Homeಕರ್ನಾಟಕಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

- Advertisement -
- Advertisement -

ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ನಿಂತು ನಿರಂತರವಾಗಿ ಕೆಲಸ ಮಾಡುತ್ತಿರುವ ಮೂವರು ಪೌರಕಾರ್ಮಿಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರ್ಕಾರದ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿರುವ ಪೌರಕಾರ್ಮಿಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಸಾವನಪ್ಪಿದ ಪೌರಕಾರ್ಮಿಕರಿಗೆ ಇಂದು ಬೆಳಿಗ್ಗೆ ಮಾಗಡಿ ರಸ್ತೆ ಸೇರಿದಂತೆ ಹಲವೆಡೆ   AICCTU ಸಂಘಟನೆಯ ಪೌರಕಾರ್ಮಿಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೇ ಇಂದು ಸಂಜೆ ಮೊಂಬತ್ತಿ ಪ್ರತಿಭಟನೆಗೆ ಕರೆ ನೀಡಿದ್ದು ಮತ್ತು ನಾಳೆ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ನಿರ್ಧರಿಸಿದೆ.

ವಿಜಯನಗರ ವಾರ್ಡ್‌ ಮತ್ತು ಕತ್ರಿಗುಪ್ಪೆ ವಾರ್ಡ್ ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಗೋರಿಪಾಳ್ಯದ ನಿವಾಸಿಗಳಾದ ನರಸಮ್ಮ ಮತ್ತು ಶ್ರೀನಿವಾಸಲು ಕಳೆದ ವಾರ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಆ ಪೌರಕಾರ್ಮಿಕರ ಪರವಾಗಿ ಒಂದೂ ಮಾತು ಆಡಿಲ್ಲ, ಅವರ ಕುಟುಂಬ ನೆರವು ನೀಡಿಲ್ಲ ಎಂಬುದು ಪೌರಕಾರ್ಮಿಕರ ಆರೋಪವಾಗಿದೆ.

ಇನ್ನೊಂದೆಡೆ ರಾಮಸ್ವಾಮಿ ಪಾಳ್ಯದ 28 ವರ್ಷದ ಶಿಲ್ಪಾ ಎಂಬ ಪೌರಕಾರ್ಮಿಕರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದು ಸೂಕ್ತ ಸಮಯದಲ್ಲಿ ಆಸ್ಪತ್ರೆ ಸಿಗದುದ್ದುದ್ದೆ ಸಾವಿಗೆ ಕಾರಣ ಎಂದು ಕುಟುಂಬದವರು ದೂರಿದ್ದಾರೆ. ಕೋವಿಡ್ ಪಾಸಿಟಿವ್ ಆದ ಅವರಿಗೆ ಉಸಿರಾಟ ಸಮಸ್ಯೆ ಉಂಟಾದಾಗ ವೆಂಟಿಲೇಟರ್ ಇರುವ ಆಸ್ಪತ್ರೆ ಸಿಗದೆ ಅಲೆದಾಡಿದ್ದಾರೆ. 7 ಆಸ್ಪತ್ರೆಗಳ ಅಲೆದಾಟದ ನಂತರ ಕೊನೆಗೆ ಕಾವಲ್ ಭೈರಸಂದ್ರದ ಡಾ.ಬಿ.ಆರ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ

ಕೋವಿಡ್‌ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ, ಮಾಗಡಿ ರಸ್ತೆ, ಬೆಂಗಳೂರು. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆಗೆ ತೀರ್ಮಾನ

Posted by Naanu Gauri on Friday, July 17, 2020

ಇಷ್ಟೆಲ್ಲಾ ಸಾವು ನೋವುಗಳು ವರದಿಯಾಗುತ್ತಿದ್ದರೂ ಸರ್ಕಾರ ನಮ್ಮ ಕಡೆ ಕಣ್ಣೆತ್ತಿ ನೋಡುತ್ತಿಲ್ಲ. ಮಾಸ್ಕ್ ಸ್ಯಾನಿಟೈಸರ್ ಬಿಟ್ಟರೆ ಬೇರೆನೂ ಕೊಡುತ್ತಿಲ್ಲ. ಸಾವನಪ್ಪಿದ ಪೌರಕಾರ್ಮಿಕರ ಕುಟುಂಬಕ್ಕೆ ಕರೆ ಮಾಡಿ ಸಾಂತ್ವಾನ ಹೇಳುವ ಕನಿಷ್ಟ ಕೆಲಸ ಸರ್ಕಾರದ ಕಡೆಯಿಂದ ಆಗಿಲ್ಲ. ಉಳಿದ ಪೌರಕಾರ್ಮಿಕರೂ ಸಹ ಕೋವಿಡ್‌ಗೆ ತುತ್ತಾಗುವ ಸಂಭವವಿರುವುದರಿಂದ ಅವರ ಕಾಳಜಿಗೆ ಸರ್ಕಾರದ ಬಳಿ ಯಾವುದೇ ಕ್ರಮಗಳಿಲ್ಲ. ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಪೌರಕಾರ್ಮಿಕರು ತಿಳಿಸಿದ್ದಾರೆ.

ಇದುವರೆಗೂ ಸೂಕ್ತ ರಕ್ಷಣೆ ನೀಡಿ ಎಂದು ಹಲವಾರು ಮನವಿಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಆದರೆ ಬಿಬಿಎಂಪಿ ಸ್ಪಂದಿಸಿಲ್ಲ. ಸರ್ಕಾರದ ನಿರ್ಲಕ್ಷ್ಯಕ್ಕೆ ಇನ್ನು ಎಷ್ಟು ಜನ ಕಾರ್ಮಿಕರು ಬಾಧಿತರಾಗಬೇಕು ಎಂದು ಪೌರಕಾರ್ಮಿಕರು ಪ್ರಶ್ನಿಸಿದ್ದಾರೆ.

ಎಲ್ಲಾ ಪೌರಕಾರ್ಮಿಕರಿಗೂ ಪಿಪಿಇ ಕಿಟ್ ನೀಡಬೇಕು ಮತ್ತು ಉಚಿತ ಹಾಗೂ ತ್ವರಿತ ಕೋವಿಡ್ ಟೆಸ್ಟ್ ಮಾಡಿಸಬೇಕು, ಉತ್ತಮ ಕೆಲಸದ ವಾತಾವರಣ ಕಲ್ಪಿಸಿ, ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಎಂಬುದು ಕಾರ್ಮಿಕರ ಹಕ್ಕೊತ್ತಾಯವಾಗಿದೆ.

ಇಂದು ಸಂಜೆ 7 ಗಂಟೆಗೆ ಎಲ್ಲಾ ಪೌರಕಾರ್ಮಿಕರು ಸೇರಿದಂತೆ ಪ್ರಜ್ಞಾವಂತರು ತಮ್ಮ ತಮ್ಮ ಮನೆಗಳಲ್ಲಿಯೇ ಮೋಂಬತ್ತಿ ಹಚ್ಚುವುದರ ಮೂಲಕ ಸಾವನಪ್ಪಿದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ. ಆ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಜೊತೆಗೆ ಬಿಬಿಎಂಪಿ ಕಮಿಷನರ್, ಬಿಬಿಎಂಪಿ ಮೇಯತ್ ಮತ್ತು aicctukar ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಬೇಕೆಂದು ಬಿಬಿಎಂಪಿ ಪೌರಕಾರ್ಮಿಕ ಸಂಘ ಮತ್ತು ಅಖಿಲ ಭಾರತ ಪೌರಕಾರ್ಮಿಕ ಸಂಘಟನೆಗಳ ಕೇಂದ್ರ ಸಮಿತಿ ಮನವಿ ಮಾಡಿದೆ.

ಅದೇ ರೀತಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಿಬಿಎಂಪಿ ಕಚೇರಿ ಎದುರು ಮತ್ತು ತಮ್ಮ ತಮ್ಮ ವಾರ್ಡ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.


ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...