Homeಮುಖಪುಟಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ - ಡಿಎಂಕೆ ತಿರುಗೇಟು

ಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ – ಡಿಎಂಕೆ ತಿರುಗೇಟು

- Advertisement -
- Advertisement -

ತಮಿಳು ಚಲನಚಿತ್ರಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವಾಗ ಹಿಂದಿ ಹೇರಿಕೆಯನ್ನು ತಮಿಳುನಾಡು ಜನರು ಯಾಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದ ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರಿಗೆ ಡಿಎಂಕೆ ತಿರುಗೇಟು ನೀಡಿದ್ದು, ಪವನ್ ಕಲ್ಯಾಣ್ ಹುಟ್ಟುವ ಮೊದಲೆ ತಮಿಳುನಾಡು ಹಿಂದಿ ವಿರುದ್ಧ ಕಾನೂನು ತಂದು, ದ್ವಿಭಾಷ ಸೂತ್ರವನ್ನು ಅಳವಡಿಕೊಂಡಿದ್ದೆವು ಎಂದು ಹೇಳಿದೆ.

ಡಿಎಂಕೆ ವಕ್ತಾರ ಡಾ. ಸೈಯದ್ ಹಫೀಜುಲ್ಲಾ ಅವರು ಪವನ್ ಕಲ್ಯಾಣ್ ಅವರ ಹೇಳಿಕೆಗೆ ತಿರುಗೇಟು ನೀಡಿ, ಭಾಷಾ ನೀತಿಗಳ ಕುರಿತು ಮತ್ತು ತಮಿಳುನಾಡಿನ ನಿಲುವಿನ ಕುರಿತು ಅವರಿಗೆ “ಟೊಳ್ಳು ತಿಳುವಳಿಕೆ” ಇದೆ ಎಂದು ಬಣ್ಣಿಸಿದ್ದಾರೆ. ತಮಿಳುನಾಡು ಹಿಂದಿ ಅಥವಾ ಇತರ ಯಾವುದೇ ಭಾಷೆಯನ್ನು ಕಲಿಯುವ ವ್ಯಕ್ತಿಗಳನ್ನು ಎಂದಿಗೂ ವಿರೋಧಿಸಿಲ್ಲ, ಆದರೆ ತನ್ನ ಜನರ ಮೇಲೆ ಹಿಂದಿ ಅಥವಾ ಯಾವುದೇ ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಪಕ್ಷವಾದ ಜನಸೇನಾ ಸ್ಥಾಪನೆಯ ದಿನದಂದು ಮಾತನಾಡಿದ ಪವನ್ ಕಲ್ಯಾಣ್, ತಮಿಳುನಾಡಿನ ನಿಲುವಿನಲ್ಲಿ ವಿರೋಧಾಭಾಸವಿದೆ ಎಂದು ಹೇಳಿದ್ದರು. “ತಮಿಳುನಾಡು ಹಿಂದಿ ಭಾಷೆಯನ್ನು ನಿರಂತರವಾಗಿ ತಿರಸ್ಕರಿಸುತ್ತಿದೆ. ತಮಗೆ ಅದು ಬೇಡ ಎಂದು ಹೇಳುತ್ತಿದೆ. ಆದರೆ, ನನ್ನ ಮನಸ್ಸಿನಲ್ಲಿ ಒಂದು ಆಲೋಚನೆ ಸುಳಿಯಿತು – ಹಾಗಿದ್ದಲ್ಲಿ, ಅವರು ತಮಿಳು ಚಲನಚಿತ್ರಗಳನ್ನು ಹಿಂದಿಯಲ್ಲಿ ಏಕೆ ಡಬ್ ಮಾಡುತ್ತಾರೆ?” ಎಂದು ಕೇಳಿದ್ದಾರೆ.

“ಅವರು ಉತ್ತರ ಪ್ರದೇಶ, ಬಿಹಾರ ಮತ್ತು ಛತ್ತೀಸ್‌ಗಢದಂತಹ ಹಿಂದಿ ಮಾತನಾಡುವ ರಾಜ್ಯಗಳ ಹಣ ಬೇಕಾಗಿದೆ ಮತ್ತು ಬಿಹಾರದ ಕಾರ್ಮಿಕರನ್ನು ಅವರು ಅವಲಂಬಿಸಿದ್ದಾರೆ. ಆದರೂ, ಅವರು ಹಿಂದಿಯನ್ನು ತಿರಸ್ಕರಿಸುವುದಾಗಿ ಹೇಳಿಕೊಳ್ಳುತ್ತಾರೆ. ಇದು ಹೇಗೆ ನ್ಯಾಯ?” ಅವರು ಹೇಳಿದ್ದಾರೆ. ಪವನ್ ಕಲ್ಯಾಣ್ ಹುಟ್ಟುವ ಮೊದಲೆ

ತಮ್ಮ ಸ್ವಂತ ಅನುಭವಗಳನ್ನು ನೆನಪಿಸಿಕೊಂಡ ಪವನ್ ಕಲ್ಯಾಣ್ ಅವರು ತಮಿಳುನಾಡಿನ ಚೆನ್ನೈನಲ್ಲಿ ತಾನು ಅಧ್ಯಯನ ಮಾಡುತ್ತಿದ್ದಾಗ ತಾರತಮ್ಯವನ್ನು ಎದುರಿಸಿದ್ದೇನೆ ಎಂದು ಅನುಭವ ಹಂಚಿಕೊಂಡಿದ್ದಾರೆ. “ಕೋಪ ಬಂದಾಲೆಲ್ಲಾ ಭಾರತವೇನು ಕತ್ತರಿಸುವ ಕೇಕ್ ತುಂಡೆ? ಯಾರಾದರೂ ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ, ಅದನ್ನು ರಕ್ಷಿಸಲು ನನ್ನಂತಹ ಕೋಟ್ಯಂತರ ಜನರು ಎದ್ದು ನಿಲ್ಲುತ್ತಾರೆ.” ಎಂದು ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್, ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ದೀರ್ಘಕಾಲದ ವಿರೋಧವಿದೆ ಎಂದು ನೆನಪಿಸಿಕೊಂಡಿದ್ದಾರೆ.

“ನಾವು 1938 ರಿಂದ ಹಿಂದಿಯನ್ನು ವಿರೋಧಿಸುತ್ತಿದ್ದೇವೆ… ನಟರ ಹೇಳಿಕಯಿಂದ ಅಲ್ಲ, ಶಿಕ್ಷಣ ತಜ್ಞರ ಸಲಹೆಗಳ ಆಧಾರದ ಮೇಲೆ ತಮಿಳುನಾಡು ಯಾವಾಗಲೂ ದ್ವಿಭಾಷಾ ಸೂತ್ರವನ್ನು ಅನುಸರಿಸುತ್ತದೆ ಎಂದು ನಾವು ರಾಜ್ಯ ವಿಧಾನಸಭೆಯಲ್ಲಿ ಕಾನೂನು ಅಂಗೀಕರಿಸಿದ್ದೇವೆ. ಈ ಮಸೂದೆಯನ್ನು 1968 ರಲ್ಲಿ ಅಂಗೀಕರಿಸಲಾಯಿತು, ಆಗ ಪವನ್ ಕಲ್ಯಾಣ್ ಜನಿಸಿಯೆ ಇರಲಿಲ್ಲ.” ಎಂದು ಹೇಳಿದ್ದಾರೆ.

“ಅವರಿಗೆ ತಮಿಳುನಾಡಿನ ರಾಜಕೀಯ ತಿಳಿದಿಲ್ಲ. ಜನರನ್ನು ತರಬೇತಿ ಮಾಡಲು ಮಾತೃಭಾಷೆಯಲ್ಲಿ ನೀಡುವ ಶಿಕ್ಷಣವು ಅತ್ಯುತ್ತಮ ಮಾರ್ಗವೆಂದು ನಾವು ನಂಬುತ್ತೇವೆ, ಆದ್ದರಿಂದ ನಾವು ಹಿಂದಿಯನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಪವನ್ ಕಲ್ಯಾಣ್ ಅವರ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಬಿಜೆಪಿ ಸರ್ಕಾರದಿಂದ ಏನಾದರೂ ಪಡೆಯಲು ಬೇಕಾಗಿ ಹೇಗಾದರೂ ಮಾಡಿ ಬಿಜೆಪಿಯನ್ನು ಬೆಂಬಲಿಸಲು ಬಯಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಡಿಎಂಕೆ ಸಂಸದೆ ಕನಿಮೋಳಿ ಅವರು ಪವನ್ ಕಲ್ಯಾಣ್ ಈ ಹಿಂದೆ ಹಿಂದಿ ಹೇರಿಕೆಯನ್ನು ಈ  ಟೀಕಿಸಿದ್ದ ಅವರ ಟ್ವೀಟ್‌ಗಳನ್ನು ಮರುಹಂಚಿಕೊಂಡಿದ್ದಾರೆ. ಈ ಟ್ವೀಟ್ ಅಲ್ಲಿ ಅವರು, ತಂತ್ರಜ್ಞಾನವು ಈಗ ಭಾಷೆಯ ಅಡೆತಡೆಗಳನ್ನು ಮೀರಿ ಚಲನಚಿತ್ರಗಳನ್ನು ಆನಂದಿಸಲು ನಮಗೆ ಅವಕಾಶ ಮಾಡಿಕೊಟ್ಟಿದೆ ಎಂದು ಕನಿಮೋಳಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...