Homeಕರ್ನಾಟಕಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

- Advertisement -
- Advertisement -

ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ನಿಂತು ನಿರಂತರವಾಗಿ ಕೆಲಸ ಮಾಡುತ್ತಿರುವ ಮೂವರು ಪೌರಕಾರ್ಮಿಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರ್ಕಾರದ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿರುವ ಪೌರಕಾರ್ಮಿಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಸಾವನಪ್ಪಿದ ಪೌರಕಾರ್ಮಿಕರಿಗೆ ಇಂದು ಬೆಳಿಗ್ಗೆ ಮಾಗಡಿ ರಸ್ತೆ ಸೇರಿದಂತೆ ಹಲವೆಡೆ   AICCTU ಸಂಘಟನೆಯ ಪೌರಕಾರ್ಮಿಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೇ ಇಂದು ಸಂಜೆ ಮೊಂಬತ್ತಿ ಪ್ರತಿಭಟನೆಗೆ ಕರೆ ನೀಡಿದ್ದು ಮತ್ತು ನಾಳೆ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ನಿರ್ಧರಿಸಿದೆ.

ವಿಜಯನಗರ ವಾರ್ಡ್‌ ಮತ್ತು ಕತ್ರಿಗುಪ್ಪೆ ವಾರ್ಡ್ ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಗೋರಿಪಾಳ್ಯದ ನಿವಾಸಿಗಳಾದ ನರಸಮ್ಮ ಮತ್ತು ಶ್ರೀನಿವಾಸಲು ಕಳೆದ ವಾರ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಆ ಪೌರಕಾರ್ಮಿಕರ ಪರವಾಗಿ ಒಂದೂ ಮಾತು ಆಡಿಲ್ಲ, ಅವರ ಕುಟುಂಬ ನೆರವು ನೀಡಿಲ್ಲ ಎಂಬುದು ಪೌರಕಾರ್ಮಿಕರ ಆರೋಪವಾಗಿದೆ.

ಇನ್ನೊಂದೆಡೆ ರಾಮಸ್ವಾಮಿ ಪಾಳ್ಯದ 28 ವರ್ಷದ ಶಿಲ್ಪಾ ಎಂಬ ಪೌರಕಾರ್ಮಿಕರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದು ಸೂಕ್ತ ಸಮಯದಲ್ಲಿ ಆಸ್ಪತ್ರೆ ಸಿಗದುದ್ದುದ್ದೆ ಸಾವಿಗೆ ಕಾರಣ ಎಂದು ಕುಟುಂಬದವರು ದೂರಿದ್ದಾರೆ. ಕೋವಿಡ್ ಪಾಸಿಟಿವ್ ಆದ ಅವರಿಗೆ ಉಸಿರಾಟ ಸಮಸ್ಯೆ ಉಂಟಾದಾಗ ವೆಂಟಿಲೇಟರ್ ಇರುವ ಆಸ್ಪತ್ರೆ ಸಿಗದೆ ಅಲೆದಾಡಿದ್ದಾರೆ. 7 ಆಸ್ಪತ್ರೆಗಳ ಅಲೆದಾಟದ ನಂತರ ಕೊನೆಗೆ ಕಾವಲ್ ಭೈರಸಂದ್ರದ ಡಾ.ಬಿ.ಆರ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ, ಮಾಗಡಿ ರಸ್ತೆ, ಬೆಂಗಳೂರು. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆಗೆ ತೀರ್ಮಾನ

Posted by Naanu Gauri on Friday, July 17, 2020

ಇಷ್ಟೆಲ್ಲಾ ಸಾವು ನೋವುಗಳು ವರದಿಯಾಗುತ್ತಿದ್ದರೂ ಸರ್ಕಾರ ನಮ್ಮ ಕಡೆ ಕಣ್ಣೆತ್ತಿ ನೋಡುತ್ತಿಲ್ಲ. ಮಾಸ್ಕ್ ಸ್ಯಾನಿಟೈಸರ್ ಬಿಟ್ಟರೆ ಬೇರೆನೂ ಕೊಡುತ್ತಿಲ್ಲ. ಸಾವನಪ್ಪಿದ ಪೌರಕಾರ್ಮಿಕರ ಕುಟುಂಬಕ್ಕೆ ಕರೆ ಮಾಡಿ ಸಾಂತ್ವಾನ ಹೇಳುವ ಕನಿಷ್ಟ ಕೆಲಸ ಸರ್ಕಾರದ ಕಡೆಯಿಂದ ಆಗಿಲ್ಲ. ಉಳಿದ ಪೌರಕಾರ್ಮಿಕರೂ ಸಹ ಕೋವಿಡ್‌ಗೆ ತುತ್ತಾಗುವ ಸಂಭವವಿರುವುದರಿಂದ ಅವರ ಕಾಳಜಿಗೆ ಸರ್ಕಾರದ ಬಳಿ ಯಾವುದೇ ಕ್ರಮಗಳಿಲ್ಲ. ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಪೌರಕಾರ್ಮಿಕರು ತಿಳಿಸಿದ್ದಾರೆ.

ಇದುವರೆಗೂ ಸೂಕ್ತ ರಕ್ಷಣೆ ನೀಡಿ ಎಂದು ಹಲವಾರು ಮನವಿಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಆದರೆ ಬಿಬಿಎಂಪಿ ಸ್ಪಂದಿಸಿಲ್ಲ. ಸರ್ಕಾರದ ನಿರ್ಲಕ್ಷ್ಯಕ್ಕೆ ಇನ್ನು ಎಷ್ಟು ಜನ ಕಾರ್ಮಿಕರು ಬಾಧಿತರಾಗಬೇಕು ಎಂದು ಪೌರಕಾರ್ಮಿಕರು ಪ್ರಶ್ನಿಸಿದ್ದಾರೆ.

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

ಇಂದು ಸಂಜೆ 7 ಗಂಟೆಗೆ ಎಲ್ಲಾ ಪೌರಕಾರ್ಮಿಕರು ಸೇರಿದಂತೆ ಪ್ರಜ್ಞಾವಂತರು ತಮ್ಮ ತಮ್ಮ ಮನೆಗಳಲ್ಲಿಯೇ ಮೋಂಬತ್ತಿ ಹಚ್ಚುವುದರ ಮೂಲಕ ಸಾವನಪ್ಪಿದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ. ಆ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಜೊತೆಗೆ ಬಿಬಿಎಂಪಿ ಕಮಿಷನರ್, ಬಿಬಿಎಂಪಿ ಮೇಯತ್ ಮತ್ತು aicctukar ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಬೇಕೆಂದು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ಮನವಿ ಮಾಡಿದೆ.

ಅದೇ ರೀತಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಿಬಿಎಂಪಿ ಕಚೇರಿ ಎದುರು ಮತ್ತು ತಮ್ಮ ತಮ್ಮ ವಾರ್ಡ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.


ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...