Homeಕರ್ನಾಟಕಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

- Advertisement -
- Advertisement -

ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ನಿಂತು ನಿರಂತರವಾಗಿ ಕೆಲಸ ಮಾಡುತ್ತಿರುವ ಮೂವರು ಪೌರಕಾರ್ಮಿಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರ್ಕಾರದ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿರುವ ಪೌರಕಾರ್ಮಿಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಸಾವನಪ್ಪಿದ ಪೌರಕಾರ್ಮಿಕರಿಗೆ ಇಂದು ಬೆಳಿಗ್ಗೆ ಮಾಗಡಿ ರಸ್ತೆ ಸೇರಿದಂತೆ ಹಲವೆಡೆ   AICCTU ಸಂಘಟನೆಯ ಪೌರಕಾರ್ಮಿಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೇ ಇಂದು ಸಂಜೆ ಮೊಂಬತ್ತಿ ಪ್ರತಿಭಟನೆಗೆ ಕರೆ ನೀಡಿದ್ದು ಮತ್ತು ನಾಳೆ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ನಿರ್ಧರಿಸಿದೆ.

ವಿಜಯನಗರ ವಾರ್ಡ್‌ ಮತ್ತು ಕತ್ರಿಗುಪ್ಪೆ ವಾರ್ಡ್ ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಗೋರಿಪಾಳ್ಯದ ನಿವಾಸಿಗಳಾದ ನರಸಮ್ಮ ಮತ್ತು ಶ್ರೀನಿವಾಸಲು ಕಳೆದ ವಾರ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಆ ಪೌರಕಾರ್ಮಿಕರ ಪರವಾಗಿ ಒಂದೂ ಮಾತು ಆಡಿಲ್ಲ, ಅವರ ಕುಟುಂಬ ನೆರವು ನೀಡಿಲ್ಲ ಎಂಬುದು ಪೌರಕಾರ್ಮಿಕರ ಆರೋಪವಾಗಿದೆ.

ಇನ್ನೊಂದೆಡೆ ರಾಮಸ್ವಾಮಿ ಪಾಳ್ಯದ 28 ವರ್ಷದ ಶಿಲ್ಪಾ ಎಂಬ ಪೌರಕಾರ್ಮಿಕರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದು ಸೂಕ್ತ ಸಮಯದಲ್ಲಿ ಆಸ್ಪತ್ರೆ ಸಿಗದುದ್ದುದ್ದೆ ಸಾವಿಗೆ ಕಾರಣ ಎಂದು ಕುಟುಂಬದವರು ದೂರಿದ್ದಾರೆ. ಕೋವಿಡ್ ಪಾಸಿಟಿವ್ ಆದ ಅವರಿಗೆ ಉಸಿರಾಟ ಸಮಸ್ಯೆ ಉಂಟಾದಾಗ ವೆಂಟಿಲೇಟರ್ ಇರುವ ಆಸ್ಪತ್ರೆ ಸಿಗದೆ ಅಲೆದಾಡಿದ್ದಾರೆ. 7 ಆಸ್ಪತ್ರೆಗಳ ಅಲೆದಾಟದ ನಂತರ ಕೊನೆಗೆ ಕಾವಲ್ ಭೈರಸಂದ್ರದ ಡಾ.ಬಿ.ಆರ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ, ಮಾಗಡಿ ರಸ್ತೆ, ಬೆಂಗಳೂರು. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆಗೆ ತೀರ್ಮಾನ

Posted by Naanu Gauri on Friday, July 17, 2020

ಇಷ್ಟೆಲ್ಲಾ ಸಾವು ನೋವುಗಳು ವರದಿಯಾಗುತ್ತಿದ್ದರೂ ಸರ್ಕಾರ ನಮ್ಮ ಕಡೆ ಕಣ್ಣೆತ್ತಿ ನೋಡುತ್ತಿಲ್ಲ. ಮಾಸ್ಕ್ ಸ್ಯಾನಿಟೈಸರ್ ಬಿಟ್ಟರೆ ಬೇರೆನೂ ಕೊಡುತ್ತಿಲ್ಲ. ಸಾವನಪ್ಪಿದ ಪೌರಕಾರ್ಮಿಕರ ಕುಟುಂಬಕ್ಕೆ ಕರೆ ಮಾಡಿ ಸಾಂತ್ವಾನ ಹೇಳುವ ಕನಿಷ್ಟ ಕೆಲಸ ಸರ್ಕಾರದ ಕಡೆಯಿಂದ ಆಗಿಲ್ಲ. ಉಳಿದ ಪೌರಕಾರ್ಮಿಕರೂ ಸಹ ಕೋವಿಡ್‌ಗೆ ತುತ್ತಾಗುವ ಸಂಭವವಿರುವುದರಿಂದ ಅವರ ಕಾಳಜಿಗೆ ಸರ್ಕಾರದ ಬಳಿ ಯಾವುದೇ ಕ್ರಮಗಳಿಲ್ಲ. ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಪೌರಕಾರ್ಮಿಕರು ತಿಳಿಸಿದ್ದಾರೆ.

ಇದುವರೆಗೂ ಸೂಕ್ತ ರಕ್ಷಣೆ ನೀಡಿ ಎಂದು ಹಲವಾರು ಮನವಿಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಆದರೆ ಬಿಬಿಎಂಪಿ ಸ್ಪಂದಿಸಿಲ್ಲ. ಸರ್ಕಾರದ ನಿರ್ಲಕ್ಷ್ಯಕ್ಕೆ ಇನ್ನು ಎಷ್ಟು ಜನ ಕಾರ್ಮಿಕರು ಬಾಧಿತರಾಗಬೇಕು ಎಂದು ಪೌರಕಾರ್ಮಿಕರು ಪ್ರಶ್ನಿಸಿದ್ದಾರೆ.

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

ಇಂದು ಸಂಜೆ 7 ಗಂಟೆಗೆ ಎಲ್ಲಾ ಪೌರಕಾರ್ಮಿಕರು ಸೇರಿದಂತೆ ಪ್ರಜ್ಞಾವಂತರು ತಮ್ಮ ತಮ್ಮ ಮನೆಗಳಲ್ಲಿಯೇ ಮೋಂಬತ್ತಿ ಹಚ್ಚುವುದರ ಮೂಲಕ ಸಾವನಪ್ಪಿದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ. ಆ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಜೊತೆಗೆ ಬಿಬಿಎಂಪಿ ಕಮಿಷನರ್, ಬಿಬಿಎಂಪಿ ಮೇಯತ್ ಮತ್ತು aicctukar ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಬೇಕೆಂದು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ಮನವಿ ಮಾಡಿದೆ.

ಅದೇ ರೀತಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಿಬಿಎಂಪಿ ಕಚೇರಿ ಎದುರು ಮತ್ತು ತಮ್ಮ ತಮ್ಮ ವಾರ್ಡ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.


ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...