Homeಮುಖಪುಟಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ - ಡಿಎಂಕೆ ತಿರುಗೇಟು

ಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ – ಡಿಎಂಕೆ ತಿರುಗೇಟು

- Advertisement -
- Advertisement -

ತಮಿಳು ಚಲನಚಿತ್ರಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವಾಗ ಹಿಂದಿ ಹೇರಿಕೆಯನ್ನು ತಮಿಳುನಾಡು ಜನರು ಯಾಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದ ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರಿಗೆ ಡಿಎಂಕೆ ತಿರುಗೇಟು ನೀಡಿದ್ದು, ಪವನ್ ಕಲ್ಯಾಣ್ ಹುಟ್ಟುವ ಮೊದಲೆ ತಮಿಳುನಾಡು ಹಿಂದಿ ವಿರುದ್ಧ ಕಾನೂನು ತಂದು, ದ್ವಿಭಾಷ ಸೂತ್ರವನ್ನು ಅಳವಡಿಕೊಂಡಿದ್ದೆವು ಎಂದು ಹೇಳಿದೆ.

ಡಿಎಂಕೆ ವಕ್ತಾರ ಡಾ. ಸೈಯದ್ ಹಫೀಜುಲ್ಲಾ ಅವರು ಪವನ್ ಕಲ್ಯಾಣ್ ಅವರ ಹೇಳಿಕೆಗೆ ತಿರುಗೇಟು ನೀಡಿ, ಭಾಷಾ ನೀತಿಗಳ ಕುರಿತು ಮತ್ತು ತಮಿಳುನಾಡಿನ ನಿಲುವಿನ ಕುರಿತು ಅವರಿಗೆ “ಟೊಳ್ಳು ತಿಳುವಳಿಕೆ” ಇದೆ ಎಂದು ಬಣ್ಣಿಸಿದ್ದಾರೆ. ತಮಿಳುನಾಡು ಹಿಂದಿ ಅಥವಾ ಇತರ ಯಾವುದೇ ಭಾಷೆಯನ್ನು ಕಲಿಯುವ ವ್ಯಕ್ತಿಗಳನ್ನು ಎಂದಿಗೂ ವಿರೋಧಿಸಿಲ್ಲ, ಆದರೆ ತನ್ನ ಜನರ ಮೇಲೆ ಹಿಂದಿ ಅಥವಾ ಯಾವುದೇ ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಪಕ್ಷವಾದ ಜನಸೇನಾ ಸ್ಥಾಪನೆಯ ದಿನದಂದು ಮಾತನಾಡಿದ ಪವನ್ ಕಲ್ಯಾಣ್, ತಮಿಳುನಾಡಿನ ನಿಲುವಿನಲ್ಲಿ ವಿರೋಧಾಭಾಸವಿದೆ ಎಂದು ಹೇಳಿದ್ದರು. “ತಮಿಳುನಾಡು ಹಿಂದಿ ಭಾಷೆಯನ್ನು ನಿರಂತರವಾಗಿ ತಿರಸ್ಕರಿಸುತ್ತಿದೆ. ತಮಗೆ ಅದು ಬೇಡ ಎಂದು ಹೇಳುತ್ತಿದೆ. ಆದರೆ, ನನ್ನ ಮನಸ್ಸಿನಲ್ಲಿ ಒಂದು ಆಲೋಚನೆ ಸುಳಿಯಿತು – ಹಾಗಿದ್ದಲ್ಲಿ, ಅವರು ತಮಿಳು ಚಲನಚಿತ್ರಗಳನ್ನು ಹಿಂದಿಯಲ್ಲಿ ಏಕೆ ಡಬ್ ಮಾಡುತ್ತಾರೆ?” ಎಂದು ಕೇಳಿದ್ದಾರೆ.

“ಅವರು ಉತ್ತರ ಪ್ರದೇಶ, ಬಿಹಾರ ಮತ್ತು ಛತ್ತೀಸ್‌ಗಢದಂತಹ ಹಿಂದಿ ಮಾತನಾಡುವ ರಾಜ್ಯಗಳ ಹಣ ಬೇಕಾಗಿದೆ ಮತ್ತು ಬಿಹಾರದ ಕಾರ್ಮಿಕರನ್ನು ಅವರು ಅವಲಂಬಿಸಿದ್ದಾರೆ. ಆದರೂ, ಅವರು ಹಿಂದಿಯನ್ನು ತಿರಸ್ಕರಿಸುವುದಾಗಿ ಹೇಳಿಕೊಳ್ಳುತ್ತಾರೆ. ಇದು ಹೇಗೆ ನ್ಯಾಯ?” ಅವರು ಹೇಳಿದ್ದಾರೆ. ಪವನ್ ಕಲ್ಯಾಣ್ ಹುಟ್ಟುವ ಮೊದಲೆ

ತಮ್ಮ ಸ್ವಂತ ಅನುಭವಗಳನ್ನು ನೆನಪಿಸಿಕೊಂಡ ಪವನ್ ಕಲ್ಯಾಣ್ ಅವರು ತಮಿಳುನಾಡಿನ ಚೆನ್ನೈನಲ್ಲಿ ತಾನು ಅಧ್ಯಯನ ಮಾಡುತ್ತಿದ್ದಾಗ ತಾರತಮ್ಯವನ್ನು ಎದುರಿಸಿದ್ದೇನೆ ಎಂದು ಅನುಭವ ಹಂಚಿಕೊಂಡಿದ್ದಾರೆ. “ಕೋಪ ಬಂದಾಲೆಲ್ಲಾ ಭಾರತವೇನು ಕತ್ತರಿಸುವ ಕೇಕ್ ತುಂಡೆ? ಯಾರಾದರೂ ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ, ಅದನ್ನು ರಕ್ಷಿಸಲು ನನ್ನಂತಹ ಕೋಟ್ಯಂತರ ಜನರು ಎದ್ದು ನಿಲ್ಲುತ್ತಾರೆ.” ಎಂದು ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್, ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ದೀರ್ಘಕಾಲದ ವಿರೋಧವಿದೆ ಎಂದು ನೆನಪಿಸಿಕೊಂಡಿದ್ದಾರೆ.

“ನಾವು 1938 ರಿಂದ ಹಿಂದಿಯನ್ನು ವಿರೋಧಿಸುತ್ತಿದ್ದೇವೆ… ನಟರ ಹೇಳಿಕಯಿಂದ ಅಲ್ಲ, ಶಿಕ್ಷಣ ತಜ್ಞರ ಸಲಹೆಗಳ ಆಧಾರದ ಮೇಲೆ ತಮಿಳುನಾಡು ಯಾವಾಗಲೂ ದ್ವಿಭಾಷಾ ಸೂತ್ರವನ್ನು ಅನುಸರಿಸುತ್ತದೆ ಎಂದು ನಾವು ರಾಜ್ಯ ವಿಧಾನಸಭೆಯಲ್ಲಿ ಕಾನೂನು ಅಂಗೀಕರಿಸಿದ್ದೇವೆ. ಈ ಮಸೂದೆಯನ್ನು 1968 ರಲ್ಲಿ ಅಂಗೀಕರಿಸಲಾಯಿತು, ಆಗ ಪವನ್ ಕಲ್ಯಾಣ್ ಜನಿಸಿಯೆ ಇರಲಿಲ್ಲ.” ಎಂದು ಹೇಳಿದ್ದಾರೆ.

“ಅವರಿಗೆ ತಮಿಳುನಾಡಿನ ರಾಜಕೀಯ ತಿಳಿದಿಲ್ಲ. ಜನರನ್ನು ತರಬೇತಿ ಮಾಡಲು ಮಾತೃಭಾಷೆಯಲ್ಲಿ ನೀಡುವ ಶಿಕ್ಷಣವು ಅತ್ಯುತ್ತಮ ಮಾರ್ಗವೆಂದು ನಾವು ನಂಬುತ್ತೇವೆ, ಆದ್ದರಿಂದ ನಾವು ಹಿಂದಿಯನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಪವನ್ ಕಲ್ಯಾಣ್ ಅವರ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಬಿಜೆಪಿ ಸರ್ಕಾರದಿಂದ ಏನಾದರೂ ಪಡೆಯಲು ಬೇಕಾಗಿ ಹೇಗಾದರೂ ಮಾಡಿ ಬಿಜೆಪಿಯನ್ನು ಬೆಂಬಲಿಸಲು ಬಯಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಡಿಎಂಕೆ ಸಂಸದೆ ಕನಿಮೋಳಿ ಅವರು ಪವನ್ ಕಲ್ಯಾಣ್ ಈ ಹಿಂದೆ ಹಿಂದಿ ಹೇರಿಕೆಯನ್ನು ಈ  ಟೀಕಿಸಿದ್ದ ಅವರ ಟ್ವೀಟ್‌ಗಳನ್ನು ಮರುಹಂಚಿಕೊಂಡಿದ್ದಾರೆ. ಈ ಟ್ವೀಟ್ ಅಲ್ಲಿ ಅವರು, ತಂತ್ರಜ್ಞಾನವು ಈಗ ಭಾಷೆಯ ಅಡೆತಡೆಗಳನ್ನು ಮೀರಿ ಚಲನಚಿತ್ರಗಳನ್ನು ಆನಂದಿಸಲು ನಮಗೆ ಅವಕಾಶ ಮಾಡಿಕೊಟ್ಟಿದೆ ಎಂದು ಕನಿಮೋಳಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...