Homeಮುಖಪುಟ'ಮುಕ್ತ ಅಭಿವ್ಯಕ್ತಿ'ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

‘ಮುಕ್ತ ಅಭಿವ್ಯಕ್ತಿ’ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

ವಿದ್ಯಾರ್ಥಿಗಳು ಅನ್ಯಾಯ ಖಂಡಿಸಿ ಪ್ರತಿಭಟಿಸುವಾಗ, ಅವರ ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸಿ ದೇಶದ್ರೋಹಿಯ ಪಟ್ಟ ಕಟ್ಟಿದ ಮತ್ತು ಕಟ್ಟುತ್ತಿರುವ, ಎಫ್‌ಟಿಐಐ ದೇಶದ್ರೋಹಿಗಳ ತಾಣವಾಗುತ್ತಿದೆ ಎಂದು ನರೇಟಿವ್ ತೇಲಿ ಬಿಡುವ ಶಕ್ತಿಗಳಿಗೆ ಪಾಯಲ್ ಗೆಲುವು ಉತ್ತರ ಕೊಟ್ಟಿದೆ.

- Advertisement -
- Advertisement -

ಭಾರತದ ಚಲನಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ ಅವರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾಗೆ 2024ರ ಕೇನ್ಸ್ ಚಲನಚಿತ್ರೋತ್ಸವದಲ್ಲಿ ‘ಗ್ರ್ಯಾಂಡ್ ಪ್ರಿಕ್ಸ್’ ಪ್ರಶಸ್ತಿ ದೊರೆತಿದೆ. ಕಳೆದ 30 ವರ್ಷಗಳಲ್ಲಿ ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಸಿನಿಮಾವಾಗಿ ಇತಿಹಾಸ ಬರೆದಿದೆ.

ಪಾಯಲ್ ಅವರ ಈ ಐತಿಹಾಸಿಕ ಗೆಲುವು, ಅವರ ವೈಯುಕ್ತಿವಲ್ಲ. ಈ ಗೆಲುವು ‘ಮುಕ್ತ ಅಭಿವ್ಯಕ್ತಿ’ಯ ಮಹತ್ವವನ್ನು ಸಾರಿದೆ. ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್‌ಟಿಐಐ) ಯ ಹಳೆಯ ವಿದ್ಯಾರ್ಥಿಯಾಗಿರುವ ಪಾಯಲ್ ಅವರು, ಈ ಹಿಂದೆ ಅಶಿಸ್ತಿನ ಆರೋಪದ ಮೇಲೆ ಸಂಸ್ಥೆಯಿಂದ ದಂಡನಾತ್ಮಕ ಕ್ರಮಗಳನ್ನು ಎದುರಿಸಿದ್ದರು. ಆದರೆ, ಈಗ ಪಾಯಲ್ ಅವರಿಂದಲೇ ಸಂಸ್ಥೆ ಹೆಮ್ಮೆ ಪಡುವಂತೆ ಆಗಿದೆ.

2015ರಲ್ಲಿ ನಟ ಗಜೇಂದ್ರ ಚೌಹಾಣ್ ಅವರನ್ನು ಎಫ್‌ಟಿಐಐ ಅಧ್ಯಕ್ಷರನ್ನಾಗಿ ನೇಮಿಸುವುದನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಪಾಯಲ್ ಕೂಡ ಒಬ್ಬರು. ಹಿಂದಿ ಚಲನಚಿತ್ರೋದ್ಯಮದ ನಟ ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರಾದ ಚೌಹಾಣ್ ಅವರು, ಭಾರತೀಯ ಚಿತ್ರರಂಗಕ್ಕೆ ಪ್ರಸಿದ್ಧ ನಿರ್ದೇಶಕರು, ನಟರು ಮತ್ತು ತಂತ್ರಜ್ಞರನ್ನು ಸಮರ್ಪಿಸಿದ ಮಹತ್ವದ ಸಂಸ್ಥೆ ಎಫ್‌ಟಿಐಐಯನ್ನು ಮುನ್ನಡೆಸುವ ಅರ್ಹತೆಗಳನ್ನು ಹೊಂದಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು.

ವಿದ್ಯಾರ್ಥಿಗಳ ಗುಂಪು 2015 ರಲ್ಲಿ ಜೂನ್ ಮತ್ತು ಅಕ್ಟೋಬರ್ ನಡುವೆ 139 ದಿನಗಳ ಕಾಲ ಪ್ರತಿಭಟನೆ ನಡೆಸಿತ್ತು. ಪ್ರತಿಭಟನಾ ನಿರತರು ಆಗಿನ ಎಫ್‌ಟಿಐಐ ನಿರ್ದೇಶಕ ಪ್ರಶಾಂತ್ ಪತ್ರಾಭೆ ಅವರ ಕಚೇರಿಗೆ ಮುತ್ತಿಗೆ ಕೂಡ ಹಾಕಿದ್ದರು. ಈ ಸಂಬಂಧ ಪುಣೆ ಪೊಲೀಸರು ಅನೇಕ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿದ್ದರು. ಎಫ್‌ಟಿಐಐ ಆಡಳಿತವು ಕಪಾಡಿಯಾ ಸೇರಿದಂತೆ ಎಂಟು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡಿತ್ತು. ಅವರ ವಿದ್ಯಾರ್ಥಿವೇತನವನ್ನು ಕಡಿತಗೊಳಿಸಿತ್ತು ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಲು ಸಹಾಯ ಮಾಡುವ ವಿದೇಶಿ ವಿನಿಮಯ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಅವರನ್ನು ನಿಷೇಧಿಸಿತ್ತು.

2017 ಕಿರುಚಿತ್ರ ‘ಆಫ್ಟರ್‌ನೂನ್ ಕ್ಲೌಡ್ಸ್’ ಕೇನ್ಸ್‌ನ ಸಿನೆಫೋಂಡೇಶನ್ ವಿಭಾಗಕ್ಕೆ ಆಯ್ಕೆಯಾಗುವ ಮೂಲಕ ಕಪಾಡಿಯ ಅವರು ಜಾಗತಿಕ ಚಲನಚಿತ್ರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. ಎಫ್‌ಟಿಐಐನ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದ ಕಪಾಡಿಯ ಅವರಿಗೆ ಕೇನ್ಸ್‌ ಪ್ರಯಾಣವನ್ನು ಪ್ರಾಯೋಜಿಸಿತ್ತು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, “ಕಪಾಡಿಯಾ ತನ್ನ ನಡವಳಿಕೆಯಲ್ಲಿ ಶಿಸ್ತುಬದ್ಧವಾಗಿರುವುದನ್ನು ಗಮನಿಸಿದ” ಎಫ್‌ಟಿಐಐ  ಈ ನಿರ್ಧಾರವನ್ನು ತೆಗೆದುಕೊಂಡಿತ್ತು.

ಆ ಬಳಿಕ ಕಪಾಡಿಯ ಯಶಸ್ಸಿನ ಮೆಟ್ಟಿಲೇರಲು ಪ್ರಾರಂಭಿಸಿದರು. 2019 ರಲ್ಲಿ, ಅವರು ‘ಎ ನೈಟ್ ಆಫ್ ನೋಯಿಂಗ್ ನಥಿಂಗ್’ ಎಂಬ ಸಾಕ್ಷ್ಯಚಿತ್ರವನ್ನು ಪೂರ್ಣಗೊಳಿಸಿದರು. ಇದು 2021ರ ಕೇನ್ಸ್ ಚಲನಚಿತ್ರೋತ್ಸವದ ಡೈರೆಕ್ಟರ್ಸ್ ಫೋರ್ಟ್‌ನೈಟ್ ಸೈಡ್-ಬಾರ್‌ನಲ್ಲಿ ಪ್ರಥಮ ಪ್ರದರ್ಶನಗೊಂಡಿತ್ತು. ಅಲ್ಲಿ ‘ಗೋಲ್ಡನ್ ಐ’ ಪ್ರಶಸ್ತಿ ಗೆದ್ದುಕೊಂಡಿತ್ತು.

ಎಫ್‌ಟಿಐಐನ ಇತರ ಪ್ರತಿಭೆಗಳೂ ಅ ವರ್ಷ ಕೇನ್ಸ್‌ನಲ್ಲಿ ಮಿಂಚಿದ್ದರು. ವಿದ್ಯಾರ್ಥಿ ಚಲನಚಿತ್ರ ವಿಭಾಗದಲ್ಲಿ ಎಫ್‌ಟಿಐಐ ವಿದ್ಯಾರ್ಥಿ ಚಿದಾನಂದ್ ಎಸ್ ನಾಯಕ್ ಅವರ ‘ಸನ್‌ ಫ್ಲವರ್ಸ್ ವೇರ್ ಫಸ್ಟ್ ಒನ್ಸ್ ಟು ನೋ’ ಮತ್ತು ಮೈಸಮ್ ಅಲಿಯ ‘ರಿಟ್ರೀಟ್’ ಪ್ರಶಸ್ತಿ ಪಡೆದಿತ್ತು. (ಅಲಿ ಕಪಾಡಿಯಾ ಅವರ ಬ್ಯಾಚ್ ಮೇಟ್ ಆಗಿದ್ದರು) ಎಫ್‌ಟಿಐಐನ ಹಳೆ ವಿದ್ಯಾರ್ಥಿ ಸಂತೋಷ್ ಶಿವನ್ ಅವರು ‘ಪಿಯರೆ ಆಂಜೆನಿಯಕ್ಸ್ ಟ್ರಿಬ್ಯೂಟ್‌’ನೊಂದಿಗೆ ಸಿನಿಮಾಟೋಗ್ರಫಿಗೆ ನೀಡಿದ ಕೊಡುಗೆಗಳಿಗಾಗಿ ಗೌರವಿಸಲ್ಪಟ್ಟಿದ್ದರು.

ಪುಣೆಯ ಫಿಲ್ಮ್ ಇನ್‌ಸ್ಟಿಟ್ಯೂಟ್ ಹಿಂದುತ್ವವಾದಿಗಳ ಪ್ರಮುಖ ಗುರಿಯಾಗಿದೆ. ಜನವರಿಯಲ್ಲಿ, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಹಿಂದುತ್ವ ಬೆಂಬಲಿಗರು ಕ್ಯಾಂಪಸ್‌ಗೆ ನುಗ್ಗಿ 1992 ರ ಬಾಬ್ರಿ ಮಸೀದಿ ಧ್ವಂಸವನ್ನು ನೆನಪಿಸುವ ಪೋಸ್ಟರ್ ಅನ್ನು ಹರಿದು ಹಾಕಿದ್ದರು. ಆಗ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪೋಸ್ಟರ್ ಅಂಟಿಸಿದ್ದ ಏಳು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪಾಯಲ್ ಅವರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾ. ಪ್ರಭಾ ಎಂಬ ನರ್ಸ್ ಕಥೆಯನ್ನು ಒಳಗೊಂಡಿದೆ. ಭಾವನೆಗಳ ಸುತ್ತ ಕಥೆ ಸಾಗುತ್ತದೆ. ಪ್ರತಿಭಟಿಸಿದ ಕಾರಣಕ್ಕೆ ಸಂಸ್ಥೆಯ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದ ಪಾಯಲ್, ತನ್ನ ಪ್ರತಿಭೆಯ ಮೂಲಕ ಎಲ್ಲರ ಬಾಯಿ ಮುಚ್ಚಿಸಿದ್ದಾರೆ.

ವಿದ್ಯಾರ್ಥಿಗಳು ಅನ್ಯಾಯ ಖಂಡಿಸಿ ಪ್ರತಿಭಟಿಸುವಾಗ, ಅವರ ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸಿ ದೇಶದ್ರೋಹಿಯ ಪಟ್ಟ ಕಟ್ಟಿದ ಮತ್ತು ಕಟ್ಟುತ್ತಿರುವ, ಎಫ್‌ಟಿಐಐ ದೇಶದ್ರೋಹಿಗಳ ತಾಣವಾಗುತ್ತಿದೆ ಎಂದು ನರೇಟಿವ್ ತೇಲಿ ಬಿಡುವ ಶಕ್ತಿಗಳಿಗೆ ಪಾಯಲ್ ಗೆಲುವು ಉತ್ತರ ಕೊಟ್ಟಿದೆ.

ಭಾರತದ ಪ್ರಖ್ಯಾತ ಚಲನಚಿತ್ರ ಶಾಲೆಯು ಕಠಿಣ ತರಬೇತಿ ಪಡೆದ ಮುಕ್ತ ಮನಸ್ಸಿನ ಮತ್ತು ಸಾಹಸಮಯ ಚಲನಚಿತ್ರ ನಿರ್ಮಾಪಕರ ಖ್ಯಾತಿಯನ್ನು ಉಳಿಸಿಕೊಂಡಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ತಮ್ಮ ಸಾಂವಿಧಾನಿಕ ಅಭಿವ್ಯಕ್ತಿಯನ್ನು ಎತ್ತಿ ಹಿಡಿದರೆ ದೇಶದ್ರೋಹಿಯ ಪಟ್ಟ ಕಟ್ಟುವ ಸಂದಿಗ್ಧ ಪರಿಸ್ಥಿತಿಯಲ್ಲಿ, ಇಲ್ಲ ತಮ್ಮ ಮುಕ್ತ ಅಭಿವ್ಯಕ್ತಿಯ ಮೂಲಕವೇ ಅವರು ದೇಶಕ್ಕೆ ಕೀರ್ತಿ ತರಬಲ್ಲರು ಮತ್ತು ಎಫಟಿಐಐನಂತಹ ಸಂಸ್ಥೆಗಳಲ್ಲಿ ಮುಕ್ತ ಅಭಿವ್ಯಕ್ತಿ ಎಷ್ಟು ಮುಖ್ಯ ಎಂಬುವುದನ್ನು ಪಾಯಲ್ ಗೆಲುವು ಸಾರಿ ಹೇಳಿದೆ.

ಇದನ್ನೂ ಓದಿ : ಕಾನ್ ಚಿತ್ರೋತ್ಸವ: ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ಗಾಗಿ ಪ್ರಶಸ್ತಿ ಪಡೆದ ನಿರ್ಮಾಪಕಿ ಪಾಯಲ್ ಕಪಾಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...