Homeಕರ್ನಾಟಕಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ: ಪೌರಕಾರ್ಮಿಕರ ಪ್ರತಿಭಟನೆ

ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ: ಪೌರಕಾರ್ಮಿಕರ ಪ್ರತಿಭಟನೆ

- Advertisement -
- Advertisement -

ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.

ಕಸಗುಡಿಸುವ ಪೌರಕಾರ್ಮಿಕರಿಗೆ ಮಾತ್ರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಖಾಯಂ ಮಾಡಲಾಗಿದೆ. ಆದರೆ, ರಾಜ್ಯ ಸರ್ಕಾರವು ಗುತ್ತಿಗೆದಾರರ ಕೋರಿಕೆಗೆ ತಲೆಬಾಗುತ್ತಾ ವಾಹನ ಚಾಲಕರು, ಸಹಾಯಕರು ಮತ್ತು ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಇತರೆ ಪೌರ ಕಾರ್ಮಿಕರನ್ನು ಗುತ್ತಿಗೆ ಪದ್ಧತಿಯಲ್ಲೇ ಉಳಿಸಿಕೊಂಡಿದೆ ಎಂದು ಸಂಘವು ದೂರಿದೆ.

ನೇರ ಪಾವತಿ ಸಂಭಾವನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರೂ ಇಎಸ್‌ಐ ಮತ್ತು ಪಿಎಫ್ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲ. ಸಮರ್ಪಕ ಕಾರಣವಿಲ್ಲದೆ ಕಾರ್ಮಿಕರನ್ನು ವರ್ಗಾವಣೆ ಮಾಡಲಾಗುತ್ತಿದೆ. ಕೆಲಸದ ಸಮಯದಲ್ಲಿ ಸಾವನ್ನಪ್ಪಿದ ಕಾರ್ಮಿಕರಿಗೆ ಪರಿಹಾರ ನೀಡುತ್ತಿಲ್ಲ, ಕೆಲಸ ಮಾಡಲು ಬೇಕಾದ ಯಂತ್ರಗಳು ಮತ್ತು ಸುರಕ್ಷಿತ ಕವಚಗಳನ್ನು ನೀಡುತ್ತಿಲ್ಲ ಎಂದು ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ನಮ್ಮನ್ನು ‘ಗುತ್ತಿಗೆ ಕಾರ್ಮಿಕರು, ನೇರ ಪಾವತಿ ಸಂಭಾವನೆ ಕಾರ್ಮಿಕರು, ಖಾಯಂ ನೌಕರರು, ಕಸ ಗುಡಿಸುವವರೂ, ವಾಹನ ಚಾಲಕರು ಮತ್ತು ಸಹಾಯಕರು’ ಎಂಬ ಹಣೆಪಟ್ಟಿಯನ್ನು ಕಟ್ಟುತ್ತಾ ನಮ್ಮನ್ನು ಬೇರ್ಪಡಿಸಲು ಯತ್ನಿಸುತ್ತಿದೆ. ಈ ಪಟ್ಟಿಗಳು ಕಾರ್ಮಿಕರ ಮಧ್ಯ ತಾರತಮ್ಯ ಮಾಡುವುದಲ್ಲದೆ ನಮ್ಮ ಮಾಲೀಕರು ನಮ್ಮನ್ನು ತುಳಿಯಲು ಸಹಾಯಕವಾಗುತ್ತಿವೆ. ಕಾರ್ಮಿಕರ ಐಕ್ಯತೆಯನ್ನು ಒಡೆಯುವುದಲ್ಲದೆ ಕಾರ್ಮಿಕರ ಶೋಷಣೆಗೆ ಹಾದಿ ಮಾಡಿಕೊಡುತ್ತದೆ. ಗುತ್ತಿಗೆ ಪದ್ಧತಿಯ ಸಂಪೂರ್ಣ ರದ್ದತಿ, ಕಾರ್ಮಿಕರಿಗೆ ಸಮಾನತೆ, ದೌರ್ಜನ್ಯ ಮತ್ತು ಶೋಷಣೆಯಿಂದ ಮುಕ್ತಿಯನ್ನು ನಾವು ಕೇಳುತ್ತಿದ್ದೇವೆ ಎಂದು ಆಗ್ರಹಿಸಿದ್ದಾರೆ.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಕನಿಷ್ಟ ವೇತನವನ್ನು 30,000/- ಕ್ಕೆ ಹೆಚ್ಚಳ ಮಾಡಬೇಕು, ಎಲ್ಲಾ ಪೌರಕಾರ್ಮಿಕರಿಗೆ ಉಚಿತ ವಸತಿಯನ್ನು ಕಲ್ಪಿಸಿಕೊಡಬೇಕು, ಎಲ್ಲಾ ಪೌರಕಾರ್ಮಿಕರನ್ನು ಈ ಕೂಡಲೇ ಖಾಯಂಗೊಳಿಸಬೇಕು ಮತ್ತು ವಾಹನ ಚಾಲಕರು, ಸಹಾಯಕರನ್ನು ನೇರ ಪಾವತಿ ಸಂಭಾವನೆ ವ್ಯವಸ್ಥೆಯಡಿಯಲ್ಲಿ ಸೇರಿಸಿ, ಅವರನ್ನೂ ಖಾಯಂಗೊಳಿಸಬೇಕು ಎಂದು ಪೌರಕಾರ್ಮಿಕರು ಒತ್ತಾಯಿಸಿದರು.


ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...