Homeಮುಖಪುಟಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

- Advertisement -
- Advertisement -

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಸಂತ್ರಸ್ತರ ಕುಟುಂಬಕ್ಕೆ ಸರಕಾರ 30 ಲಕ್ಷ ರೂ. ಪರಿಹಾರವನ್ನು ನೀಡಬೇಕು ಮತ್ತು ಸುಪ್ರೀಂಕೋರ್ಟ್‌ ಈ ಮೊದಲು ನೀಡಿದ್ದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ದೆಹಲಿ ಹೈಕೋರ್ಟ್‌ ಸೂಚಿಸಿದೆ.

ಈ ವಿಚಾರದಲ್ಲಿ ಓರ್ವ ಸಂತ್ರಸ್ತ ನ್ಯಾಯಾಲಯವನ್ನು ಸಂಪರ್ಕಿಸಿ ಅವರ ಪರವಾಗಿ ಆದೇಶವನ್ನು ಸ್ವೀಕರಿಸಿದಾಗ, ಇಂತಹ ಎಲ್ಲಾ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಂದೇ ರೀತಿಯಾಗಿ ಪರಿಹಾರವನ್ನು ನೀಡಬೇಕು ಎಂದು ನಿರೀಕ್ಷಿಸಲಾಗಿದೆ ಎಂದು ಪೀಠವು ಹೇಳಿದೆ.

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಗಳ ಕುಟುಂಬದ ಸದಸ್ಯರು ರಿಟ್ ಅರ್ಜಿಗಳನ್ನು ಸಲ್ಲಿಸಿ ನ್ಯಾಯಾಲಯವನ್ನು ಸಂಪರ್ಕಿಸಲು ಒತ್ತಾಯಿಸುವ ಬದಲು ಇದೇ ರೀತಿಯ ಎಲ್ಲಾ ಪ್ರಕರಣದಲ್ಲಿ ಸಂತ್ರಸ್ತರಿಗೆ ಸರಿಯಾಗಿ ಪರಿಹಾರವನ್ನು ನೀಡಲು ರಾಜ್ಯವು ಬದ್ಧವಾಗಿದೆ ಎಂದು ನ್ಯಾಯಾಲಯವು ನಿರೀಕ್ಷಿಸುತ್ತದೆ ಎಂದು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಹೇಳಿದ್ದಾರೆ.

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಪತಿಯನ್ನು ಕಳೆದುಕೊಂಡಿರುವ ವಿಧವೆ ಈ ಕುರಿತು ಕೋರ್ಟ್‌ ಮೊರೆ ಹೋಗಿದ್ದರು. ದೆಹಲಿ ಸರ್ಕಾರದಿಂದ ಇಲ್ಲಿಯವರೆಗೆ 10 ಲಕ್ಷ ರೂ. ಮಾತ್ರ ಪರಿಹಾರ ನೀಡಿದೆ. ಇಂತಹ ಪ್ರಕರಣದಲ್ಲಿ 30 ಲಕ್ಷ ರೂ. ಪರಿಹಾರ ನೀಡುವಂತೆ ಇತ್ತೀಚೆಗೆ ಸುಪ್ರೀಂಕೋರ್ಟ್‌ ಆದೇಶವನ್ನು ನೀಡಿತ್ತು ಎಂದು ಸಂತ್ರಸ್ತೆ ಹೈಕೋರ್ಟ್‌ ಗಮನಕ್ಕೆ ತಂದಿದ್ದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂಕೋರ್ಟ್ ಮ್ಯಾನ್ಯುವಲ್‌ ಸ್ಕ್ಯಾವೇಜಿಂಗ್‌ ಪ್ರಕರಣದಲ್ಲಿ ಪರಿಹಾರದ ಮೊತ್ತವನ್ನು ಪ್ರತಿ ಸಂತ್ರಸ್ತರಿಗೆ 10 ಲಕ್ಷದಿಂದ 30 ಲಕ್ಷಕ್ಕೆ ಏರಿಸಿತ್ತು.  ಇದುವರೆಗೆ ಈ ಮೊತ್ತವನ್ನು ಮಂಜೂರು ಮಾಡದ ಸಂತ್ರಸ್ತರಿಗೆ ಅದನ್ನು ಮತ್ತೆ ಮಂಜೂರು ಮಾಡಬೇಕು ಎಂದು ನ್ಯಾಯಾಲಯ ಹೇಳಿತ್ತು.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಪ್ರಕಾರ, 2018 ಮತ್ತು 2023 ರ ನಡುವೆ ಭಾರತದಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ 339 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಕಾನೂನು ಏನು ಹೇಳುತ್ತದೆ?

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಅನ್ನು ಸರ್ಕಾರ ಕಾನೂನುಗಳ ಮೂಲಕ ನಿಷೇಧಿಸಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ. ಅದನ್ನು ತಡೆಯುವುದಕ್ಕಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಮೇಸ್ತ್ರಿಗಳು ಪೌರಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಹೇರಲಾಗಿದೆ. ಹಾಗಿದ್ದರೂ ಬಡವರ ಜೀವವನ್ನು ಲೆಕ್ಕಿಸದೆ ದುಷ್ಟ ಅಧಿಕಾರಿಗಳು ಪೌರ ಕಾರ್ಮಿಕರಿಂದ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಮಾಡಿಸಿತ್ತಿರುವುದು ಅಲ್ಲಲ್ಲಿ ವರದಿಯಾಗುತ್ತಲೇ ಇದೆ.

ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ ಅಪಾಯಕಾರಿ ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013ರ ಕಾನೂನು ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ.

ಇದುವರೆಗೂ ಸಫಾಯಿ ಕರ್ಮಚಾರಿಗಳಾಗಿದ್ದವರಿಗೆ ಪರ್ಯಾಯ ಪುನರ್‌ವಸತಿ ಕಲ್ಪಿಸುವುದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ. 2013ರ ಕಾಯಿದೆ ಮತ್ತು 2013ರ ನಿಯಮಗಳ ಅಡಿಯಲ್ಲಿ ಒಳಗೊಂಡಿರುವ ಶಾಸನಬದ್ಧ ನಿಬಂಧನೆಗಳನ್ನು ಅನುಸರಣೆ ಮಾಡುವಂತೆ ಸ್ಥಳೀಯ ಸಂಸ್ಥೆಗಳ ಎಲ್ಲಾ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವುದು ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40ಕ್ಕೂ ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಈ ಕೆಲಸಕ್ಕಾಗಿ ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ.

ಇದನ್ನು ಓದಿ: ಸರಕಾರಿ ವಸತಿ ನಿಲಯದಲ್ಲಿ ಇಬ್ಬರು ದಲಿತ ಬಾಲಕಿಯರು ಆತ್ಮಹತ್ಯೆ: ತನಿಖೆಗೆ ಕುಟುಂಬಸ್ಥರ ಆಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...