Homeಮುಖಪುಟ'ಮುಕ್ತ ಅಭಿವ್ಯಕ್ತಿ'ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

‘ಮುಕ್ತ ಅಭಿವ್ಯಕ್ತಿ’ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

ವಿದ್ಯಾರ್ಥಿಗಳು ಅನ್ಯಾಯ ಖಂಡಿಸಿ ಪ್ರತಿಭಟಿಸುವಾಗ, ಅವರ ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸಿ ದೇಶದ್ರೋಹಿಯ ಪಟ್ಟ ಕಟ್ಟಿದ ಮತ್ತು ಕಟ್ಟುತ್ತಿರುವ, ಎಫ್‌ಟಿಐಐ ದೇಶದ್ರೋಹಿಗಳ ತಾಣವಾಗುತ್ತಿದೆ ಎಂದು ನರೇಟಿವ್ ತೇಲಿ ಬಿಡುವ ಶಕ್ತಿಗಳಿಗೆ ಪಾಯಲ್ ಗೆಲುವು ಉತ್ತರ ಕೊಟ್ಟಿದೆ.

- Advertisement -
- Advertisement -

ಭಾರತದ ಚಲನಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ ಅವರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾಗೆ 2024ರ ಕೇನ್ಸ್ ಚಲನಚಿತ್ರೋತ್ಸವದಲ್ಲಿ ‘ಗ್ರ್ಯಾಂಡ್ ಪ್ರಿಕ್ಸ್’ ಪ್ರಶಸ್ತಿ ದೊರೆತಿದೆ. ಕಳೆದ 30 ವರ್ಷಗಳಲ್ಲಿ ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಸಿನಿಮಾವಾಗಿ ಇತಿಹಾಸ ಬರೆದಿದೆ.

ಪಾಯಲ್ ಅವರ ಈ ಐತಿಹಾಸಿಕ ಗೆಲುವು, ಅವರ ವೈಯುಕ್ತಿವಲ್ಲ. ಈ ಗೆಲುವು ‘ಮುಕ್ತ ಅಭಿವ್ಯಕ್ತಿ’ಯ ಮಹತ್ವವನ್ನು ಸಾರಿದೆ. ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್‌ಟಿಐಐ) ಯ ಹಳೆಯ ವಿದ್ಯಾರ್ಥಿಯಾಗಿರುವ ಪಾಯಲ್ ಅವರು, ಈ ಹಿಂದೆ ಅಶಿಸ್ತಿನ ಆರೋಪದ ಮೇಲೆ ಸಂಸ್ಥೆಯಿಂದ ದಂಡನಾತ್ಮಕ ಕ್ರಮಗಳನ್ನು ಎದುರಿಸಿದ್ದರು. ಆದರೆ, ಈಗ ಪಾಯಲ್ ಅವರಿಂದಲೇ ಸಂಸ್ಥೆ ಹೆಮ್ಮೆ ಪಡುವಂತೆ ಆಗಿದೆ.

2015ರಲ್ಲಿ ನಟ ಗಜೇಂದ್ರ ಚೌಹಾಣ್ ಅವರನ್ನು ಎಫ್‌ಟಿಐಐ ಅಧ್ಯಕ್ಷರನ್ನಾಗಿ ನೇಮಿಸುವುದನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಪಾಯಲ್ ಕೂಡ ಒಬ್ಬರು. ಹಿಂದಿ ಚಲನಚಿತ್ರೋದ್ಯಮದ ನಟ ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರಾದ ಚೌಹಾಣ್ ಅವರು, ಭಾರತೀಯ ಚಿತ್ರರಂಗಕ್ಕೆ ಪ್ರಸಿದ್ಧ ನಿರ್ದೇಶಕರು, ನಟರು ಮತ್ತು ತಂತ್ರಜ್ಞರನ್ನು ಸಮರ್ಪಿಸಿದ ಮಹತ್ವದ ಸಂಸ್ಥೆ ಎಫ್‌ಟಿಐಐಯನ್ನು ಮುನ್ನಡೆಸುವ ಅರ್ಹತೆಗಳನ್ನು ಹೊಂದಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು.

ವಿದ್ಯಾರ್ಥಿಗಳ ಗುಂಪು 2015 ರಲ್ಲಿ ಜೂನ್ ಮತ್ತು ಅಕ್ಟೋಬರ್ ನಡುವೆ 139 ದಿನಗಳ ಕಾಲ ಪ್ರತಿಭಟನೆ ನಡೆಸಿತ್ತು. ಪ್ರತಿಭಟನಾ ನಿರತರು ಆಗಿನ ಎಫ್‌ಟಿಐಐ ನಿರ್ದೇಶಕ ಪ್ರಶಾಂತ್ ಪತ್ರಾಭೆ ಅವರ ಕಚೇರಿಗೆ ಮುತ್ತಿಗೆ ಕೂಡ ಹಾಕಿದ್ದರು. ಈ ಸಂಬಂಧ ಪುಣೆ ಪೊಲೀಸರು ಅನೇಕ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿದ್ದರು. ಎಫ್‌ಟಿಐಐ ಆಡಳಿತವು ಕಪಾಡಿಯಾ ಸೇರಿದಂತೆ ಎಂಟು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡಿತ್ತು. ಅವರ ವಿದ್ಯಾರ್ಥಿವೇತನವನ್ನು ಕಡಿತಗೊಳಿಸಿತ್ತು ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಲು ಸಹಾಯ ಮಾಡುವ ವಿದೇಶಿ ವಿನಿಮಯ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಅವರನ್ನು ನಿಷೇಧಿಸಿತ್ತು.

2017 ಕಿರುಚಿತ್ರ ‘ಆಫ್ಟರ್‌ನೂನ್ ಕ್ಲೌಡ್ಸ್’ ಕೇನ್ಸ್‌ನ ಸಿನೆಫೋಂಡೇಶನ್ ವಿಭಾಗಕ್ಕೆ ಆಯ್ಕೆಯಾಗುವ ಮೂಲಕ ಕಪಾಡಿಯ ಅವರು ಜಾಗತಿಕ ಚಲನಚಿತ್ರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. ಎಫ್‌ಟಿಐಐನ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದ ಕಪಾಡಿಯ ಅವರಿಗೆ ಕೇನ್ಸ್‌ ಪ್ರಯಾಣವನ್ನು ಪ್ರಾಯೋಜಿಸಿತ್ತು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, “ಕಪಾಡಿಯಾ ತನ್ನ ನಡವಳಿಕೆಯಲ್ಲಿ ಶಿಸ್ತುಬದ್ಧವಾಗಿರುವುದನ್ನು ಗಮನಿಸಿದ” ಎಫ್‌ಟಿಐಐ  ಈ ನಿರ್ಧಾರವನ್ನು ತೆಗೆದುಕೊಂಡಿತ್ತು.

ಆ ಬಳಿಕ ಕಪಾಡಿಯ ಯಶಸ್ಸಿನ ಮೆಟ್ಟಿಲೇರಲು ಪ್ರಾರಂಭಿಸಿದರು. 2019 ರಲ್ಲಿ, ಅವರು ‘ಎ ನೈಟ್ ಆಫ್ ನೋಯಿಂಗ್ ನಥಿಂಗ್’ ಎಂಬ ಸಾಕ್ಷ್ಯಚಿತ್ರವನ್ನು ಪೂರ್ಣಗೊಳಿಸಿದರು. ಇದು 2021ರ ಕೇನ್ಸ್ ಚಲನಚಿತ್ರೋತ್ಸವದ ಡೈರೆಕ್ಟರ್ಸ್ ಫೋರ್ಟ್‌ನೈಟ್ ಸೈಡ್-ಬಾರ್‌ನಲ್ಲಿ ಪ್ರಥಮ ಪ್ರದರ್ಶನಗೊಂಡಿತ್ತು. ಅಲ್ಲಿ ‘ಗೋಲ್ಡನ್ ಐ’ ಪ್ರಶಸ್ತಿ ಗೆದ್ದುಕೊಂಡಿತ್ತು.

ಎಫ್‌ಟಿಐಐನ ಇತರ ಪ್ರತಿಭೆಗಳೂ ಅ ವರ್ಷ ಕೇನ್ಸ್‌ನಲ್ಲಿ ಮಿಂಚಿದ್ದರು. ವಿದ್ಯಾರ್ಥಿ ಚಲನಚಿತ್ರ ವಿಭಾಗದಲ್ಲಿ ಎಫ್‌ಟಿಐಐ ವಿದ್ಯಾರ್ಥಿ ಚಿದಾನಂದ್ ಎಸ್ ನಾಯಕ್ ಅವರ ‘ಸನ್‌ ಫ್ಲವರ್ಸ್ ವೇರ್ ಫಸ್ಟ್ ಒನ್ಸ್ ಟು ನೋ’ ಮತ್ತು ಮೈಸಮ್ ಅಲಿಯ ‘ರಿಟ್ರೀಟ್’ ಪ್ರಶಸ್ತಿ ಪಡೆದಿತ್ತು. (ಅಲಿ ಕಪಾಡಿಯಾ ಅವರ ಬ್ಯಾಚ್ ಮೇಟ್ ಆಗಿದ್ದರು) ಎಫ್‌ಟಿಐಐನ ಹಳೆ ವಿದ್ಯಾರ್ಥಿ ಸಂತೋಷ್ ಶಿವನ್ ಅವರು ‘ಪಿಯರೆ ಆಂಜೆನಿಯಕ್ಸ್ ಟ್ರಿಬ್ಯೂಟ್‌’ನೊಂದಿಗೆ ಸಿನಿಮಾಟೋಗ್ರಫಿಗೆ ನೀಡಿದ ಕೊಡುಗೆಗಳಿಗಾಗಿ ಗೌರವಿಸಲ್ಪಟ್ಟಿದ್ದರು.

ಪುಣೆಯ ಫಿಲ್ಮ್ ಇನ್‌ಸ್ಟಿಟ್ಯೂಟ್ ಹಿಂದುತ್ವವಾದಿಗಳ ಪ್ರಮುಖ ಗುರಿಯಾಗಿದೆ. ಜನವರಿಯಲ್ಲಿ, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಹಿಂದುತ್ವ ಬೆಂಬಲಿಗರು ಕ್ಯಾಂಪಸ್‌ಗೆ ನುಗ್ಗಿ 1992 ರ ಬಾಬ್ರಿ ಮಸೀದಿ ಧ್ವಂಸವನ್ನು ನೆನಪಿಸುವ ಪೋಸ್ಟರ್ ಅನ್ನು ಹರಿದು ಹಾಕಿದ್ದರು. ಆಗ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪೋಸ್ಟರ್ ಅಂಟಿಸಿದ್ದ ಏಳು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪಾಯಲ್ ಅವರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾ. ಪ್ರಭಾ ಎಂಬ ನರ್ಸ್ ಕಥೆಯನ್ನು ಒಳಗೊಂಡಿದೆ. ಭಾವನೆಗಳ ಸುತ್ತ ಕಥೆ ಸಾಗುತ್ತದೆ. ಪ್ರತಿಭಟಿಸಿದ ಕಾರಣಕ್ಕೆ ಸಂಸ್ಥೆಯ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದ ಪಾಯಲ್, ತನ್ನ ಪ್ರತಿಭೆಯ ಮೂಲಕ ಎಲ್ಲರ ಬಾಯಿ ಮುಚ್ಚಿಸಿದ್ದಾರೆ.

ವಿದ್ಯಾರ್ಥಿಗಳು ಅನ್ಯಾಯ ಖಂಡಿಸಿ ಪ್ರತಿಭಟಿಸುವಾಗ, ಅವರ ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸಿ ದೇಶದ್ರೋಹಿಯ ಪಟ್ಟ ಕಟ್ಟಿದ ಮತ್ತು ಕಟ್ಟುತ್ತಿರುವ, ಎಫ್‌ಟಿಐಐ ದೇಶದ್ರೋಹಿಗಳ ತಾಣವಾಗುತ್ತಿದೆ ಎಂದು ನರೇಟಿವ್ ತೇಲಿ ಬಿಡುವ ಶಕ್ತಿಗಳಿಗೆ ಪಾಯಲ್ ಗೆಲುವು ಉತ್ತರ ಕೊಟ್ಟಿದೆ.

ಭಾರತದ ಪ್ರಖ್ಯಾತ ಚಲನಚಿತ್ರ ಶಾಲೆಯು ಕಠಿಣ ತರಬೇತಿ ಪಡೆದ ಮುಕ್ತ ಮನಸ್ಸಿನ ಮತ್ತು ಸಾಹಸಮಯ ಚಲನಚಿತ್ರ ನಿರ್ಮಾಪಕರ ಖ್ಯಾತಿಯನ್ನು ಉಳಿಸಿಕೊಂಡಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ತಮ್ಮ ಸಾಂವಿಧಾನಿಕ ಅಭಿವ್ಯಕ್ತಿಯನ್ನು ಎತ್ತಿ ಹಿಡಿದರೆ ದೇಶದ್ರೋಹಿಯ ಪಟ್ಟ ಕಟ್ಟುವ ಸಂದಿಗ್ಧ ಪರಿಸ್ಥಿತಿಯಲ್ಲಿ, ಇಲ್ಲ ತಮ್ಮ ಮುಕ್ತ ಅಭಿವ್ಯಕ್ತಿಯ ಮೂಲಕವೇ ಅವರು ದೇಶಕ್ಕೆ ಕೀರ್ತಿ ತರಬಲ್ಲರು ಮತ್ತು ಎಫಟಿಐಐನಂತಹ ಸಂಸ್ಥೆಗಳಲ್ಲಿ ಮುಕ್ತ ಅಭಿವ್ಯಕ್ತಿ ಎಷ್ಟು ಮುಖ್ಯ ಎಂಬುವುದನ್ನು ಪಾಯಲ್ ಗೆಲುವು ಸಾರಿ ಹೇಳಿದೆ.

ಇದನ್ನೂ ಓದಿ : ಕಾನ್ ಚಿತ್ರೋತ್ಸವ: ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ಗಾಗಿ ಪ್ರಶಸ್ತಿ ಪಡೆದ ನಿರ್ಮಾಪಕಿ ಪಾಯಲ್ ಕಪಾಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...