Homeಕರ್ನಾಟಕಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

- Advertisement -
- Advertisement -

ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ನಿಂತು ನಿರಂತರವಾಗಿ ಕೆಲಸ ಮಾಡುತ್ತಿರುವ ಮೂವರು ಪೌರಕಾರ್ಮಿಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರ್ಕಾರದ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿರುವ ಪೌರಕಾರ್ಮಿಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಸಾವನಪ್ಪಿದ ಪೌರಕಾರ್ಮಿಕರಿಗೆ ಇಂದು ಬೆಳಿಗ್ಗೆ ಮಾಗಡಿ ರಸ್ತೆ ಸೇರಿದಂತೆ ಹಲವೆಡೆ   AICCTU ಸಂಘಟನೆಯ ಪೌರಕಾರ್ಮಿಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೇ ಇಂದು ಸಂಜೆ ಮೊಂಬತ್ತಿ ಪ್ರತಿಭಟನೆಗೆ ಕರೆ ನೀಡಿದ್ದು ಮತ್ತು ನಾಳೆ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ನಿರ್ಧರಿಸಿದೆ.

ವಿಜಯನಗರ ವಾರ್ಡ್‌ ಮತ್ತು ಕತ್ರಿಗುಪ್ಪೆ ವಾರ್ಡ್ ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಗೋರಿಪಾಳ್ಯದ ನಿವಾಸಿಗಳಾದ ನರಸಮ್ಮ ಮತ್ತು ಶ್ರೀನಿವಾಸಲು ಕಳೆದ ವಾರ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಆ ಪೌರಕಾರ್ಮಿಕರ ಪರವಾಗಿ ಒಂದೂ ಮಾತು ಆಡಿಲ್ಲ, ಅವರ ಕುಟುಂಬ ನೆರವು ನೀಡಿಲ್ಲ ಎಂಬುದು ಪೌರಕಾರ್ಮಿಕರ ಆರೋಪವಾಗಿದೆ.

ಇನ್ನೊಂದೆಡೆ ರಾಮಸ್ವಾಮಿ ಪಾಳ್ಯದ 28 ವರ್ಷದ ಶಿಲ್ಪಾ ಎಂಬ ಪೌರಕಾರ್ಮಿಕರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದು ಸೂಕ್ತ ಸಮಯದಲ್ಲಿ ಆಸ್ಪತ್ರೆ ಸಿಗದುದ್ದುದ್ದೆ ಸಾವಿಗೆ ಕಾರಣ ಎಂದು ಕುಟುಂಬದವರು ದೂರಿದ್ದಾರೆ. ಕೋವಿಡ್ ಪಾಸಿಟಿವ್ ಆದ ಅವರಿಗೆ ಉಸಿರಾಟ ಸಮಸ್ಯೆ ಉಂಟಾದಾಗ ವೆಂಟಿಲೇಟರ್ ಇರುವ ಆಸ್ಪತ್ರೆ ಸಿಗದೆ ಅಲೆದಾಡಿದ್ದಾರೆ. 7 ಆಸ್ಪತ್ರೆಗಳ ಅಲೆದಾಟದ ನಂತರ ಕೊನೆಗೆ ಕಾವಲ್ ಭೈರಸಂದ್ರದ ಡಾ.ಬಿ.ಆರ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ, ಮಾಗಡಿ ರಸ್ತೆ, ಬೆಂಗಳೂರು. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆಗೆ ತೀರ್ಮಾನ

Posted by Naanu Gauri on Friday, July 17, 2020

ಇಷ್ಟೆಲ್ಲಾ ಸಾವು ನೋವುಗಳು ವರದಿಯಾಗುತ್ತಿದ್ದರೂ ಸರ್ಕಾರ ನಮ್ಮ ಕಡೆ ಕಣ್ಣೆತ್ತಿ ನೋಡುತ್ತಿಲ್ಲ. ಮಾಸ್ಕ್ ಸ್ಯಾನಿಟೈಸರ್ ಬಿಟ್ಟರೆ ಬೇರೆನೂ ಕೊಡುತ್ತಿಲ್ಲ. ಸಾವನಪ್ಪಿದ ಪೌರಕಾರ್ಮಿಕರ ಕುಟುಂಬಕ್ಕೆ ಕರೆ ಮಾಡಿ ಸಾಂತ್ವಾನ ಹೇಳುವ ಕನಿಷ್ಟ ಕೆಲಸ ಸರ್ಕಾರದ ಕಡೆಯಿಂದ ಆಗಿಲ್ಲ. ಉಳಿದ ಪೌರಕಾರ್ಮಿಕರೂ ಸಹ ಕೋವಿಡ್‌ಗೆ ತುತ್ತಾಗುವ ಸಂಭವವಿರುವುದರಿಂದ ಅವರ ಕಾಳಜಿಗೆ ಸರ್ಕಾರದ ಬಳಿ ಯಾವುದೇ ಕ್ರಮಗಳಿಲ್ಲ. ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಪೌರಕಾರ್ಮಿಕರು ತಿಳಿಸಿದ್ದಾರೆ.

ಇದುವರೆಗೂ ಸೂಕ್ತ ರಕ್ಷಣೆ ನೀಡಿ ಎಂದು ಹಲವಾರು ಮನವಿಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಆದರೆ ಬಿಬಿಎಂಪಿ ಸ್ಪಂದಿಸಿಲ್ಲ. ಸರ್ಕಾರದ ನಿರ್ಲಕ್ಷ್ಯಕ್ಕೆ ಇನ್ನು ಎಷ್ಟು ಜನ ಕಾರ್ಮಿಕರು ಬಾಧಿತರಾಗಬೇಕು ಎಂದು ಪೌರಕಾರ್ಮಿಕರು ಪ್ರಶ್ನಿಸಿದ್ದಾರೆ.

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

ಇಂದು ಸಂಜೆ 7 ಗಂಟೆಗೆ ಎಲ್ಲಾ ಪೌರಕಾರ್ಮಿಕರು ಸೇರಿದಂತೆ ಪ್ರಜ್ಞಾವಂತರು ತಮ್ಮ ತಮ್ಮ ಮನೆಗಳಲ್ಲಿಯೇ ಮೋಂಬತ್ತಿ ಹಚ್ಚುವುದರ ಮೂಲಕ ಸಾವನಪ್ಪಿದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ. ಆ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಜೊತೆಗೆ ಬಿಬಿಎಂಪಿ ಕಮಿಷನರ್, ಬಿಬಿಎಂಪಿ ಮೇಯತ್ ಮತ್ತು aicctukar ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಬೇಕೆಂದು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ಮನವಿ ಮಾಡಿದೆ.

ಅದೇ ರೀತಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಿಬಿಎಂಪಿ ಕಚೇರಿ ಎದುರು ಮತ್ತು ತಮ್ಮ ತಮ್ಮ ವಾರ್ಡ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.


ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...