Homeಮುಖಪುಟಪಕ್ಷ ಬಿಟ್ಟವರ ವಿರುದ್ಧ ಪವಾರ್‌ ಗೆರಿಲ್ಲಾ ಯುದ್ಧತಂತ್ರ ಅನುಸರಿಸುತ್ತಿದ್ದಾರೆ: ಸಂಜಯ್ ರಾವುತ್

ಪಕ್ಷ ಬಿಟ್ಟವರ ವಿರುದ್ಧ ಪವಾರ್‌ ಗೆರಿಲ್ಲಾ ಯುದ್ಧತಂತ್ರ ಅನುಸರಿಸುತ್ತಿದ್ದಾರೆ: ಸಂಜಯ್ ರಾವುತ್

- Advertisement -
- Advertisement -

ಪಕ್ಷ ಬಿಟ್ಟವರ ವಿರುದ್ಧ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ಅವರು ಗೆರಿಲ್ಲಾ ಯುದ್ಧತಂತ್ರವನ್ನು ಅನುಸರಿಸುತ್ತಿದ್ದಾರೆ ಎಂದು ಶಿವಸೇನಾದ (ಯುಟಿಬಿ) ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಮ್ಮ ಪಕ್ಷವೂ ರಣರಂಗದಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದೆ” ಎಂದಿದ್ದಾರೆ.

”ಪಕ್ಷ ಬಿಟ್ಟವರ ವಿರುದ್ಧ ಶರದ್ ಪವಾರ್ ಹಾಗೂ ಅವರ ಸಂಗಡಿಗರು ಗೆರಿಲ್ಲಾ ಯುದ್ಧತಂತ್ರವನ್ನು ಅನುಸರಿಸುತ್ತಿದ್ದಾರೆ. ಶರದ್ ಪವಾರ್ ಯಾವತ್ತೂ ಬಿಜೆಪಿ ಜತೆ ಕೈ ಜೋಡಿಸುವುದಿಲ್ಲ. ಅವರು ಮಹಾ ವಿಕಾಸ್‌ ಅಘಾಡಿ ಹಾಗೂ INDIA ಮೈತ್ರಿಕೂಟದ ಪುಮುಖ ನಾಯಕರು, ಅವರು ಎರಡು ಕಲ್ಲಿನ ಮೇಲೆ ಕಾಲಿಟ್ಟಿಲ್ಲ. ಶರದ್ ಪವಾರ್ ಬಗ್ಗೆ ಯಾರಿಗೂ ಅನುಮಾನ ಇಲ್ಲ” ಎಂದು ರಾವುತ್ ಹೇಳಿದ್ದಾರೆ.

ಶಿವಸೇನೆ ಹಾಗೂ ಎನ್‌ಸಿಪಿ ಎರಡೂ ಪಕ್ಷಗಳು ಒಡೆದುಹೋಗಿದ್ದರಿಂದ ನಷ್ಟವಾಗಿದೆ ಎನ್ನುವ ವಾದವನ್ನು ಸಂಜಯ್ ರಾವುತ್ ಅವರು ತಳ್ಳಿಹಾಕಿದ್ದಾರೆ.

ನಮ್ಮ ಪಕ್ಷ ವಿಭಜನೆಯಾಗಿಲ್ಲ: ಶರದ್ ಪವಾರ್

ಮತ್ತೊಂದೆಡೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕೂಡ ತಮ್ಮ ಪಕ್ಷ ವಿಭಜನೆಯಾಗಿದೆ ಎನ್ನುವುದನ್ನು ನಿರಾಕರಿಸಿದ್ದಾರೆ. ”ಕೆಲವು ಶಾಸಕರು ಬಿಟ್ಟು ಹೋಗಿದ್ದು ನಿಜವಷ್ಟೇ, ಶಾಸಕರೆಂದರೆ ಇಡೀ ರಾಜಕೀಯ ಪಕ್ಷ ಅಲ್ಲ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜಯಂತ್ ಪಾಟೀಲ್ ಅವರೇ ರಾಜ್ಯ ಘಟಕವನ್ನೂ ಮುನ್ನಡೆಸುತ್ತಿದ್ದಾರೆ. ಎನ್‌ಸಿಪಿಯಲ್ಲಿ ವಿಭಜನೆ ಉಂಟಾಗಿಲ್ಲ. ಕೆಲವು ಶಾಸಕರು ಪಕ್ಷ ಬಿಟ್ಟಿದ್ದಾರೆ ಎನ್ನುವುದು ನಿಜವಷ್ಟೇ.. ಆದರೆ ಶಾಸಕರೆಂದರೆ ಇಡೀ ರಾಜಕೀಯ ಪಕ್ಷ ಅಲ್ಲ, ಬಂಡಾಯಗಾರರ ಹೆಸರು ಹೇಳಿ ಅವರಿಗೆ ಯಾಕೆ ಪ್ರಾಮುಖ್ಯತೆ ಕೊಡಬೇಕು?” ಎಂದು ಪವಾರ್ ಅವರು ಪ್ರಶ್ನೆ ಮಾಡಿದ್ದಾರೆ.

ಶಿಂದೆ ನೇತೃತ್ವದ ಸರ್ಕಾರಕ್ಕೆ ಸೇರುವ ಬಗ್ಗೆ ಕೆಲವು ಶಾಸಕರು ಪತ್ರ ಬರೆದಿದ್ದಾರೆ. ಆದರೆ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಾವು ಫ್ಯಾಸಿಸ್ಟ್‌ ಪ್ರವೃತ್ತಿಗಳನ್ನು ವಿರೋಧಿಸುತ್ತೇವೆ. ಕೇಂದ್ರ ತನಿಖಾ ತಂಡಗಳ ದುರ್ಬಳಕೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಜಿತ್ ಪವಾರ್ ಹಾಗೂ 8 ಶಾಸಕರು ಜುಲೈ 2ರಂದು ಏಕನಾಥ ಶಿಂದನೇತೃತ್ವದ ಸರ್ಕಾರವನ್ನು ಬೆಂಬಲಿಸಿದ್ದರು. ಅಜಿತ್ ಉಪ ಮುಖ್ಯಮಂತ್ರಿಯಾಗಿಯೂ ಕೆಲ ಶಾಸಕರು ಸಚಿವರಾಗಿಯೂ ಪ್ರಮಾಣವಚನ ಸ್ವೀಕಾರ ಮಾಡಿದ್ದರು.

ಇದನ್ನೂ ಓದಿ: ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...