Homeಮುಖಪುಟಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ - ಡಿಎಂಕೆ ತಿರುಗೇಟು

ಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ – ಡಿಎಂಕೆ ತಿರುಗೇಟು

- Advertisement -
- Advertisement -

ತಮಿಳು ಚಲನಚಿತ್ರಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವಾಗ ಹಿಂದಿ ಹೇರಿಕೆಯನ್ನು ತಮಿಳುನಾಡು ಜನರು ಯಾಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದ ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರಿಗೆ ಡಿಎಂಕೆ ತಿರುಗೇಟು ನೀಡಿದ್ದು, ಪವನ್ ಕಲ್ಯಾಣ್ ಹುಟ್ಟುವ ಮೊದಲೆ ತಮಿಳುನಾಡು ಹಿಂದಿ ವಿರುದ್ಧ ಕಾನೂನು ತಂದು, ದ್ವಿಭಾಷ ಸೂತ್ರವನ್ನು ಅಳವಡಿಕೊಂಡಿದ್ದೆವು ಎಂದು ಹೇಳಿದೆ.

ಡಿಎಂಕೆ ವಕ್ತಾರ ಡಾ. ಸೈಯದ್ ಹಫೀಜುಲ್ಲಾ ಅವರು ಪವನ್ ಕಲ್ಯಾಣ್ ಅವರ ಹೇಳಿಕೆಗೆ ತಿರುಗೇಟು ನೀಡಿ, ಭಾಷಾ ನೀತಿಗಳ ಕುರಿತು ಮತ್ತು ತಮಿಳುನಾಡಿನ ನಿಲುವಿನ ಕುರಿತು ಅವರಿಗೆ “ಟೊಳ್ಳು ತಿಳುವಳಿಕೆ” ಇದೆ ಎಂದು ಬಣ್ಣಿಸಿದ್ದಾರೆ. ತಮಿಳುನಾಡು ಹಿಂದಿ ಅಥವಾ ಇತರ ಯಾವುದೇ ಭಾಷೆಯನ್ನು ಕಲಿಯುವ ವ್ಯಕ್ತಿಗಳನ್ನು ಎಂದಿಗೂ ವಿರೋಧಿಸಿಲ್ಲ, ಆದರೆ ತನ್ನ ಜನರ ಮೇಲೆ ಹಿಂದಿ ಅಥವಾ ಯಾವುದೇ ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಪಕ್ಷವಾದ ಜನಸೇನಾ ಸ್ಥಾಪನೆಯ ದಿನದಂದು ಮಾತನಾಡಿದ ಪವನ್ ಕಲ್ಯಾಣ್, ತಮಿಳುನಾಡಿನ ನಿಲುವಿನಲ್ಲಿ ವಿರೋಧಾಭಾಸವಿದೆ ಎಂದು ಹೇಳಿದ್ದರು. “ತಮಿಳುನಾಡು ಹಿಂದಿ ಭಾಷೆಯನ್ನು ನಿರಂತರವಾಗಿ ತಿರಸ್ಕರಿಸುತ್ತಿದೆ. ತಮಗೆ ಅದು ಬೇಡ ಎಂದು ಹೇಳುತ್ತಿದೆ. ಆದರೆ, ನನ್ನ ಮನಸ್ಸಿನಲ್ಲಿ ಒಂದು ಆಲೋಚನೆ ಸುಳಿಯಿತು – ಹಾಗಿದ್ದಲ್ಲಿ, ಅವರು ತಮಿಳು ಚಲನಚಿತ್ರಗಳನ್ನು ಹಿಂದಿಯಲ್ಲಿ ಏಕೆ ಡಬ್ ಮಾಡುತ್ತಾರೆ?” ಎಂದು ಕೇಳಿದ್ದಾರೆ.

“ಅವರು ಉತ್ತರ ಪ್ರದೇಶ, ಬಿಹಾರ ಮತ್ತು ಛತ್ತೀಸ್‌ಗಢದಂತಹ ಹಿಂದಿ ಮಾತನಾಡುವ ರಾಜ್ಯಗಳ ಹಣ ಬೇಕಾಗಿದೆ ಮತ್ತು ಬಿಹಾರದ ಕಾರ್ಮಿಕರನ್ನು ಅವರು ಅವಲಂಬಿಸಿದ್ದಾರೆ. ಆದರೂ, ಅವರು ಹಿಂದಿಯನ್ನು ತಿರಸ್ಕರಿಸುವುದಾಗಿ ಹೇಳಿಕೊಳ್ಳುತ್ತಾರೆ. ಇದು ಹೇಗೆ ನ್ಯಾಯ?” ಅವರು ಹೇಳಿದ್ದಾರೆ. ಪವನ್ ಕಲ್ಯಾಣ್ ಹುಟ್ಟುವ ಮೊದಲೆ

ತಮ್ಮ ಸ್ವಂತ ಅನುಭವಗಳನ್ನು ನೆನಪಿಸಿಕೊಂಡ ಪವನ್ ಕಲ್ಯಾಣ್ ಅವರು ತಮಿಳುನಾಡಿನ ಚೆನ್ನೈನಲ್ಲಿ ತಾನು ಅಧ್ಯಯನ ಮಾಡುತ್ತಿದ್ದಾಗ ತಾರತಮ್ಯವನ್ನು ಎದುರಿಸಿದ್ದೇನೆ ಎಂದು ಅನುಭವ ಹಂಚಿಕೊಂಡಿದ್ದಾರೆ. “ಕೋಪ ಬಂದಾಲೆಲ್ಲಾ ಭಾರತವೇನು ಕತ್ತರಿಸುವ ಕೇಕ್ ತುಂಡೆ? ಯಾರಾದರೂ ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ, ಅದನ್ನು ರಕ್ಷಿಸಲು ನನ್ನಂತಹ ಕೋಟ್ಯಂತರ ಜನರು ಎದ್ದು ನಿಲ್ಲುತ್ತಾರೆ.” ಎಂದು ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್, ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ದೀರ್ಘಕಾಲದ ವಿರೋಧವಿದೆ ಎಂದು ನೆನಪಿಸಿಕೊಂಡಿದ್ದಾರೆ.

“ನಾವು 1938 ರಿಂದ ಹಿಂದಿಯನ್ನು ವಿರೋಧಿಸುತ್ತಿದ್ದೇವೆ… ನಟರ ಹೇಳಿಕಯಿಂದ ಅಲ್ಲ, ಶಿಕ್ಷಣ ತಜ್ಞರ ಸಲಹೆಗಳ ಆಧಾರದ ಮೇಲೆ ತಮಿಳುನಾಡು ಯಾವಾಗಲೂ ದ್ವಿಭಾಷಾ ಸೂತ್ರವನ್ನು ಅನುಸರಿಸುತ್ತದೆ ಎಂದು ನಾವು ರಾಜ್ಯ ವಿಧಾನಸಭೆಯಲ್ಲಿ ಕಾನೂನು ಅಂಗೀಕರಿಸಿದ್ದೇವೆ. ಈ ಮಸೂದೆಯನ್ನು 1968 ರಲ್ಲಿ ಅಂಗೀಕರಿಸಲಾಯಿತು, ಆಗ ಪವನ್ ಕಲ್ಯಾಣ್ ಜನಿಸಿಯೆ ಇರಲಿಲ್ಲ.” ಎಂದು ಹೇಳಿದ್ದಾರೆ.

“ಅವರಿಗೆ ತಮಿಳುನಾಡಿನ ರಾಜಕೀಯ ತಿಳಿದಿಲ್ಲ. ಜನರನ್ನು ತರಬೇತಿ ಮಾಡಲು ಮಾತೃಭಾಷೆಯಲ್ಲಿ ನೀಡುವ ಶಿಕ್ಷಣವು ಅತ್ಯುತ್ತಮ ಮಾರ್ಗವೆಂದು ನಾವು ನಂಬುತ್ತೇವೆ, ಆದ್ದರಿಂದ ನಾವು ಹಿಂದಿಯನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಪವನ್ ಕಲ್ಯಾಣ್ ಅವರ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಬಿಜೆಪಿ ಸರ್ಕಾರದಿಂದ ಏನಾದರೂ ಪಡೆಯಲು ಬೇಕಾಗಿ ಹೇಗಾದರೂ ಮಾಡಿ ಬಿಜೆಪಿಯನ್ನು ಬೆಂಬಲಿಸಲು ಬಯಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಡಿಎಂಕೆ ಸಂಸದೆ ಕನಿಮೋಳಿ ಅವರು ಪವನ್ ಕಲ್ಯಾಣ್ ಈ ಹಿಂದೆ ಹಿಂದಿ ಹೇರಿಕೆಯನ್ನು ಈ  ಟೀಕಿಸಿದ್ದ ಅವರ ಟ್ವೀಟ್‌ಗಳನ್ನು ಮರುಹಂಚಿಕೊಂಡಿದ್ದಾರೆ. ಈ ಟ್ವೀಟ್ ಅಲ್ಲಿ ಅವರು, ತಂತ್ರಜ್ಞಾನವು ಈಗ ಭಾಷೆಯ ಅಡೆತಡೆಗಳನ್ನು ಮೀರಿ ಚಲನಚಿತ್ರಗಳನ್ನು ಆನಂದಿಸಲು ನಮಗೆ ಅವಕಾಶ ಮಾಡಿಕೊಟ್ಟಿದೆ ಎಂದು ಕನಿಮೋಳಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...