Homeಕರ್ನಾಟಕ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ನಡೆಸುವ ಚರ್ಚೆ ಹೀಗಿದೆ...

- Advertisement -
- Advertisement -

‘ಪೇಸಿಎಂ’ ಪೋಸ್ಟರ್‌ ಮೂಲಕ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌, ಮತ್ತೊಂದು ಸೃಜನಶೀಲ ಪ್ರಯೋಗವನ್ನು ಮಾಡಿದೆ. ‘ಪೇಸಿಎಂ ಆಕ್ಷನ್‌ ಕಮಿಟಿ’ (PayCM Action Committee) ಎಂಬ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ಚರ್ಚಿಸುತ್ತಿರುವಂತೆ ವಿಡಿಯೊ ರಚಿಸಲಾಗಿದೆ.

ಈ ವಿಡಿಯೊವನ್ನು ‘40% ಸರ್ಕಾರ’ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ಗ್ರೂಪ್‌ನಲ್ಲಿ ಆಗುವ ಚರ್ಚೆಗಳು ಸ್ವಾರಸ್ಯಕರವಾಗಿವೆ. ಬಿಜೆಪಿಯವರು ಹೀಗೆ ಚರ್ಚೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಅಣಕ ಮಾಡಿದೆ.

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ ಹೀಗಿದೆ…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಅವರು ಗ್ರೂಪ್ ರಚಿಸಿದ್ದಾರೆ. ಅದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಡಾ.ಕೆ.ಸುಧಾಕರ್‌, ಅಶ್ವತ್ಥ್ ನಾರಾಯಣ್, ವಿಜಯೇಂದ್ರ, ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ ಇದ್ದಾರೆ.

ಬೊಮ್ಮಾಯಿ ಮಾತು ಆರಂಭಿಸುತ್ತಾರೆ.

ಬೊಮ್ಮಾಯಿ: ಎಲ್ಲಿಗೆ ಬಂತಪ್ಪ? ಅಪ್‌ಡೇಟ್ ಏನು?

ಆರಗ: ತನಿಖೆ ನಡೆಯುತ್ತಿದೆ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಟಾಬ್ಲೇಟ್ ತಗೊಂಡ್ರು ನಿದ್ದೆ ಬರುತ್ತಿಲ್ಲ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಜನ ಬಿಜೆಪಿಯವರು ಪೇಸಿಎಂ ಕಾಪಿ ಮಾಡಿರೋದು ಮಜಾ ಬರುತ್ತಿಲ್ಲ ಅಂತಿದ್ದಾರೆ.

ಸುಧಾಕರ್‌: ಲೆಸ್ಟ್ ಬ್ರಿಂಗ್‌ ಔಟ್ ಲಿಂಗಾಯತ್ ಕಾರ್ಡ್ (ಲಿಂಗಾಯತ ಕಾರ್ಡ್ ಹಾಕೋಣ)

ಬೊಮ್ಮಾಯಿ: ಮಾಸ್ಟರ್‌ ಸ್ಟ್ರೋಕ್‌ ಸುಧಾಕರ್‌, ಯೂ ಡು ಇಟ್‌

ಸುಧಾಕರ್‌: ಓಕೆ (ಇಮೋಜಿ ಬಳಸಿದ್ದಾರೆ.)

(ವಿಜಯೇಂದ್ರ ಲೆಫ್ಟ್‌)

ಬೊಮ್ಮಾಯಿ: ಛೇ ಇವ್ನು ಇರೋದು ಮರೆತುಬಿಟ್ಟೆ.

ಬೊಮ್ಮಾಯಿ: (‘ಸುಧಾಕರ್‌ ಮೋಸ್ಟ್‌ಲಿ ಮೂರ್ಖ ಅನಿಸುತ್ತೆ: ಸಿದ್ದರಾಮಯ್ಯ’ ಎಂದಿರುವ ಸುದ್ದಿ ಶೇರ್‌ ಮಾಡುತ್ತಾರೆ)

ಬೊಮ್ಮಾಯಿ: ಇವಾಗ ಏನ್ ಮಾಡೋಣ.

ಈಶ್ವರಪ್ಪ: ನನಗೆ ಮಂತ್ರಿ ಸ್ಥಾನ ಕೊಟ್ಟರೆ ಐಡಿಯಾ ಕೊಡ್ತೀನಿ.

(ಬೊಮ್ಮಾರಿ ರಿಮೂವ್ಡ್‌ ಈಶ್ವರಪ್ಪ)

ಬೊಮ್ಮಾಯಿ: ಕಟೀಲ್‌ ಮೋದೀಜಿ ಹತ್ತಿರ ಮಾತಾಡಿ, ಏನಾದರೂ ಐಡಿಯಾ ಕೊಡ್ತಾರೆ.

ಕಟೀಲ್: ಮೋದೀಜಿ ನವಿಲಿನೊಟ್ಟಿಗೆ ಫೋಟೋಶೂಟ್ ಮಾಡ್ತಾ ಇದ್ದಾರಂತೆ.  ಮೆಸೇಜ್ ಮಾಡಿದ್ದೇನೆ.

ಬೊಮ್ಮಾಯಿ: ಓಕೆ, ಅಶ್ವತ್ಥ್ ಎನಿ ಐಡಿಯಾ?

ಅಶ್ವತ್ಥ್‌: ವೀ ಕೆನ್‌ ಮೇಕ್ ಎ ಮೂವಿ. ಯೂವರ್‌ ಬಯೋಗ್ರಫಿ.

ಮಾಧುಸ್ವಾಮಿ: ಪೂರ್ತಿ ಮೂವಿ ಟ್ರೇಲರ್‌ರಷ್ಟು ಉದ್ದ ಕೂಡ ಬರಲ್ಲ.

ಬೊಮ್ಮಾಯಿ: ಕಟೀಲ್, ಸಮ್‌ಥಿಂಗ್ ಬಿಗ್ ವೀ ಶುಡ್ ಡೂ.

ನಳೀನ್‌: ಹಿಂದುತ್ವ ತರೋಣ.

ಬೊಮ್ಮಾಯಿ: ಹೌ? (ಹೇಗೆ)

ನಳೀನ್: ಸೇಮ್‌ ಆಸ್ ಆಲ್ವೇಸ್‌ (ನಗುವ ಇಮೋಜಿ.)

ಆರಗ: ನೋ. ಆಮೇಲೆ ನಾನು ತನಿಖೆ ಮಾಡಿಸಬೇಕು.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ಸಿ.ಟಿ.ರವಿ: ಯೆಸ್ ಟಿಪ್ಪು ಸುಲ್ತಾನ್ ತರೋಣ.

ಬೊಮ್ಮಾಯಿ: (ಹಣೆಚಚ್ಚಿಕೊಳ್ಳುತ್ತಿರುವ ಇಮೋಜಿ ಹಾಕಿದ್ದಾರೆ.)

ಕಟೀಲ್: ಮೋದೀಜಿ ಮೆಸೇಜ್ ಮಾಡಿದ್ದಾರೆ. (ಬ್ಯುಸಿ ಎಂಬ ಆಡಿಯೋ ಸಂದೇಶ ಬಂದಿದೆ.)

ಸಿಟಿ ರವಿ: ಪಿಎಫ್‌ಐನವರು ದೇವಸ್ಥಾನದಲ್ಲಿ ಪಾಕಿಸ್ತಾನ್ ಬಾವುಟ ಹಾರಿಸಲಿ. ಬೊಮ್ಮಾಯಿ ಸರ್‌ ಅದಕ್ಕೆ ಬೆಂಗಳೂರಿಂದ ಪಾದಯಾತ್ರೆ ಹೋಗಿ ಹಿಂದುತ್ವ ಫ್ಲಾಗ್ ಹಾರಿಸಬೇಕು.

ಕಟೀಲ್: ಗುಡ್ ಐಡಿಯಾ

ಬೊಮ್ಮಾಯಿ: ನೋ. ನನಗೆ ಪಾದೆಯಾತ್ರೆ ಆಗಲ್ಲ, ಕಾಲ್ ನೋವು.

ಕಟೀಲ್: ಶಾ ಟೆಕ್ಸ್ಟ್‌ ಮಾಡಿದ್ದಾರೆ.

ಬೊಮ್ಮಾಯಿ: ವಾಟ್ ಡಿಡ್ ಶಾ ಟೆಲ್?

(ನಳೀನ್‌ ಕುಮಾರ್ ಕಟೀಲ್‌ ಬೊಮ್ಮಾಯಿಯವರನ್ನು ರಿಮೂವ್ ಮಾಡುತ್ತಾರೆ.)

– ಈ ರೀತಿಯಲ್ಲಿ ಸಂಭಾಷಣೆ ನಡೆದಿರುವಂತೆ ಟ್ರೋಲ್ ಮಾಡಲಾಗಿದೆ.

40 % ಕಮಿಷನ್ ಸರ್ಕಾರ ಎಂಬ ಅಸ್ತ್ರವನ್ನು ಕಾಂಗ್ರೆಸ್ ಬಲವಾಗಿ ಪ್ರಯೋಗಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...