Homeಮುಖಪುಟಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ - ಡಿಎಂಕೆ ತಿರುಗೇಟು

ಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ – ಡಿಎಂಕೆ ತಿರುಗೇಟು

- Advertisement -
- Advertisement -

ತಮಿಳು ಚಲನಚಿತ್ರಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವಾಗ ಹಿಂದಿ ಹೇರಿಕೆಯನ್ನು ತಮಿಳುನಾಡು ಜನರು ಯಾಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದ ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರಿಗೆ ಡಿಎಂಕೆ ತಿರುಗೇಟು ನೀಡಿದ್ದು, ಪವನ್ ಕಲ್ಯಾಣ್ ಹುಟ್ಟುವ ಮೊದಲೆ ತಮಿಳುನಾಡು ಹಿಂದಿ ವಿರುದ್ಧ ಕಾನೂನು ತಂದು, ದ್ವಿಭಾಷ ಸೂತ್ರವನ್ನು ಅಳವಡಿಕೊಂಡಿದ್ದೆವು ಎಂದು ಹೇಳಿದೆ.

ಡಿಎಂಕೆ ವಕ್ತಾರ ಡಾ. ಸೈಯದ್ ಹಫೀಜುಲ್ಲಾ ಅವರು ಪವನ್ ಕಲ್ಯಾಣ್ ಅವರ ಹೇಳಿಕೆಗೆ ತಿರುಗೇಟು ನೀಡಿ, ಭಾಷಾ ನೀತಿಗಳ ಕುರಿತು ಮತ್ತು ತಮಿಳುನಾಡಿನ ನಿಲುವಿನ ಕುರಿತು ಅವರಿಗೆ “ಟೊಳ್ಳು ತಿಳುವಳಿಕೆ” ಇದೆ ಎಂದು ಬಣ್ಣಿಸಿದ್ದಾರೆ. ತಮಿಳುನಾಡು ಹಿಂದಿ ಅಥವಾ ಇತರ ಯಾವುದೇ ಭಾಷೆಯನ್ನು ಕಲಿಯುವ ವ್ಯಕ್ತಿಗಳನ್ನು ಎಂದಿಗೂ ವಿರೋಧಿಸಿಲ್ಲ, ಆದರೆ ತನ್ನ ಜನರ ಮೇಲೆ ಹಿಂದಿ ಅಥವಾ ಯಾವುದೇ ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಪಕ್ಷವಾದ ಜನಸೇನಾ ಸ್ಥಾಪನೆಯ ದಿನದಂದು ಮಾತನಾಡಿದ ಪವನ್ ಕಲ್ಯಾಣ್, ತಮಿಳುನಾಡಿನ ನಿಲುವಿನಲ್ಲಿ ವಿರೋಧಾಭಾಸವಿದೆ ಎಂದು ಹೇಳಿದ್ದರು. “ತಮಿಳುನಾಡು ಹಿಂದಿ ಭಾಷೆಯನ್ನು ನಿರಂತರವಾಗಿ ತಿರಸ್ಕರಿಸುತ್ತಿದೆ. ತಮಗೆ ಅದು ಬೇಡ ಎಂದು ಹೇಳುತ್ತಿದೆ. ಆದರೆ, ನನ್ನ ಮನಸ್ಸಿನಲ್ಲಿ ಒಂದು ಆಲೋಚನೆ ಸುಳಿಯಿತು – ಹಾಗಿದ್ದಲ್ಲಿ, ಅವರು ತಮಿಳು ಚಲನಚಿತ್ರಗಳನ್ನು ಹಿಂದಿಯಲ್ಲಿ ಏಕೆ ಡಬ್ ಮಾಡುತ್ತಾರೆ?” ಎಂದು ಕೇಳಿದ್ದಾರೆ.

“ಅವರು ಉತ್ತರ ಪ್ರದೇಶ, ಬಿಹಾರ ಮತ್ತು ಛತ್ತೀಸ್‌ಗಢದಂತಹ ಹಿಂದಿ ಮಾತನಾಡುವ ರಾಜ್ಯಗಳ ಹಣ ಬೇಕಾಗಿದೆ ಮತ್ತು ಬಿಹಾರದ ಕಾರ್ಮಿಕರನ್ನು ಅವರು ಅವಲಂಬಿಸಿದ್ದಾರೆ. ಆದರೂ, ಅವರು ಹಿಂದಿಯನ್ನು ತಿರಸ್ಕರಿಸುವುದಾಗಿ ಹೇಳಿಕೊಳ್ಳುತ್ತಾರೆ. ಇದು ಹೇಗೆ ನ್ಯಾಯ?” ಅವರು ಹೇಳಿದ್ದಾರೆ. ಪವನ್ ಕಲ್ಯಾಣ್ ಹುಟ್ಟುವ ಮೊದಲೆ

ತಮ್ಮ ಸ್ವಂತ ಅನುಭವಗಳನ್ನು ನೆನಪಿಸಿಕೊಂಡ ಪವನ್ ಕಲ್ಯಾಣ್ ಅವರು ತಮಿಳುನಾಡಿನ ಚೆನ್ನೈನಲ್ಲಿ ತಾನು ಅಧ್ಯಯನ ಮಾಡುತ್ತಿದ್ದಾಗ ತಾರತಮ್ಯವನ್ನು ಎದುರಿಸಿದ್ದೇನೆ ಎಂದು ಅನುಭವ ಹಂಚಿಕೊಂಡಿದ್ದಾರೆ. “ಕೋಪ ಬಂದಾಲೆಲ್ಲಾ ಭಾರತವೇನು ಕತ್ತರಿಸುವ ಕೇಕ್ ತುಂಡೆ? ಯಾರಾದರೂ ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ, ಅದನ್ನು ರಕ್ಷಿಸಲು ನನ್ನಂತಹ ಕೋಟ್ಯಂತರ ಜನರು ಎದ್ದು ನಿಲ್ಲುತ್ತಾರೆ.” ಎಂದು ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್, ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ದೀರ್ಘಕಾಲದ ವಿರೋಧವಿದೆ ಎಂದು ನೆನಪಿಸಿಕೊಂಡಿದ್ದಾರೆ.

“ನಾವು 1938 ರಿಂದ ಹಿಂದಿಯನ್ನು ವಿರೋಧಿಸುತ್ತಿದ್ದೇವೆ… ನಟರ ಹೇಳಿಕಯಿಂದ ಅಲ್ಲ, ಶಿಕ್ಷಣ ತಜ್ಞರ ಸಲಹೆಗಳ ಆಧಾರದ ಮೇಲೆ ತಮಿಳುನಾಡು ಯಾವಾಗಲೂ ದ್ವಿಭಾಷಾ ಸೂತ್ರವನ್ನು ಅನುಸರಿಸುತ್ತದೆ ಎಂದು ನಾವು ರಾಜ್ಯ ವಿಧಾನಸಭೆಯಲ್ಲಿ ಕಾನೂನು ಅಂಗೀಕರಿಸಿದ್ದೇವೆ. ಈ ಮಸೂದೆಯನ್ನು 1968 ರಲ್ಲಿ ಅಂಗೀಕರಿಸಲಾಯಿತು, ಆಗ ಪವನ್ ಕಲ್ಯಾಣ್ ಜನಿಸಿಯೆ ಇರಲಿಲ್ಲ.” ಎಂದು ಹೇಳಿದ್ದಾರೆ.

“ಅವರಿಗೆ ತಮಿಳುನಾಡಿನ ರಾಜಕೀಯ ತಿಳಿದಿಲ್ಲ. ಜನರನ್ನು ತರಬೇತಿ ಮಾಡಲು ಮಾತೃಭಾಷೆಯಲ್ಲಿ ನೀಡುವ ಶಿಕ್ಷಣವು ಅತ್ಯುತ್ತಮ ಮಾರ್ಗವೆಂದು ನಾವು ನಂಬುತ್ತೇವೆ, ಆದ್ದರಿಂದ ನಾವು ಹಿಂದಿಯನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಪವನ್ ಕಲ್ಯಾಣ್ ಅವರ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಬಿಜೆಪಿ ಸರ್ಕಾರದಿಂದ ಏನಾದರೂ ಪಡೆಯಲು ಬೇಕಾಗಿ ಹೇಗಾದರೂ ಮಾಡಿ ಬಿಜೆಪಿಯನ್ನು ಬೆಂಬಲಿಸಲು ಬಯಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಡಿಎಂಕೆ ಸಂಸದೆ ಕನಿಮೋಳಿ ಅವರು ಪವನ್ ಕಲ್ಯಾಣ್ ಈ ಹಿಂದೆ ಹಿಂದಿ ಹೇರಿಕೆಯನ್ನು ಈ  ಟೀಕಿಸಿದ್ದ ಅವರ ಟ್ವೀಟ್‌ಗಳನ್ನು ಮರುಹಂಚಿಕೊಂಡಿದ್ದಾರೆ. ಈ ಟ್ವೀಟ್ ಅಲ್ಲಿ ಅವರು, ತಂತ್ರಜ್ಞಾನವು ಈಗ ಭಾಷೆಯ ಅಡೆತಡೆಗಳನ್ನು ಮೀರಿ ಚಲನಚಿತ್ರಗಳನ್ನು ಆನಂದಿಸಲು ನಮಗೆ ಅವಕಾಶ ಮಾಡಿಕೊಟ್ಟಿದೆ ಎಂದು ಕನಿಮೋಳಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....