Homeಮುಖಪುಟಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ - ಡಿಎಂಕೆ ತಿರುಗೇಟು

ಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ – ಡಿಎಂಕೆ ತಿರುಗೇಟು

- Advertisement -
- Advertisement -

ತಮಿಳು ಚಲನಚಿತ್ರಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವಾಗ ಹಿಂದಿ ಹೇರಿಕೆಯನ್ನು ತಮಿಳುನಾಡು ಜನರು ಯಾಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದ ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರಿಗೆ ಡಿಎಂಕೆ ತಿರುಗೇಟು ನೀಡಿದ್ದು, ಪವನ್ ಕಲ್ಯಾಣ್ ಹುಟ್ಟುವ ಮೊದಲೆ ತಮಿಳುನಾಡು ಹಿಂದಿ ವಿರುದ್ಧ ಕಾನೂನು ತಂದು, ದ್ವಿಭಾಷ ಸೂತ್ರವನ್ನು ಅಳವಡಿಕೊಂಡಿದ್ದೆವು ಎಂದು ಹೇಳಿದೆ.

ಡಿಎಂಕೆ ವಕ್ತಾರ ಡಾ. ಸೈಯದ್ ಹಫೀಜುಲ್ಲಾ ಅವರು ಪವನ್ ಕಲ್ಯಾಣ್ ಅವರ ಹೇಳಿಕೆಗೆ ತಿರುಗೇಟು ನೀಡಿ, ಭಾಷಾ ನೀತಿಗಳ ಕುರಿತು ಮತ್ತು ತಮಿಳುನಾಡಿನ ನಿಲುವಿನ ಕುರಿತು ಅವರಿಗೆ “ಟೊಳ್ಳು ತಿಳುವಳಿಕೆ” ಇದೆ ಎಂದು ಬಣ್ಣಿಸಿದ್ದಾರೆ. ತಮಿಳುನಾಡು ಹಿಂದಿ ಅಥವಾ ಇತರ ಯಾವುದೇ ಭಾಷೆಯನ್ನು ಕಲಿಯುವ ವ್ಯಕ್ತಿಗಳನ್ನು ಎಂದಿಗೂ ವಿರೋಧಿಸಿಲ್ಲ, ಆದರೆ ತನ್ನ ಜನರ ಮೇಲೆ ಹಿಂದಿ ಅಥವಾ ಯಾವುದೇ ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಪಕ್ಷವಾದ ಜನಸೇನಾ ಸ್ಥಾಪನೆಯ ದಿನದಂದು ಮಾತನಾಡಿದ ಪವನ್ ಕಲ್ಯಾಣ್, ತಮಿಳುನಾಡಿನ ನಿಲುವಿನಲ್ಲಿ ವಿರೋಧಾಭಾಸವಿದೆ ಎಂದು ಹೇಳಿದ್ದರು. “ತಮಿಳುನಾಡು ಹಿಂದಿ ಭಾಷೆಯನ್ನು ನಿರಂತರವಾಗಿ ತಿರಸ್ಕರಿಸುತ್ತಿದೆ. ತಮಗೆ ಅದು ಬೇಡ ಎಂದು ಹೇಳುತ್ತಿದೆ. ಆದರೆ, ನನ್ನ ಮನಸ್ಸಿನಲ್ಲಿ ಒಂದು ಆಲೋಚನೆ ಸುಳಿಯಿತು – ಹಾಗಿದ್ದಲ್ಲಿ, ಅವರು ತಮಿಳು ಚಲನಚಿತ್ರಗಳನ್ನು ಹಿಂದಿಯಲ್ಲಿ ಏಕೆ ಡಬ್ ಮಾಡುತ್ತಾರೆ?” ಎಂದು ಕೇಳಿದ್ದಾರೆ.

“ಅವರು ಉತ್ತರ ಪ್ರದೇಶ, ಬಿಹಾರ ಮತ್ತು ಛತ್ತೀಸ್‌ಗಢದಂತಹ ಹಿಂದಿ ಮಾತನಾಡುವ ರಾಜ್ಯಗಳ ಹಣ ಬೇಕಾಗಿದೆ ಮತ್ತು ಬಿಹಾರದ ಕಾರ್ಮಿಕರನ್ನು ಅವರು ಅವಲಂಬಿಸಿದ್ದಾರೆ. ಆದರೂ, ಅವರು ಹಿಂದಿಯನ್ನು ತಿರಸ್ಕರಿಸುವುದಾಗಿ ಹೇಳಿಕೊಳ್ಳುತ್ತಾರೆ. ಇದು ಹೇಗೆ ನ್ಯಾಯ?” ಅವರು ಹೇಳಿದ್ದಾರೆ. ಪವನ್ ಕಲ್ಯಾಣ್ ಹುಟ್ಟುವ ಮೊದಲೆ

ತಮ್ಮ ಸ್ವಂತ ಅನುಭವಗಳನ್ನು ನೆನಪಿಸಿಕೊಂಡ ಪವನ್ ಕಲ್ಯಾಣ್ ಅವರು ತಮಿಳುನಾಡಿನ ಚೆನ್ನೈನಲ್ಲಿ ತಾನು ಅಧ್ಯಯನ ಮಾಡುತ್ತಿದ್ದಾಗ ತಾರತಮ್ಯವನ್ನು ಎದುರಿಸಿದ್ದೇನೆ ಎಂದು ಅನುಭವ ಹಂಚಿಕೊಂಡಿದ್ದಾರೆ. “ಕೋಪ ಬಂದಾಲೆಲ್ಲಾ ಭಾರತವೇನು ಕತ್ತರಿಸುವ ಕೇಕ್ ತುಂಡೆ? ಯಾರಾದರೂ ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ, ಅದನ್ನು ರಕ್ಷಿಸಲು ನನ್ನಂತಹ ಕೋಟ್ಯಂತರ ಜನರು ಎದ್ದು ನಿಲ್ಲುತ್ತಾರೆ.” ಎಂದು ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್, ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ದೀರ್ಘಕಾಲದ ವಿರೋಧವಿದೆ ಎಂದು ನೆನಪಿಸಿಕೊಂಡಿದ್ದಾರೆ.

“ನಾವು 1938 ರಿಂದ ಹಿಂದಿಯನ್ನು ವಿರೋಧಿಸುತ್ತಿದ್ದೇವೆ… ನಟರ ಹೇಳಿಕಯಿಂದ ಅಲ್ಲ, ಶಿಕ್ಷಣ ತಜ್ಞರ ಸಲಹೆಗಳ ಆಧಾರದ ಮೇಲೆ ತಮಿಳುನಾಡು ಯಾವಾಗಲೂ ದ್ವಿಭಾಷಾ ಸೂತ್ರವನ್ನು ಅನುಸರಿಸುತ್ತದೆ ಎಂದು ನಾವು ರಾಜ್ಯ ವಿಧಾನಸಭೆಯಲ್ಲಿ ಕಾನೂನು ಅಂಗೀಕರಿಸಿದ್ದೇವೆ. ಈ ಮಸೂದೆಯನ್ನು 1968 ರಲ್ಲಿ ಅಂಗೀಕರಿಸಲಾಯಿತು, ಆಗ ಪವನ್ ಕಲ್ಯಾಣ್ ಜನಿಸಿಯೆ ಇರಲಿಲ್ಲ.” ಎಂದು ಹೇಳಿದ್ದಾರೆ.

“ಅವರಿಗೆ ತಮಿಳುನಾಡಿನ ರಾಜಕೀಯ ತಿಳಿದಿಲ್ಲ. ಜನರನ್ನು ತರಬೇತಿ ಮಾಡಲು ಮಾತೃಭಾಷೆಯಲ್ಲಿ ನೀಡುವ ಶಿಕ್ಷಣವು ಅತ್ಯುತ್ತಮ ಮಾರ್ಗವೆಂದು ನಾವು ನಂಬುತ್ತೇವೆ, ಆದ್ದರಿಂದ ನಾವು ಹಿಂದಿಯನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಪವನ್ ಕಲ್ಯಾಣ್ ಅವರ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಬಿಜೆಪಿ ಸರ್ಕಾರದಿಂದ ಏನಾದರೂ ಪಡೆಯಲು ಬೇಕಾಗಿ ಹೇಗಾದರೂ ಮಾಡಿ ಬಿಜೆಪಿಯನ್ನು ಬೆಂಬಲಿಸಲು ಬಯಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಡಿಎಂಕೆ ಸಂಸದೆ ಕನಿಮೋಳಿ ಅವರು ಪವನ್ ಕಲ್ಯಾಣ್ ಈ ಹಿಂದೆ ಹಿಂದಿ ಹೇರಿಕೆಯನ್ನು ಈ  ಟೀಕಿಸಿದ್ದ ಅವರ ಟ್ವೀಟ್‌ಗಳನ್ನು ಮರುಹಂಚಿಕೊಂಡಿದ್ದಾರೆ. ಈ ಟ್ವೀಟ್ ಅಲ್ಲಿ ಅವರು, ತಂತ್ರಜ್ಞಾನವು ಈಗ ಭಾಷೆಯ ಅಡೆತಡೆಗಳನ್ನು ಮೀರಿ ಚಲನಚಿತ್ರಗಳನ್ನು ಆನಂದಿಸಲು ನಮಗೆ ಅವಕಾಶ ಮಾಡಿಕೊಟ್ಟಿದೆ ಎಂದು ಕನಿಮೋಳಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...