Homeಮುಖಪುಟಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

- Advertisement -
- Advertisement -

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಸಂತ್ರಸ್ತರ ಕುಟುಂಬಕ್ಕೆ ಸರಕಾರ 30 ಲಕ್ಷ ರೂ. ಪರಿಹಾರವನ್ನು ನೀಡಬೇಕು ಮತ್ತು ಸುಪ್ರೀಂಕೋರ್ಟ್‌ ಈ ಮೊದಲು ನೀಡಿದ್ದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ದೆಹಲಿ ಹೈಕೋರ್ಟ್‌ ಸೂಚಿಸಿದೆ.

ಈ ವಿಚಾರದಲ್ಲಿ ಓರ್ವ ಸಂತ್ರಸ್ತ ನ್ಯಾಯಾಲಯವನ್ನು ಸಂಪರ್ಕಿಸಿ ಅವರ ಪರವಾಗಿ ಆದೇಶವನ್ನು ಸ್ವೀಕರಿಸಿದಾಗ, ಇಂತಹ ಎಲ್ಲಾ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಂದೇ ರೀತಿಯಾಗಿ ಪರಿಹಾರವನ್ನು ನೀಡಬೇಕು ಎಂದು ನಿರೀಕ್ಷಿಸಲಾಗಿದೆ ಎಂದು ಪೀಠವು ಹೇಳಿದೆ.

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಗಳ ಕುಟುಂಬದ ಸದಸ್ಯರು ರಿಟ್ ಅರ್ಜಿಗಳನ್ನು ಸಲ್ಲಿಸಿ ನ್ಯಾಯಾಲಯವನ್ನು ಸಂಪರ್ಕಿಸಲು ಒತ್ತಾಯಿಸುವ ಬದಲು ಇದೇ ರೀತಿಯ ಎಲ್ಲಾ ಪ್ರಕರಣದಲ್ಲಿ ಸಂತ್ರಸ್ತರಿಗೆ ಸರಿಯಾಗಿ ಪರಿಹಾರವನ್ನು ನೀಡಲು ರಾಜ್ಯವು ಬದ್ಧವಾಗಿದೆ ಎಂದು ನ್ಯಾಯಾಲಯವು ನಿರೀಕ್ಷಿಸುತ್ತದೆ ಎಂದು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಹೇಳಿದ್ದಾರೆ.

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಪತಿಯನ್ನು ಕಳೆದುಕೊಂಡಿರುವ ವಿಧವೆ ಈ ಕುರಿತು ಕೋರ್ಟ್‌ ಮೊರೆ ಹೋಗಿದ್ದರು. ದೆಹಲಿ ಸರ್ಕಾರದಿಂದ ಇಲ್ಲಿಯವರೆಗೆ 10 ಲಕ್ಷ ರೂ. ಮಾತ್ರ ಪರಿಹಾರ ನೀಡಿದೆ. ಇಂತಹ ಪ್ರಕರಣದಲ್ಲಿ 30 ಲಕ್ಷ ರೂ. ಪರಿಹಾರ ನೀಡುವಂತೆ ಇತ್ತೀಚೆಗೆ ಸುಪ್ರೀಂಕೋರ್ಟ್‌ ಆದೇಶವನ್ನು ನೀಡಿತ್ತು ಎಂದು ಸಂತ್ರಸ್ತೆ ಹೈಕೋರ್ಟ್‌ ಗಮನಕ್ಕೆ ತಂದಿದ್ದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂಕೋರ್ಟ್ ಮ್ಯಾನ್ಯುವಲ್‌ ಸ್ಕ್ಯಾವೇಜಿಂಗ್‌ ಪ್ರಕರಣದಲ್ಲಿ ಪರಿಹಾರದ ಮೊತ್ತವನ್ನು ಪ್ರತಿ ಸಂತ್ರಸ್ತರಿಗೆ 10 ಲಕ್ಷದಿಂದ 30 ಲಕ್ಷಕ್ಕೆ ಏರಿಸಿತ್ತು.  ಇದುವರೆಗೆ ಈ ಮೊತ್ತವನ್ನು ಮಂಜೂರು ಮಾಡದ ಸಂತ್ರಸ್ತರಿಗೆ ಅದನ್ನು ಮತ್ತೆ ಮಂಜೂರು ಮಾಡಬೇಕು ಎಂದು ನ್ಯಾಯಾಲಯ ಹೇಳಿತ್ತು.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಪ್ರಕಾರ, 2018 ಮತ್ತು 2023 ರ ನಡುವೆ ಭಾರತದಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ 339 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಕಾನೂನು ಏನು ಹೇಳುತ್ತದೆ?

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಅನ್ನು ಸರ್ಕಾರ ಕಾನೂನುಗಳ ಮೂಲಕ ನಿಷೇಧಿಸಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ. ಅದನ್ನು ತಡೆಯುವುದಕ್ಕಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಮೇಸ್ತ್ರಿಗಳು ಪೌರಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಹೇರಲಾಗಿದೆ. ಹಾಗಿದ್ದರೂ ಬಡವರ ಜೀವವನ್ನು ಲೆಕ್ಕಿಸದೆ ದುಷ್ಟ ಅಧಿಕಾರಿಗಳು ಪೌರ ಕಾರ್ಮಿಕರಿಂದ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಮಾಡಿಸಿತ್ತಿರುವುದು ಅಲ್ಲಲ್ಲಿ ವರದಿಯಾಗುತ್ತಲೇ ಇದೆ.

ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ ಅಪಾಯಕಾರಿ ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013ರ ಕಾನೂನು ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ.

ಇದುವರೆಗೂ ಸಫಾಯಿ ಕರ್ಮಚಾರಿಗಳಾಗಿದ್ದವರಿಗೆ ಪರ್ಯಾಯ ಪುನರ್‌ವಸತಿ ಕಲ್ಪಿಸುವುದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ. 2013ರ ಕಾಯಿದೆ ಮತ್ತು 2013ರ ನಿಯಮಗಳ ಅಡಿಯಲ್ಲಿ ಒಳಗೊಂಡಿರುವ ಶಾಸನಬದ್ಧ ನಿಬಂಧನೆಗಳನ್ನು ಅನುಸರಣೆ ಮಾಡುವಂತೆ ಸ್ಥಳೀಯ ಸಂಸ್ಥೆಗಳ ಎಲ್ಲಾ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವುದು ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40ಕ್ಕೂ ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಈ ಕೆಲಸಕ್ಕಾಗಿ ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ.

ಇದನ್ನು ಓದಿ: ಸರಕಾರಿ ವಸತಿ ನಿಲಯದಲ್ಲಿ ಇಬ್ಬರು ದಲಿತ ಬಾಲಕಿಯರು ಆತ್ಮಹತ್ಯೆ: ತನಿಖೆಗೆ ಕುಟುಂಬಸ್ಥರ ಆಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...