವರಿಬ್ಬರ ನಡುವಿನ ಜಿದ್ದಾಜಿದ್ದಿನ ಹೋರಾಟದಲ್ಲಿ ವೆಂಕಟರಮಣಪ್ಪನವರು 72,974 ಮತಗಳನ್ನು ಪಡೆದರೆ ತಿಮ್ಮರಾಯಪ್ಪನವರು 72,565 ಮತಗಳನ್ನು ಪಡೆದು ಕೇವಲ 409 ಮತಗಳ ಅಂತರದಿಂದ ಸೋಲುಂಡರು. ವೆಂಕಟರಮಣಪ್ಪ ನಾಲ್ಕನೇ ಬಾರಿಗೆ ಶಾಸಕರಾಗಿ, ಸಚಿವರೂ ಆಗಿದ್ದರು.

ಒಟ್ಟು 2 ಲಕ್ಷ ಮತಗಳಿರುವ ಪಾವಗಡ ಪ.ಜಾ ಮೀಸಲು ಕ್ಷೇತ್ರವಾಗಿದೆ. ಪರಿಶಿಷ್ಟ ಜಾತಿಯ 55,000 ಮತಗಳಿದ್ದರೆ, ಪರಿಶಿಷ್ಟ ಪಂಗಡ 35,000 ಮತಗಳಿವೆ. 10,000 ಮುಸ್ಲಿಂ ಮತಗಳು ಇವೆ ಎನ್ನಲಾಗಿದೆ.

ಹಾಲಿ ಪರಿಸ್ಥಿತಿ

ವೆಂಕಟರಮಣಪ್ಪನವರು ಯಾವುದೇ ಅಹಂ ಇಲ್ಲದೆ ಎಲ್ಲರ ಕೈಗೆ ಸಿಗುತ್ತಾರೆ. ಜನರ ಕೆಲಸಗಳನ್ನು ಮಾಡಿಕೊಡುತ್ತಾರೆ. ಎಲ್ಲರ ಫೋನ್ ತೆಗೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತವೆ. ಆದರೆ ತಮ್ಮ ಊರಿಗೆ ರಸ್ತೆ ಕೇಳಿದ ಯುವಕನ ಕಪಾಳಕ್ಕೆ ಹೊಡೆದಿದ್ದರು, 4 ದಶಕಗಳಿಂದ ಕಾಂಗ್ರೆಸ್‌ನಲ್ಲಿ ಅವರೊಬ್ಬರೆ ಅಧಿಕಾರದಲ್ಲಿದ್ದಾರೆ ಎಂಬ ಆರೋಪಗಳು ಸಹ ಅವರ ಮೇಲಿವೆ. ಅವರ ಕುಟುಂಬ ಸದಸ್ಯರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಕೊಡಬಾರದು ಎಂಬ ಒತ್ತಾಯವನ್ನು ಸ್ಥಳೀಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮುಂದಿಟ್ಟಿದ್ದರು. ಆದರೆ ಅದಕ್ಕೆ ಸೊಪ್ಪು ಹಾಕದ ಕಾಂಗ್ರೆಸ್ ಅವರು ಪುತ್ರ ಹೆಚ್.ವಿ ವೆಂಕಟೇಶ್‌ರವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿಸಿದೆ.

ಜೆಡಿಎಸ್ ಪಕ್ಷವು ಮಾಜಿ ಶಾಸಕ ತಿಮ್ಮರಾಯಪ್ಪನವರಿಗೆ ಮತ್ತೊಂದು ಅವಕಾಶ ನೀಡಿದೆ. ಅವರು ಕ್ಷೇತ್ರದ ಸಂಪ್ರದಾಯದಂತೆ ಈ ಬಾರಿ ಜನ ತನ್ನನ್ನು ಆಯ್ಕೆ ಮಾಡುತ್ತಾರೆ ಎಂದು ನಂಬಿ ಕೆಲಸ ಮಾಡುತ್ತಿದ್ದಾರೆ.

ಕೃಷ್ಣ ನಾಯ್ಕ್ ಎಂಬುವವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜನಾರ್ದನ ರೆಡ್ಡಿಯ ಕೆಆರ್‌ಪಿಪಿ ಪಕ್ಷದಿಂದ ನೇರಳೇಕುಂಟೆ ನಾಗೇಂದ್ರ ಕುಮಾರ್ ಕಣಕ್ಕಿಳಿದಿದ್ದಾರೆ.

2023ರ ಸಾಧ್ಯತೆಗಳು

ಜೆಡಿಎಸ್ ಪಕ್ಷದ ತಿಮ್ಮರಾಯಪ್ಪ ಅವರು ಪರಿಶಿಷ್ಟ ಜಾತಿಯ ಎಡಗೈ ಸಮುದಾಯದವರಾಗಿದ್ದಾರೆ. ಕಾಂಗ್ರೆಸ್‌ನ ಹೆಚ್.ವಿ ವೆಂಕಟೇಶ್ ಬೋವಿ ಸಮುದಾಯಕ್ಕೆ ಸೇರಿದ್ದಾರೆ. ಕೆಆರ್‌ಪಿಪಿ ಪಕ್ಷದ ನಾಗೇಂದ್ರ ಕುಮಾರ್ ಸಹ ಬೋವಿ ಸಮುದಾಯದವರೆ ಆಗಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯ್ಕ್ ಲಂಬಾಣಿ ಸಮುದಾಯಕ್ಕೆ ಸೇರಿದ್ದಾರೆ. ಆದರೆ ನೇರ ಪೈಪೋಟಿ ಇರುವುದು ಜೆಡಿಎಸ್‌ನ ತಿಮ್ಮರಾಯಪ್ಪ ಮತ್ತು ಕಾಂಗ್ರೆಸ್‌ನ ಹೆಚ್.ವಿ ವೆಂಕಟೇಶ್‌ರವರ ನಡುವೆ. ಇಲ್ಲಿ ಒಮ್ಮೆ ಗೆದ್ದವರು ಮುಂದಿನ ಚುನಾವಣೆಯಲ್ಲಿ ಗೆದ್ದ ಇತಿಹಾಸವಿಲ್ಲ. ಆದರೆ ಹಾಲಿ ಅಭ್ಯರ್ಥಿಗಳಿಬ್ಬರೂ ತಮ್ಮ ಹಿಂದಿನ ಚುನಾವಣೆಯಲ್ಲಿ ಸೋಲು ಕಂಡವರೆ ಆಗಿದ್ದು, ಜನ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ಫಲಿತಾಂಶದ ದಿನವೇ ತಿಳಿಯಬಹುದಾಗಿದೆ.

ಇದನ್ನೂ ಓದಿ; ಕೆ.ಆರ್.ನಗರ ಕ್ಷೇತ್ರ ಸಮೀಕ್ಷೆ: ಅನುಕಂಪದಲ್ಲಿ `ರವಿ’ ಮೂಡುವರೇ? ಪ್ರಭಾವದಲ್ಲಿ `ಸಾರಾ’ ಗೆಲ್ಲುವರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...