Homeಕರ್ನಾಟಕಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

- Advertisement -
- Advertisement -

ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ನಿಂತು ನಿರಂತರವಾಗಿ ಕೆಲಸ ಮಾಡುತ್ತಿರುವ ಮೂವರು ಪೌರಕಾರ್ಮಿಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರ್ಕಾರದ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿರುವ ಪೌರಕಾರ್ಮಿಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಸಾವನಪ್ಪಿದ ಪೌರಕಾರ್ಮಿಕರಿಗೆ ಇಂದು ಬೆಳಿಗ್ಗೆ ಮಾಗಡಿ ರಸ್ತೆ ಸೇರಿದಂತೆ ಹಲವೆಡೆ   AICCTU ಸಂಘಟನೆಯ ಪೌರಕಾರ್ಮಿಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೇ ಇಂದು ಸಂಜೆ ಮೊಂಬತ್ತಿ ಪ್ರತಿಭಟನೆಗೆ ಕರೆ ನೀಡಿದ್ದು ಮತ್ತು ನಾಳೆ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ನಿರ್ಧರಿಸಿದೆ.

ವಿಜಯನಗರ ವಾರ್ಡ್‌ ಮತ್ತು ಕತ್ರಿಗುಪ್ಪೆ ವಾರ್ಡ್ ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಗೋರಿಪಾಳ್ಯದ ನಿವಾಸಿಗಳಾದ ನರಸಮ್ಮ ಮತ್ತು ಶ್ರೀನಿವಾಸಲು ಕಳೆದ ವಾರ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಆ ಪೌರಕಾರ್ಮಿಕರ ಪರವಾಗಿ ಒಂದೂ ಮಾತು ಆಡಿಲ್ಲ, ಅವರ ಕುಟುಂಬ ನೆರವು ನೀಡಿಲ್ಲ ಎಂಬುದು ಪೌರಕಾರ್ಮಿಕರ ಆರೋಪವಾಗಿದೆ.

ಇನ್ನೊಂದೆಡೆ ರಾಮಸ್ವಾಮಿ ಪಾಳ್ಯದ 28 ವರ್ಷದ ಶಿಲ್ಪಾ ಎಂಬ ಪೌರಕಾರ್ಮಿಕರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದು ಸೂಕ್ತ ಸಮಯದಲ್ಲಿ ಆಸ್ಪತ್ರೆ ಸಿಗದುದ್ದುದ್ದೆ ಸಾವಿಗೆ ಕಾರಣ ಎಂದು ಕುಟುಂಬದವರು ದೂರಿದ್ದಾರೆ. ಕೋವಿಡ್ ಪಾಸಿಟಿವ್ ಆದ ಅವರಿಗೆ ಉಸಿರಾಟ ಸಮಸ್ಯೆ ಉಂಟಾದಾಗ ವೆಂಟಿಲೇಟರ್ ಇರುವ ಆಸ್ಪತ್ರೆ ಸಿಗದೆ ಅಲೆದಾಡಿದ್ದಾರೆ. 7 ಆಸ್ಪತ್ರೆಗಳ ಅಲೆದಾಟದ ನಂತರ ಕೊನೆಗೆ ಕಾವಲ್ ಭೈರಸಂದ್ರದ ಡಾ.ಬಿ.ಆರ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ, ಮಾಗಡಿ ರಸ್ತೆ, ಬೆಂಗಳೂರು. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆಗೆ ತೀರ್ಮಾನ

Posted by Naanu Gauri on Friday, July 17, 2020

ಇಷ್ಟೆಲ್ಲಾ ಸಾವು ನೋವುಗಳು ವರದಿಯಾಗುತ್ತಿದ್ದರೂ ಸರ್ಕಾರ ನಮ್ಮ ಕಡೆ ಕಣ್ಣೆತ್ತಿ ನೋಡುತ್ತಿಲ್ಲ. ಮಾಸ್ಕ್ ಸ್ಯಾನಿಟೈಸರ್ ಬಿಟ್ಟರೆ ಬೇರೆನೂ ಕೊಡುತ್ತಿಲ್ಲ. ಸಾವನಪ್ಪಿದ ಪೌರಕಾರ್ಮಿಕರ ಕುಟುಂಬಕ್ಕೆ ಕರೆ ಮಾಡಿ ಸಾಂತ್ವಾನ ಹೇಳುವ ಕನಿಷ್ಟ ಕೆಲಸ ಸರ್ಕಾರದ ಕಡೆಯಿಂದ ಆಗಿಲ್ಲ. ಉಳಿದ ಪೌರಕಾರ್ಮಿಕರೂ ಸಹ ಕೋವಿಡ್‌ಗೆ ತುತ್ತಾಗುವ ಸಂಭವವಿರುವುದರಿಂದ ಅವರ ಕಾಳಜಿಗೆ ಸರ್ಕಾರದ ಬಳಿ ಯಾವುದೇ ಕ್ರಮಗಳಿಲ್ಲ. ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಪೌರಕಾರ್ಮಿಕರು ತಿಳಿಸಿದ್ದಾರೆ.

ಇದುವರೆಗೂ ಸೂಕ್ತ ರಕ್ಷಣೆ ನೀಡಿ ಎಂದು ಹಲವಾರು ಮನವಿಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಆದರೆ ಬಿಬಿಎಂಪಿ ಸ್ಪಂದಿಸಿಲ್ಲ. ಸರ್ಕಾರದ ನಿರ್ಲಕ್ಷ್ಯಕ್ಕೆ ಇನ್ನು ಎಷ್ಟು ಜನ ಕಾರ್ಮಿಕರು ಬಾಧಿತರಾಗಬೇಕು ಎಂದು ಪೌರಕಾರ್ಮಿಕರು ಪ್ರಶ್ನಿಸಿದ್ದಾರೆ.

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

ಇಂದು ಸಂಜೆ 7 ಗಂಟೆಗೆ ಎಲ್ಲಾ ಪೌರಕಾರ್ಮಿಕರು ಸೇರಿದಂತೆ ಪ್ರಜ್ಞಾವಂತರು ತಮ್ಮ ತಮ್ಮ ಮನೆಗಳಲ್ಲಿಯೇ ಮೋಂಬತ್ತಿ ಹಚ್ಚುವುದರ ಮೂಲಕ ಸಾವನಪ್ಪಿದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ. ಆ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಜೊತೆಗೆ ಬಿಬಿಎಂಪಿ ಕಮಿಷನರ್, ಬಿಬಿಎಂಪಿ ಮೇಯತ್ ಮತ್ತು aicctukar ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಬೇಕೆಂದು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ಮನವಿ ಮಾಡಿದೆ.

ಅದೇ ರೀತಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಿಬಿಎಂಪಿ ಕಚೇರಿ ಎದುರು ಮತ್ತು ತಮ್ಮ ತಮ್ಮ ವಾರ್ಡ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.


ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...