Homeಮುಖಪುಟಆಂಧ್ರ ಸಂಪುಟಕ್ಕೆ ಪವನ್ ಕಲ್ಯಾಣ್ ಸಹೋದರ ನಾಗಬಾಬು ಸೇರ್ಪಡೆ; ಸಿಎಂ ನಾಯ್ಡು ಘೋಷಣೆ

ಆಂಧ್ರ ಸಂಪುಟಕ್ಕೆ ಪವನ್ ಕಲ್ಯಾಣ್ ಸಹೋದರ ನಾಗಬಾಬು ಸೇರ್ಪಡೆ; ಸಿಎಂ ನಾಯ್ಡು ಘೋಷಣೆ

- Advertisement -
- Advertisement -

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಸಹೋದರ, ಚಿತ್ರ ನಿರ್ಮಾಪಕ-ನಟ ಕೆ.ನಾಗಬಾಬು ಅವರು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೋಮವಾರ ಪ್ರಕಟಿಸಿದ್ದಾರೆ.

ಪವನ್ ಕಲ್ಯಾಣ್ ಅವರ ಹಿರಿಯ ಸಹೋದರ ಮತ್ತು ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರ ನಾಗಬಾಬು ಅವರು, ನಟ-ಚಲನಚಿತ್ರ ನಿರ್ಮಾಪಕರೂ ಆಗಿದ್ದಾರೆ. ಜನಸೇನೆಯ ಪ್ರಧಾನ ಕಾರ್ಯದರ್ಶಿಯಾಗಿ ಅವರು ಇತ್ತೀಚಿನ ಚುನಾವಣೆಯಲ್ಲಿ ಪಕ್ಷದ ಪರವಾಗಿ ಸಕ್ರಿಯವಾಗಿ ಪ್ರಚಾರ ಮಾಡಿದ್ದರು.

ರಾಜ್ಯಸಭೆಗೆ ಉಪಚುನಾವಣೆಗಾಗಿ ಟಿಡಿಪಿ ಇಬ್ಬರು ಅಭ್ಯರ್ಥಿಗಳನ್ನು ಹೆಸರಿಸಿದ್ದರಿಂದ ಮತ್ತು ತನ್ನ ಮೈತ್ರಿ ಪಾಲುದಾರ ಬಿಜೆಪಿಗೆ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿದ್ದರಿಂದ, ರಾಜ್ಯ ಸಚಿವ ಸಂಪುಟದಲ್ಲಿ ಮತ್ತೊಂದು ಪಾಲುದಾರ ಜನಸೇನೆಗೆ ಅವಕಾಶ ಕಲ್ಪಿಸಲು ನಿರ್ಧರಿಸಿದೆ.

175 ಸದಸ್ಯರ ವಿಧಾನಸಭೆಯಲ್ಲಿ ಟಿಡಿಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 164 ಶಾಸಕರನ್ನು ಹೊಂದಿದೆ. ಟಿಡಿಪಿ 135 ಸದಸ್ಯರನ್ನು ಹೊಂದಿದ್ದರೆ, ಜನಸೇನೆ ಮತ್ತು ಬಿಜೆಪಿ ಕ್ರಮವಾಗಿ 21 ಮತ್ತು 8 ಸ್ಥಾನಗಳನ್ನು ಹೊಂದಿವೆ.

ನಾಗೇಂದ್ರ ಬಾಬು ಎಂದೂ ಕರೆಯಲ್ಪಡುವ ನಾಗಬಾಬು ಅವರು ಜನಸೇನೆಯಿಂದ ನಾಲ್ಕನೇ ಸಚಿವರಾಗಲಿದ್ದಾರೆ. ನಾಗಬಾಬು ಅವರು ವಿಧಾನಸಭೆಯ ಸದಸ್ಯರಲ್ಲದ ಕಾರಣ, ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಸಮ್ಮಿಶ್ರವು ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ.

ಪ್ರಸ್ತುತ, ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟದಲ್ಲಿ ಜನಸೇನೆಯಿಂದ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್, ನಾದೆಂಡ್ಲ ಮನೋಹರ್ ಮತ್ತು ಕಂದುಲ ದುರ್ಗೇಶ್ ಸಚಿವರಾಗಿದ್ದಾರೆ.

ರಾಜ್ಯ ಸಚಿವ ಸಂಪುಟವು ಗರಿಷ್ಠ 25 ಸದಸ್ಯರನ್ನು ಹೊಂದಬಹುದು. ಚಂದ್ರಬಾಬು ನಾಯ್ಡು ಮತ್ತು 23 ಸಚಿವರು ಜೂನ್ 12 ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಟಿಡಿಪಿ ಜನಸೇನೆಯಿಂದ ಮೂವರು ಮತ್ತು ಬಿಜೆಪಿಯಿಂದ ಒಬ್ಬರನ್ನು ಸಚಿವರನ್ನಾಗಿ ಸೇರಿಸಿಕೊಂಡಿತ್ತು. ಜನಸೇನೆಯ ಒಂದು ಸ್ಥಾನ ಖಾಲಿ ಉಳಿದಿತ್ತು.

ಟಿಡಿಪಿ ಜನಸೇನೆಗೆ ಒಂದು ರಾಜ್ಯಸಭಾ ಸ್ಥಾನವನ್ನು ನೀಡಿತ್ತು ಎಂದು ವರದಿಯಾಗಿದೆ. ಆದರೆ, ನಾಗಬಾಬು ಅವರು ಸಚಿವರಾಗಲು ಉತ್ಸುಕರಾಗಿದ್ದರು. ರಾಜ್ಯಸಭಾ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಟ್ಟ ನಂತರ, ಚಂದ್ರಬಾಬು ನಾಯ್ಡು ಅವರು ನಾಗಬಾಬು ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದರು.

ನಾಗಬಾಬು ಅವರು 2014 ರಲ್ಲಿ ಜನಸೇನೆಯನ್ನು ಘೋಷಣೆ ಮಾಡಿದಾಗಿನಿಂದಲೂ ಪವನ್ ಕಲ್ಯಾಣ್ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಇಬ್ಬರೂ ಮೊದಲು 2008 ರಲ್ಲಿ ತಮ್ಮ ಹಿರಿಯ ಸಹೋದರ ಚಿರಂಜೀವಿಯಿಂದ ಪ್ರಜಾರಾಜ್ಯಂ ಪಕ್ಷಕ್ಕೆ (ಪಿಆರ್‌ಪಿ) ಸಕ್ರಿಯವಾಗಿ ಕೆಲಸ ಮಾಡಿದ್ದರು. ಆದರೆ, 2009 ರ ಚುನಾವಣೆಯಲ್ಲಿ ಪಕ್ಷವು ಬೆಳೆಗೆ ಬಂದಿತು. ಎರಡು ವರ್ಷಗಳ ನಂತರ ಚಿರಂಜೀವಿ ಅದನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸಿ, ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದರು.

ಇದನ್ನೂ ಓದಿ; ಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ ‘ವಾಶಿಂಗ್ ಮೆಷಿನ್’ ಕುರಿತು ಚರ್ಚೆಗೆ ನಿಲುವಳಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...