Homeಮುಖಪುಟ'ಮುಕ್ತ ಅಭಿವ್ಯಕ್ತಿ'ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

‘ಮುಕ್ತ ಅಭಿವ್ಯಕ್ತಿ’ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

ವಿದ್ಯಾರ್ಥಿಗಳು ಅನ್ಯಾಯ ಖಂಡಿಸಿ ಪ್ರತಿಭಟಿಸುವಾಗ, ಅವರ ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸಿ ದೇಶದ್ರೋಹಿಯ ಪಟ್ಟ ಕಟ್ಟಿದ ಮತ್ತು ಕಟ್ಟುತ್ತಿರುವ, ಎಫ್‌ಟಿಐಐ ದೇಶದ್ರೋಹಿಗಳ ತಾಣವಾಗುತ್ತಿದೆ ಎಂದು ನರೇಟಿವ್ ತೇಲಿ ಬಿಡುವ ಶಕ್ತಿಗಳಿಗೆ ಪಾಯಲ್ ಗೆಲುವು ಉತ್ತರ ಕೊಟ್ಟಿದೆ.

- Advertisement -
- Advertisement -

ಭಾರತದ ಚಲನಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ ಅವರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾಗೆ 2024ರ ಕೇನ್ಸ್ ಚಲನಚಿತ್ರೋತ್ಸವದಲ್ಲಿ ‘ಗ್ರ್ಯಾಂಡ್ ಪ್ರಿಕ್ಸ್’ ಪ್ರಶಸ್ತಿ ದೊರೆತಿದೆ. ಕಳೆದ 30 ವರ್ಷಗಳಲ್ಲಿ ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಸಿನಿಮಾವಾಗಿ ಇತಿಹಾಸ ಬರೆದಿದೆ.

ಪಾಯಲ್ ಅವರ ಈ ಐತಿಹಾಸಿಕ ಗೆಲುವು, ಅವರ ವೈಯುಕ್ತಿವಲ್ಲ. ಈ ಗೆಲುವು ‘ಮುಕ್ತ ಅಭಿವ್ಯಕ್ತಿ’ಯ ಮಹತ್ವವನ್ನು ಸಾರಿದೆ. ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್‌ಟಿಐಐ) ಯ ಹಳೆಯ ವಿದ್ಯಾರ್ಥಿಯಾಗಿರುವ ಪಾಯಲ್ ಅವರು, ಈ ಹಿಂದೆ ಅಶಿಸ್ತಿನ ಆರೋಪದ ಮೇಲೆ ಸಂಸ್ಥೆಯಿಂದ ದಂಡನಾತ್ಮಕ ಕ್ರಮಗಳನ್ನು ಎದುರಿಸಿದ್ದರು. ಆದರೆ, ಈಗ ಪಾಯಲ್ ಅವರಿಂದಲೇ ಸಂಸ್ಥೆ ಹೆಮ್ಮೆ ಪಡುವಂತೆ ಆಗಿದೆ.

2015ರಲ್ಲಿ ನಟ ಗಜೇಂದ್ರ ಚೌಹಾಣ್ ಅವರನ್ನು ಎಫ್‌ಟಿಐಐ ಅಧ್ಯಕ್ಷರನ್ನಾಗಿ ನೇಮಿಸುವುದನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಪಾಯಲ್ ಕೂಡ ಒಬ್ಬರು. ಹಿಂದಿ ಚಲನಚಿತ್ರೋದ್ಯಮದ ನಟ ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರಾದ ಚೌಹಾಣ್ ಅವರು, ಭಾರತೀಯ ಚಿತ್ರರಂಗಕ್ಕೆ ಪ್ರಸಿದ್ಧ ನಿರ್ದೇಶಕರು, ನಟರು ಮತ್ತು ತಂತ್ರಜ್ಞರನ್ನು ಸಮರ್ಪಿಸಿದ ಮಹತ್ವದ ಸಂಸ್ಥೆ ಎಫ್‌ಟಿಐಐಯನ್ನು ಮುನ್ನಡೆಸುವ ಅರ್ಹತೆಗಳನ್ನು ಹೊಂದಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು.

ವಿದ್ಯಾರ್ಥಿಗಳ ಗುಂಪು 2015 ರಲ್ಲಿ ಜೂನ್ ಮತ್ತು ಅಕ್ಟೋಬರ್ ನಡುವೆ 139 ದಿನಗಳ ಕಾಲ ಪ್ರತಿಭಟನೆ ನಡೆಸಿತ್ತು. ಪ್ರತಿಭಟನಾ ನಿರತರು ಆಗಿನ ಎಫ್‌ಟಿಐಐ ನಿರ್ದೇಶಕ ಪ್ರಶಾಂತ್ ಪತ್ರಾಭೆ ಅವರ ಕಚೇರಿಗೆ ಮುತ್ತಿಗೆ ಕೂಡ ಹಾಕಿದ್ದರು. ಈ ಸಂಬಂಧ ಪುಣೆ ಪೊಲೀಸರು ಅನೇಕ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿದ್ದರು. ಎಫ್‌ಟಿಐಐ ಆಡಳಿತವು ಕಪಾಡಿಯಾ ಸೇರಿದಂತೆ ಎಂಟು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡಿತ್ತು. ಅವರ ವಿದ್ಯಾರ್ಥಿವೇತನವನ್ನು ಕಡಿತಗೊಳಿಸಿತ್ತು ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಲು ಸಹಾಯ ಮಾಡುವ ವಿದೇಶಿ ವಿನಿಮಯ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಅವರನ್ನು ನಿಷೇಧಿಸಿತ್ತು.

2017 ಕಿರುಚಿತ್ರ ‘ಆಫ್ಟರ್‌ನೂನ್ ಕ್ಲೌಡ್ಸ್’ ಕೇನ್ಸ್‌ನ ಸಿನೆಫೋಂಡೇಶನ್ ವಿಭಾಗಕ್ಕೆ ಆಯ್ಕೆಯಾಗುವ ಮೂಲಕ ಕಪಾಡಿಯ ಅವರು ಜಾಗತಿಕ ಚಲನಚಿತ್ರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. ಎಫ್‌ಟಿಐಐನ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದ ಕಪಾಡಿಯ ಅವರಿಗೆ ಕೇನ್ಸ್‌ ಪ್ರಯಾಣವನ್ನು ಪ್ರಾಯೋಜಿಸಿತ್ತು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, “ಕಪಾಡಿಯಾ ತನ್ನ ನಡವಳಿಕೆಯಲ್ಲಿ ಶಿಸ್ತುಬದ್ಧವಾಗಿರುವುದನ್ನು ಗಮನಿಸಿದ” ಎಫ್‌ಟಿಐಐ  ಈ ನಿರ್ಧಾರವನ್ನು ತೆಗೆದುಕೊಂಡಿತ್ತು.

ಆ ಬಳಿಕ ಕಪಾಡಿಯ ಯಶಸ್ಸಿನ ಮೆಟ್ಟಿಲೇರಲು ಪ್ರಾರಂಭಿಸಿದರು. 2019 ರಲ್ಲಿ, ಅವರು ‘ಎ ನೈಟ್ ಆಫ್ ನೋಯಿಂಗ್ ನಥಿಂಗ್’ ಎಂಬ ಸಾಕ್ಷ್ಯಚಿತ್ರವನ್ನು ಪೂರ್ಣಗೊಳಿಸಿದರು. ಇದು 2021ರ ಕೇನ್ಸ್ ಚಲನಚಿತ್ರೋತ್ಸವದ ಡೈರೆಕ್ಟರ್ಸ್ ಫೋರ್ಟ್‌ನೈಟ್ ಸೈಡ್-ಬಾರ್‌ನಲ್ಲಿ ಪ್ರಥಮ ಪ್ರದರ್ಶನಗೊಂಡಿತ್ತು. ಅಲ್ಲಿ ‘ಗೋಲ್ಡನ್ ಐ’ ಪ್ರಶಸ್ತಿ ಗೆದ್ದುಕೊಂಡಿತ್ತು.

ಎಫ್‌ಟಿಐಐನ ಇತರ ಪ್ರತಿಭೆಗಳೂ ಅ ವರ್ಷ ಕೇನ್ಸ್‌ನಲ್ಲಿ ಮಿಂಚಿದ್ದರು. ವಿದ್ಯಾರ್ಥಿ ಚಲನಚಿತ್ರ ವಿಭಾಗದಲ್ಲಿ ಎಫ್‌ಟಿಐಐ ವಿದ್ಯಾರ್ಥಿ ಚಿದಾನಂದ್ ಎಸ್ ನಾಯಕ್ ಅವರ ‘ಸನ್‌ ಫ್ಲವರ್ಸ್ ವೇರ್ ಫಸ್ಟ್ ಒನ್ಸ್ ಟು ನೋ’ ಮತ್ತು ಮೈಸಮ್ ಅಲಿಯ ‘ರಿಟ್ರೀಟ್’ ಪ್ರಶಸ್ತಿ ಪಡೆದಿತ್ತು. (ಅಲಿ ಕಪಾಡಿಯಾ ಅವರ ಬ್ಯಾಚ್ ಮೇಟ್ ಆಗಿದ್ದರು) ಎಫ್‌ಟಿಐಐನ ಹಳೆ ವಿದ್ಯಾರ್ಥಿ ಸಂತೋಷ್ ಶಿವನ್ ಅವರು ‘ಪಿಯರೆ ಆಂಜೆನಿಯಕ್ಸ್ ಟ್ರಿಬ್ಯೂಟ್‌’ನೊಂದಿಗೆ ಸಿನಿಮಾಟೋಗ್ರಫಿಗೆ ನೀಡಿದ ಕೊಡುಗೆಗಳಿಗಾಗಿ ಗೌರವಿಸಲ್ಪಟ್ಟಿದ್ದರು.

ಪುಣೆಯ ಫಿಲ್ಮ್ ಇನ್‌ಸ್ಟಿಟ್ಯೂಟ್ ಹಿಂದುತ್ವವಾದಿಗಳ ಪ್ರಮುಖ ಗುರಿಯಾಗಿದೆ. ಜನವರಿಯಲ್ಲಿ, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಹಿಂದುತ್ವ ಬೆಂಬಲಿಗರು ಕ್ಯಾಂಪಸ್‌ಗೆ ನುಗ್ಗಿ 1992 ರ ಬಾಬ್ರಿ ಮಸೀದಿ ಧ್ವಂಸವನ್ನು ನೆನಪಿಸುವ ಪೋಸ್ಟರ್ ಅನ್ನು ಹರಿದು ಹಾಕಿದ್ದರು. ಆಗ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪೋಸ್ಟರ್ ಅಂಟಿಸಿದ್ದ ಏಳು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪಾಯಲ್ ಅವರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾ. ಪ್ರಭಾ ಎಂಬ ನರ್ಸ್ ಕಥೆಯನ್ನು ಒಳಗೊಂಡಿದೆ. ಭಾವನೆಗಳ ಸುತ್ತ ಕಥೆ ಸಾಗುತ್ತದೆ. ಪ್ರತಿಭಟಿಸಿದ ಕಾರಣಕ್ಕೆ ಸಂಸ್ಥೆಯ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದ ಪಾಯಲ್, ತನ್ನ ಪ್ರತಿಭೆಯ ಮೂಲಕ ಎಲ್ಲರ ಬಾಯಿ ಮುಚ್ಚಿಸಿದ್ದಾರೆ.

ವಿದ್ಯಾರ್ಥಿಗಳು ಅನ್ಯಾಯ ಖಂಡಿಸಿ ಪ್ರತಿಭಟಿಸುವಾಗ, ಅವರ ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸಿ ದೇಶದ್ರೋಹಿಯ ಪಟ್ಟ ಕಟ್ಟಿದ ಮತ್ತು ಕಟ್ಟುತ್ತಿರುವ, ಎಫ್‌ಟಿಐಐ ದೇಶದ್ರೋಹಿಗಳ ತಾಣವಾಗುತ್ತಿದೆ ಎಂದು ನರೇಟಿವ್ ತೇಲಿ ಬಿಡುವ ಶಕ್ತಿಗಳಿಗೆ ಪಾಯಲ್ ಗೆಲುವು ಉತ್ತರ ಕೊಟ್ಟಿದೆ.

ಭಾರತದ ಪ್ರಖ್ಯಾತ ಚಲನಚಿತ್ರ ಶಾಲೆಯು ಕಠಿಣ ತರಬೇತಿ ಪಡೆದ ಮುಕ್ತ ಮನಸ್ಸಿನ ಮತ್ತು ಸಾಹಸಮಯ ಚಲನಚಿತ್ರ ನಿರ್ಮಾಪಕರ ಖ್ಯಾತಿಯನ್ನು ಉಳಿಸಿಕೊಂಡಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ತಮ್ಮ ಸಾಂವಿಧಾನಿಕ ಅಭಿವ್ಯಕ್ತಿಯನ್ನು ಎತ್ತಿ ಹಿಡಿದರೆ ದೇಶದ್ರೋಹಿಯ ಪಟ್ಟ ಕಟ್ಟುವ ಸಂದಿಗ್ಧ ಪರಿಸ್ಥಿತಿಯಲ್ಲಿ, ಇಲ್ಲ ತಮ್ಮ ಮುಕ್ತ ಅಭಿವ್ಯಕ್ತಿಯ ಮೂಲಕವೇ ಅವರು ದೇಶಕ್ಕೆ ಕೀರ್ತಿ ತರಬಲ್ಲರು ಮತ್ತು ಎಫಟಿಐಐನಂತಹ ಸಂಸ್ಥೆಗಳಲ್ಲಿ ಮುಕ್ತ ಅಭಿವ್ಯಕ್ತಿ ಎಷ್ಟು ಮುಖ್ಯ ಎಂಬುವುದನ್ನು ಪಾಯಲ್ ಗೆಲುವು ಸಾರಿ ಹೇಳಿದೆ.

ಇದನ್ನೂ ಓದಿ : ಕಾನ್ ಚಿತ್ರೋತ್ಸವ: ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ಗಾಗಿ ಪ್ರಶಸ್ತಿ ಪಡೆದ ನಿರ್ಮಾಪಕಿ ಪಾಯಲ್ ಕಪಾಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...