Homeಮುಖಪುಟಪವನ್ ಖೇರಾ ಕೇಸ್ ಲಕ್ನೋಗೆ ವರ್ಗಾವಣೆ, ಮಧ್ಯಂತರ ಜಾಮೀನು ಏ.10 ರವರೆಗೆ ವಿಸ್ತರಣೆ: ಸುಪ್ರೀಂ ಆದೇಶ

ಪವನ್ ಖೇರಾ ಕೇಸ್ ಲಕ್ನೋಗೆ ವರ್ಗಾವಣೆ, ಮಧ್ಯಂತರ ಜಾಮೀನು ಏ.10 ರವರೆಗೆ ವಿಸ್ತರಣೆ: ಸುಪ್ರೀಂ ಆದೇಶ

- Advertisement -
- Advertisement -

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕೆ ಮಾಡಿದ್ದಕ್ಕೆ ದಾಖಲಾದ ಮೂರು ಪ್ರಕರಣಗಳನ್ನು ಲಕ್ನೋಗೆ ವರ್ಗಾಯಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ. ಜೊತೆಗೆ ಅವರ ಮಧ್ಯಂತರ ಜಾಮೀನನ್ನು ಏಪ್ರಿಲ್ 10 ರವರೆಗೆ ವಿಸ್ತರಿಸಿದೆ.

ಪವನ್ ಖೇರಾ ವಿರುದ್ಧ ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಎರಡು ಎಫ್‌ಐಆರ್ ದಾಖಲಾಗಿವೆ. ಫೆಬ್ರವರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಕಾಂಗ್ರೆಸ್ ನಾಯಕ ಖೇರಾ ಅವರು, ಪ್ರಧಾನಿಯನ್ನು ”ನರೇಂದ್ರ ಗೌತಮ್‌ದಾಸ್ ಮೋದಿ” ಎಂದು ಉಲ್ಲೇಖಿಸಿದ್ದಾರೆ – ನರೇಂದ್ರ ದಾಮೋದರದಾಸ್ ಮೋದಿ ಬದಲಿಗೆ – ಅವರನ್ನು ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರೊಂದಿಗೆ ಲಿಂಕ್ ಮಾಡುವ ಮೂಲಕ ವ್ಯಂಗ್ಯ ಮಾಡಿದ್ದಾರೆ.

ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯಿಂದ ಉಂಟಾದ ಬಿಕ್ಕಟ್ಟಿನ ಬಗ್ಗೆ ಖೇರಾ ಅವರು ಮೋದಿ ಸರ್ಕಾರವನ್ನು ಟೀಕಿಸಿದರು, ಅದಾನಿ ಗ್ರೂಪ್ ವಂಚನೆ ಮಾಡಿದೆ ಎಂದು ಆರೋಪಿಸಿದರು. ಈ ಕಂಪನಿ ಸಂಸ್ಥಾಪಕ ಗೌತಮ್ ಅದಾನಿ ಬಗ್ಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಖೇರಾ ಅವರು ಫೆಬ್ರವರಿ 23ರಂದು ದೆಹಲಿ ವಿಮಾನ ನಿಲ್ದಾಣದ ಇಂಡಿಗೋ ವಿಮಾನದಲ್ಲಿ ಪಕ್ಷದ ಇತರ ನಾಯಕರೊಂದಿಗೆ ಕಾಂಗ್ರೆಸ್‌ನ ಸರ್ವಸದಸ್ಯ ಅಧಿವೇಶನಕ್ಕಾಗಿ ರಾಯಪುರಕ್ಕೆ ತೆರಳುತ್ತಿದ್ದರು. ಆ ವೇಳೆ ಅಸ್ಸಾಂ ಪೊಲೀಸರು ಅವರನ್ನು ಕೆಳಗಿಳಿಸಿ ಬಂಧಿಸಿದ್ದರು. ಅದೇ ದಿನ ಖೇರಾ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ಉತ್ತರ ಕ್ಯಾಚಾರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಸದಸ್ಯ ಸ್ಯಾಮ್ಯುಯೆಲ್ ಚಾಂಗ್ಸನ್ ಅವರ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಖೇರಾ ಅವರ ಹೇಳಿಕೆಗಳು ”ಉನ್ನತ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಯನ್ನು ಮಾನಹಾನಿ ಮತ್ತು ಅಪಖ್ಯಾತಿ ಮಾಡುವ ಮೂಲಕ ನಮ್ಮ ರಾಷ್ಟ್ರವನ್ನು ಕೀಳಾಗಿ ಮತ್ತು ಅಸ್ಥಿರಗೊಳಿಸುವ ವ್ಯಾಪಕ ಪಿತೂರಿಯ ಭಾಗವಾಗಿದೆ” ಎಂದು ಚಾಂಗ್ಸನ್ ಆರೋಪಿಸಿದ್ದಾರೆ.

ಸೋಮವಾರದ ವಿಚಾರಣೆಯಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಖೇರಾ ಅವರ ಮಧ್ಯಂತರ ಜಾಮೀನು ಮುಗಿದ ನಂತರ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....