Homeಕರ್ನಾಟಕಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

- Advertisement -
- Advertisement -

ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ನಿಂತು ನಿರಂತರವಾಗಿ ಕೆಲಸ ಮಾಡುತ್ತಿರುವ ಮೂವರು ಪೌರಕಾರ್ಮಿಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರ್ಕಾರದ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿರುವ ಪೌರಕಾರ್ಮಿಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಸಾವನಪ್ಪಿದ ಪೌರಕಾರ್ಮಿಕರಿಗೆ ಇಂದು ಬೆಳಿಗ್ಗೆ ಮಾಗಡಿ ರಸ್ತೆ ಸೇರಿದಂತೆ ಹಲವೆಡೆ   AICCTU ಸಂಘಟನೆಯ ಪೌರಕಾರ್ಮಿಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೇ ಇಂದು ಸಂಜೆ ಮೊಂಬತ್ತಿ ಪ್ರತಿಭಟನೆಗೆ ಕರೆ ನೀಡಿದ್ದು ಮತ್ತು ನಾಳೆ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ನಿರ್ಧರಿಸಿದೆ.

ವಿಜಯನಗರ ವಾರ್ಡ್‌ ಮತ್ತು ಕತ್ರಿಗುಪ್ಪೆ ವಾರ್ಡ್ ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಗೋರಿಪಾಳ್ಯದ ನಿವಾಸಿಗಳಾದ ನರಸಮ್ಮ ಮತ್ತು ಶ್ರೀನಿವಾಸಲು ಕಳೆದ ವಾರ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಆ ಪೌರಕಾರ್ಮಿಕರ ಪರವಾಗಿ ಒಂದೂ ಮಾತು ಆಡಿಲ್ಲ, ಅವರ ಕುಟುಂಬ ನೆರವು ನೀಡಿಲ್ಲ ಎಂಬುದು ಪೌರಕಾರ್ಮಿಕರ ಆರೋಪವಾಗಿದೆ.

ಇನ್ನೊಂದೆಡೆ ರಾಮಸ್ವಾಮಿ ಪಾಳ್ಯದ 28 ವರ್ಷದ ಶಿಲ್ಪಾ ಎಂಬ ಪೌರಕಾರ್ಮಿಕರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದು ಸೂಕ್ತ ಸಮಯದಲ್ಲಿ ಆಸ್ಪತ್ರೆ ಸಿಗದುದ್ದುದ್ದೆ ಸಾವಿಗೆ ಕಾರಣ ಎಂದು ಕುಟುಂಬದವರು ದೂರಿದ್ದಾರೆ. ಕೋವಿಡ್ ಪಾಸಿಟಿವ್ ಆದ ಅವರಿಗೆ ಉಸಿರಾಟ ಸಮಸ್ಯೆ ಉಂಟಾದಾಗ ವೆಂಟಿಲೇಟರ್ ಇರುವ ಆಸ್ಪತ್ರೆ ಸಿಗದೆ ಅಲೆದಾಡಿದ್ದಾರೆ. 7 ಆಸ್ಪತ್ರೆಗಳ ಅಲೆದಾಟದ ನಂತರ ಕೊನೆಗೆ ಕಾವಲ್ ಭೈರಸಂದ್ರದ ಡಾ.ಬಿ.ಆರ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ, ಮಾಗಡಿ ರಸ್ತೆ, ಬೆಂಗಳೂರು. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆಗೆ ತೀರ್ಮಾನ

Posted by Naanu Gauri on Friday, July 17, 2020

ಇಷ್ಟೆಲ್ಲಾ ಸಾವು ನೋವುಗಳು ವರದಿಯಾಗುತ್ತಿದ್ದರೂ ಸರ್ಕಾರ ನಮ್ಮ ಕಡೆ ಕಣ್ಣೆತ್ತಿ ನೋಡುತ್ತಿಲ್ಲ. ಮಾಸ್ಕ್ ಸ್ಯಾನಿಟೈಸರ್ ಬಿಟ್ಟರೆ ಬೇರೆನೂ ಕೊಡುತ್ತಿಲ್ಲ. ಸಾವನಪ್ಪಿದ ಪೌರಕಾರ್ಮಿಕರ ಕುಟುಂಬಕ್ಕೆ ಕರೆ ಮಾಡಿ ಸಾಂತ್ವಾನ ಹೇಳುವ ಕನಿಷ್ಟ ಕೆಲಸ ಸರ್ಕಾರದ ಕಡೆಯಿಂದ ಆಗಿಲ್ಲ. ಉಳಿದ ಪೌರಕಾರ್ಮಿಕರೂ ಸಹ ಕೋವಿಡ್‌ಗೆ ತುತ್ತಾಗುವ ಸಂಭವವಿರುವುದರಿಂದ ಅವರ ಕಾಳಜಿಗೆ ಸರ್ಕಾರದ ಬಳಿ ಯಾವುದೇ ಕ್ರಮಗಳಿಲ್ಲ. ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಪೌರಕಾರ್ಮಿಕರು ತಿಳಿಸಿದ್ದಾರೆ.

ಇದುವರೆಗೂ ಸೂಕ್ತ ರಕ್ಷಣೆ ನೀಡಿ ಎಂದು ಹಲವಾರು ಮನವಿಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಆದರೆ ಬಿಬಿಎಂಪಿ ಸ್ಪಂದಿಸಿಲ್ಲ. ಸರ್ಕಾರದ ನಿರ್ಲಕ್ಷ್ಯಕ್ಕೆ ಇನ್ನು ಎಷ್ಟು ಜನ ಕಾರ್ಮಿಕರು ಬಾಧಿತರಾಗಬೇಕು ಎಂದು ಪೌರಕಾರ್ಮಿಕರು ಪ್ರಶ್ನಿಸಿದ್ದಾರೆ.

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

ಇಂದು ಸಂಜೆ 7 ಗಂಟೆಗೆ ಎಲ್ಲಾ ಪೌರಕಾರ್ಮಿಕರು ಸೇರಿದಂತೆ ಪ್ರಜ್ಞಾವಂತರು ತಮ್ಮ ತಮ್ಮ ಮನೆಗಳಲ್ಲಿಯೇ ಮೋಂಬತ್ತಿ ಹಚ್ಚುವುದರ ಮೂಲಕ ಸಾವನಪ್ಪಿದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ. ಆ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಜೊತೆಗೆ ಬಿಬಿಎಂಪಿ ಕಮಿಷನರ್, ಬಿಬಿಎಂಪಿ ಮೇಯತ್ ಮತ್ತು aicctukar ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಬೇಕೆಂದು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ಮನವಿ ಮಾಡಿದೆ.

ಅದೇ ರೀತಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಿಬಿಎಂಪಿ ಕಚೇರಿ ಎದುರು ಮತ್ತು ತಮ್ಮ ತಮ್ಮ ವಾರ್ಡ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.


ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...