Homeಕರ್ನಾಟಕ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

- Advertisement -
- Advertisement -

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌, ವಿವಿಧ ರೀತಿಯಲ್ಲಿ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಅದರ ಮುಂದುವರಿದ ಭಾಗವಾಗಿ, ‘ಪೇಸಿಎಂ’ (PAYCM) ಪೋಸ್ಟರ್‌ಗಳು ವೈರಲ್ ಆಗಿವೆ.

“ನಲವತ್ತು ಪರ್ಸೆಂಟ್‌ ಇಲ್ಲಿ ಸ್ವೀಕರಿಸಲಾಗುತ್ತದೆ”, “ಮುಖ್ಯಮಂತ್ರಿಗಳ ಭ್ರಷ್ಟಾಚಾರಕ್ಕೆ ಸಂದಾಯ ಮಾಡಲು ನೀವು ಇಲ್ಲಿ ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್‌” ಮಾಡಿ ಎಂಬ ಸಂದೇಶವನ್ನು ಇಂಗ್ಲಿಷ್‌ನಲ್ಲಿ ಬರೆದಿರುವ ಪೋಸ್ಟರ್‌ಗಳು ಹರಿದಾಡುತ್ತಿವೆ. ‘ಪೇಟಿಎಂ’ ಜಾಹೀರಾತಿನಂತೆ ಈ ಪೋಸ್ಟರ್‌‌ಗಳು ಗಮನ ಸೆಳೆಯುತ್ತಿವೆ. ಕ್ಯೂಆರ್‌ ಕೋಡ್‌ನೊಳಗೆ ಬೊಮ್ಮಾಯಿಯವರ ರೇಖಾಚಿತ್ರವನ್ನು ಬಳಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಿಧೆಡೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಈಗ ಚರ್ಚೆಗೆ ಕಾರಣವಾಗಿದ್ದು, ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿನ ಕ್ಯೂ.ಆರ್‌.ಕೋಡ್ ಸ್ಕ್ಯಾನ್‌ ಮಾಡಿದರೆ, ಕಾಂಗ್ರೆಸ್‌ ಆರಂಭಿಸಿರುವ ‘www.40percentsarkara.com’ ಜಾಲತಾಣ ಓಪನ್‌ ಆಗುತ್ತದೆ.

ಅನೇಕರು ಈ PayCM ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

‘40ಪರ್ಸೆಂಟ್‌ಸರ್ಕಾರ.ಕಾಂ’ ವಿಶೇಷತೆ ಏನು?

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...