Homeಕರ್ನಾಟಕ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ನಡೆಸುವ ಚರ್ಚೆ ಹೀಗಿದೆ...

- Advertisement -
- Advertisement -

‘ಪೇಸಿಎಂ’ ಪೋಸ್ಟರ್‌ ಮೂಲಕ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌, ಮತ್ತೊಂದು ಸೃಜನಶೀಲ ಪ್ರಯೋಗವನ್ನು ಮಾಡಿದೆ. ‘ಪೇಸಿಎಂ ಆಕ್ಷನ್‌ ಕಮಿಟಿ’ (PayCM Action Committee) ಎಂಬ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ಚರ್ಚಿಸುತ್ತಿರುವಂತೆ ವಿಡಿಯೊ ರಚಿಸಲಾಗಿದೆ.

ಈ ವಿಡಿಯೊವನ್ನು ‘40% ಸರ್ಕಾರ’ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ಗ್ರೂಪ್‌ನಲ್ಲಿ ಆಗುವ ಚರ್ಚೆಗಳು ಸ್ವಾರಸ್ಯಕರವಾಗಿವೆ. ಬಿಜೆಪಿಯವರು ಹೀಗೆ ಚರ್ಚೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಅಣಕ ಮಾಡಿದೆ.

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ ಹೀಗಿದೆ…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಅವರು ಗ್ರೂಪ್ ರಚಿಸಿದ್ದಾರೆ. ಅದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಡಾ.ಕೆ.ಸುಧಾಕರ್‌, ಅಶ್ವತ್ಥ್ ನಾರಾಯಣ್, ವಿಜಯೇಂದ್ರ, ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ ಇದ್ದಾರೆ.

ಬೊಮ್ಮಾಯಿ ಮಾತು ಆರಂಭಿಸುತ್ತಾರೆ.

ಬೊಮ್ಮಾಯಿ: ಎಲ್ಲಿಗೆ ಬಂತಪ್ಪ? ಅಪ್‌ಡೇಟ್ ಏನು?

ಆರಗ: ತನಿಖೆ ನಡೆಯುತ್ತಿದೆ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಟಾಬ್ಲೇಟ್ ತಗೊಂಡ್ರು ನಿದ್ದೆ ಬರುತ್ತಿಲ್ಲ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಜನ ಬಿಜೆಪಿಯವರು ಪೇಸಿಎಂ ಕಾಪಿ ಮಾಡಿರೋದು ಮಜಾ ಬರುತ್ತಿಲ್ಲ ಅಂತಿದ್ದಾರೆ.

ಸುಧಾಕರ್‌: ಲೆಸ್ಟ್ ಬ್ರಿಂಗ್‌ ಔಟ್ ಲಿಂಗಾಯತ್ ಕಾರ್ಡ್ (ಲಿಂಗಾಯತ ಕಾರ್ಡ್ ಹಾಕೋಣ)

ಬೊಮ್ಮಾಯಿ: ಮಾಸ್ಟರ್‌ ಸ್ಟ್ರೋಕ್‌ ಸುಧಾಕರ್‌, ಯೂ ಡು ಇಟ್‌

ಸುಧಾಕರ್‌: ಓಕೆ (ಇಮೋಜಿ ಬಳಸಿದ್ದಾರೆ.)

(ವಿಜಯೇಂದ್ರ ಲೆಫ್ಟ್‌)

ಬೊಮ್ಮಾಯಿ: ಛೇ ಇವ್ನು ಇರೋದು ಮರೆತುಬಿಟ್ಟೆ.

ಬೊಮ್ಮಾಯಿ: (‘ಸುಧಾಕರ್‌ ಮೋಸ್ಟ್‌ಲಿ ಮೂರ್ಖ ಅನಿಸುತ್ತೆ: ಸಿದ್ದರಾಮಯ್ಯ’ ಎಂದಿರುವ ಸುದ್ದಿ ಶೇರ್‌ ಮಾಡುತ್ತಾರೆ)

ಬೊಮ್ಮಾಯಿ: ಇವಾಗ ಏನ್ ಮಾಡೋಣ.

ಈಶ್ವರಪ್ಪ: ನನಗೆ ಮಂತ್ರಿ ಸ್ಥಾನ ಕೊಟ್ಟರೆ ಐಡಿಯಾ ಕೊಡ್ತೀನಿ.

(ಬೊಮ್ಮಾರಿ ರಿಮೂವ್ಡ್‌ ಈಶ್ವರಪ್ಪ)

ಬೊಮ್ಮಾಯಿ: ಕಟೀಲ್‌ ಮೋದೀಜಿ ಹತ್ತಿರ ಮಾತಾಡಿ, ಏನಾದರೂ ಐಡಿಯಾ ಕೊಡ್ತಾರೆ.

ಕಟೀಲ್: ಮೋದೀಜಿ ನವಿಲಿನೊಟ್ಟಿಗೆ ಫೋಟೋಶೂಟ್ ಮಾಡ್ತಾ ಇದ್ದಾರಂತೆ.  ಮೆಸೇಜ್ ಮಾಡಿದ್ದೇನೆ.

ಬೊಮ್ಮಾಯಿ: ಓಕೆ, ಅಶ್ವತ್ಥ್ ಎನಿ ಐಡಿಯಾ?

ಅಶ್ವತ್ಥ್‌: ವೀ ಕೆನ್‌ ಮೇಕ್ ಎ ಮೂವಿ. ಯೂವರ್‌ ಬಯೋಗ್ರಫಿ.

ಮಾಧುಸ್ವಾಮಿ: ಪೂರ್ತಿ ಮೂವಿ ಟ್ರೇಲರ್‌ರಷ್ಟು ಉದ್ದ ಕೂಡ ಬರಲ್ಲ.

ಬೊಮ್ಮಾಯಿ: ಕಟೀಲ್, ಸಮ್‌ಥಿಂಗ್ ಬಿಗ್ ವೀ ಶುಡ್ ಡೂ.

ನಳೀನ್‌: ಹಿಂದುತ್ವ ತರೋಣ.

ಬೊಮ್ಮಾಯಿ: ಹೌ? (ಹೇಗೆ)

ನಳೀನ್: ಸೇಮ್‌ ಆಸ್ ಆಲ್ವೇಸ್‌ (ನಗುವ ಇಮೋಜಿ.)

ಆರಗ: ನೋ. ಆಮೇಲೆ ನಾನು ತನಿಖೆ ಮಾಡಿಸಬೇಕು.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ಸಿ.ಟಿ.ರವಿ: ಯೆಸ್ ಟಿಪ್ಪು ಸುಲ್ತಾನ್ ತರೋಣ.

ಬೊಮ್ಮಾಯಿ: (ಹಣೆಚಚ್ಚಿಕೊಳ್ಳುತ್ತಿರುವ ಇಮೋಜಿ ಹಾಕಿದ್ದಾರೆ.)

ಕಟೀಲ್: ಮೋದೀಜಿ ಮೆಸೇಜ್ ಮಾಡಿದ್ದಾರೆ. (ಬ್ಯುಸಿ ಎಂಬ ಆಡಿಯೋ ಸಂದೇಶ ಬಂದಿದೆ.)

ಸಿಟಿ ರವಿ: ಪಿಎಫ್‌ಐನವರು ದೇವಸ್ಥಾನದಲ್ಲಿ ಪಾಕಿಸ್ತಾನ್ ಬಾವುಟ ಹಾರಿಸಲಿ. ಬೊಮ್ಮಾಯಿ ಸರ್‌ ಅದಕ್ಕೆ ಬೆಂಗಳೂರಿಂದ ಪಾದಯಾತ್ರೆ ಹೋಗಿ ಹಿಂದುತ್ವ ಫ್ಲಾಗ್ ಹಾರಿಸಬೇಕು.

ಕಟೀಲ್: ಗುಡ್ ಐಡಿಯಾ

ಬೊಮ್ಮಾಯಿ: ನೋ. ನನಗೆ ಪಾದೆಯಾತ್ರೆ ಆಗಲ್ಲ, ಕಾಲ್ ನೋವು.

ಕಟೀಲ್: ಶಾ ಟೆಕ್ಸ್ಟ್‌ ಮಾಡಿದ್ದಾರೆ.

ಬೊಮ್ಮಾಯಿ: ವಾಟ್ ಡಿಡ್ ಶಾ ಟೆಲ್?

(ನಳೀನ್‌ ಕುಮಾರ್ ಕಟೀಲ್‌ ಬೊಮ್ಮಾಯಿಯವರನ್ನು ರಿಮೂವ್ ಮಾಡುತ್ತಾರೆ.)

– ಈ ರೀತಿಯಲ್ಲಿ ಸಂಭಾಷಣೆ ನಡೆದಿರುವಂತೆ ಟ್ರೋಲ್ ಮಾಡಲಾಗಿದೆ.

40 % ಕಮಿಷನ್ ಸರ್ಕಾರ ಎಂಬ ಅಸ್ತ್ರವನ್ನು ಕಾಂಗ್ರೆಸ್ ಬಲವಾಗಿ ಪ್ರಯೋಗಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ನ ಸಿಯುಟಾಕ್ಕೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....