Homeಮುಖಪುಟಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ - ಡಿಎಂಕೆ ತಿರುಗೇಟು

ಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ – ಡಿಎಂಕೆ ತಿರುಗೇಟು

- Advertisement -
- Advertisement -

ತಮಿಳು ಚಲನಚಿತ್ರಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವಾಗ ಹಿಂದಿ ಹೇರಿಕೆಯನ್ನು ತಮಿಳುನಾಡು ಜನರು ಯಾಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದ ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರಿಗೆ ಡಿಎಂಕೆ ತಿರುಗೇಟು ನೀಡಿದ್ದು, ಪವನ್ ಕಲ್ಯಾಣ್ ಹುಟ್ಟುವ ಮೊದಲೆ ತಮಿಳುನಾಡು ಹಿಂದಿ ವಿರುದ್ಧ ಕಾನೂನು ತಂದು, ದ್ವಿಭಾಷ ಸೂತ್ರವನ್ನು ಅಳವಡಿಕೊಂಡಿದ್ದೆವು ಎಂದು ಹೇಳಿದೆ.

ಡಿಎಂಕೆ ವಕ್ತಾರ ಡಾ. ಸೈಯದ್ ಹಫೀಜುಲ್ಲಾ ಅವರು ಪವನ್ ಕಲ್ಯಾಣ್ ಅವರ ಹೇಳಿಕೆಗೆ ತಿರುಗೇಟು ನೀಡಿ, ಭಾಷಾ ನೀತಿಗಳ ಕುರಿತು ಮತ್ತು ತಮಿಳುನಾಡಿನ ನಿಲುವಿನ ಕುರಿತು ಅವರಿಗೆ “ಟೊಳ್ಳು ತಿಳುವಳಿಕೆ” ಇದೆ ಎಂದು ಬಣ್ಣಿಸಿದ್ದಾರೆ. ತಮಿಳುನಾಡು ಹಿಂದಿ ಅಥವಾ ಇತರ ಯಾವುದೇ ಭಾಷೆಯನ್ನು ಕಲಿಯುವ ವ್ಯಕ್ತಿಗಳನ್ನು ಎಂದಿಗೂ ವಿರೋಧಿಸಿಲ್ಲ, ಆದರೆ ತನ್ನ ಜನರ ಮೇಲೆ ಹಿಂದಿ ಅಥವಾ ಯಾವುದೇ ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಪಕ್ಷವಾದ ಜನಸೇನಾ ಸ್ಥಾಪನೆಯ ದಿನದಂದು ಮಾತನಾಡಿದ ಪವನ್ ಕಲ್ಯಾಣ್, ತಮಿಳುನಾಡಿನ ನಿಲುವಿನಲ್ಲಿ ವಿರೋಧಾಭಾಸವಿದೆ ಎಂದು ಹೇಳಿದ್ದರು. “ತಮಿಳುನಾಡು ಹಿಂದಿ ಭಾಷೆಯನ್ನು ನಿರಂತರವಾಗಿ ತಿರಸ್ಕರಿಸುತ್ತಿದೆ. ತಮಗೆ ಅದು ಬೇಡ ಎಂದು ಹೇಳುತ್ತಿದೆ. ಆದರೆ, ನನ್ನ ಮನಸ್ಸಿನಲ್ಲಿ ಒಂದು ಆಲೋಚನೆ ಸುಳಿಯಿತು – ಹಾಗಿದ್ದಲ್ಲಿ, ಅವರು ತಮಿಳು ಚಲನಚಿತ್ರಗಳನ್ನು ಹಿಂದಿಯಲ್ಲಿ ಏಕೆ ಡಬ್ ಮಾಡುತ್ತಾರೆ?” ಎಂದು ಕೇಳಿದ್ದಾರೆ.

“ಅವರು ಉತ್ತರ ಪ್ರದೇಶ, ಬಿಹಾರ ಮತ್ತು ಛತ್ತೀಸ್‌ಗಢದಂತಹ ಹಿಂದಿ ಮಾತನಾಡುವ ರಾಜ್ಯಗಳ ಹಣ ಬೇಕಾಗಿದೆ ಮತ್ತು ಬಿಹಾರದ ಕಾರ್ಮಿಕರನ್ನು ಅವರು ಅವಲಂಬಿಸಿದ್ದಾರೆ. ಆದರೂ, ಅವರು ಹಿಂದಿಯನ್ನು ತಿರಸ್ಕರಿಸುವುದಾಗಿ ಹೇಳಿಕೊಳ್ಳುತ್ತಾರೆ. ಇದು ಹೇಗೆ ನ್ಯಾಯ?” ಅವರು ಹೇಳಿದ್ದಾರೆ. ಪವನ್ ಕಲ್ಯಾಣ್ ಹುಟ್ಟುವ ಮೊದಲೆ

ತಮ್ಮ ಸ್ವಂತ ಅನುಭವಗಳನ್ನು ನೆನಪಿಸಿಕೊಂಡ ಪವನ್ ಕಲ್ಯಾಣ್ ಅವರು ತಮಿಳುನಾಡಿನ ಚೆನ್ನೈನಲ್ಲಿ ತಾನು ಅಧ್ಯಯನ ಮಾಡುತ್ತಿದ್ದಾಗ ತಾರತಮ್ಯವನ್ನು ಎದುರಿಸಿದ್ದೇನೆ ಎಂದು ಅನುಭವ ಹಂಚಿಕೊಂಡಿದ್ದಾರೆ. “ಕೋಪ ಬಂದಾಲೆಲ್ಲಾ ಭಾರತವೇನು ಕತ್ತರಿಸುವ ಕೇಕ್ ತುಂಡೆ? ಯಾರಾದರೂ ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ, ಅದನ್ನು ರಕ್ಷಿಸಲು ನನ್ನಂತಹ ಕೋಟ್ಯಂತರ ಜನರು ಎದ್ದು ನಿಲ್ಲುತ್ತಾರೆ.” ಎಂದು ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್, ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ದೀರ್ಘಕಾಲದ ವಿರೋಧವಿದೆ ಎಂದು ನೆನಪಿಸಿಕೊಂಡಿದ್ದಾರೆ.

“ನಾವು 1938 ರಿಂದ ಹಿಂದಿಯನ್ನು ವಿರೋಧಿಸುತ್ತಿದ್ದೇವೆ… ನಟರ ಹೇಳಿಕಯಿಂದ ಅಲ್ಲ, ಶಿಕ್ಷಣ ತಜ್ಞರ ಸಲಹೆಗಳ ಆಧಾರದ ಮೇಲೆ ತಮಿಳುನಾಡು ಯಾವಾಗಲೂ ದ್ವಿಭಾಷಾ ಸೂತ್ರವನ್ನು ಅನುಸರಿಸುತ್ತದೆ ಎಂದು ನಾವು ರಾಜ್ಯ ವಿಧಾನಸಭೆಯಲ್ಲಿ ಕಾನೂನು ಅಂಗೀಕರಿಸಿದ್ದೇವೆ. ಈ ಮಸೂದೆಯನ್ನು 1968 ರಲ್ಲಿ ಅಂಗೀಕರಿಸಲಾಯಿತು, ಆಗ ಪವನ್ ಕಲ್ಯಾಣ್ ಜನಿಸಿಯೆ ಇರಲಿಲ್ಲ.” ಎಂದು ಹೇಳಿದ್ದಾರೆ.

“ಅವರಿಗೆ ತಮಿಳುನಾಡಿನ ರಾಜಕೀಯ ತಿಳಿದಿಲ್ಲ. ಜನರನ್ನು ತರಬೇತಿ ಮಾಡಲು ಮಾತೃಭಾಷೆಯಲ್ಲಿ ನೀಡುವ ಶಿಕ್ಷಣವು ಅತ್ಯುತ್ತಮ ಮಾರ್ಗವೆಂದು ನಾವು ನಂಬುತ್ತೇವೆ, ಆದ್ದರಿಂದ ನಾವು ಹಿಂದಿಯನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಪವನ್ ಕಲ್ಯಾಣ್ ಅವರ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಬಿಜೆಪಿ ಸರ್ಕಾರದಿಂದ ಏನಾದರೂ ಪಡೆಯಲು ಬೇಕಾಗಿ ಹೇಗಾದರೂ ಮಾಡಿ ಬಿಜೆಪಿಯನ್ನು ಬೆಂಬಲಿಸಲು ಬಯಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಡಿಎಂಕೆ ಸಂಸದೆ ಕನಿಮೋಳಿ ಅವರು ಪವನ್ ಕಲ್ಯಾಣ್ ಈ ಹಿಂದೆ ಹಿಂದಿ ಹೇರಿಕೆಯನ್ನು ಈ  ಟೀಕಿಸಿದ್ದ ಅವರ ಟ್ವೀಟ್‌ಗಳನ್ನು ಮರುಹಂಚಿಕೊಂಡಿದ್ದಾರೆ. ಈ ಟ್ವೀಟ್ ಅಲ್ಲಿ ಅವರು, ತಂತ್ರಜ್ಞಾನವು ಈಗ ಭಾಷೆಯ ಅಡೆತಡೆಗಳನ್ನು ಮೀರಿ ಚಲನಚಿತ್ರಗಳನ್ನು ಆನಂದಿಸಲು ನಮಗೆ ಅವಕಾಶ ಮಾಡಿಕೊಟ್ಟಿದೆ ಎಂದು ಕನಿಮೋಳಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...