Homeಕರ್ನಾಟಕ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

- Advertisement -
- Advertisement -

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌, ವಿವಿಧ ರೀತಿಯಲ್ಲಿ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಅದರ ಮುಂದುವರಿದ ಭಾಗವಾಗಿ, ‘ಪೇಸಿಎಂ’ (PAYCM) ಪೋಸ್ಟರ್‌ಗಳು ವೈರಲ್ ಆಗಿವೆ.

“ನಲವತ್ತು ಪರ್ಸೆಂಟ್‌ ಇಲ್ಲಿ ಸ್ವೀಕರಿಸಲಾಗುತ್ತದೆ”, “ಮುಖ್ಯಮಂತ್ರಿಗಳ ಭ್ರಷ್ಟಾಚಾರಕ್ಕೆ ಸಂದಾಯ ಮಾಡಲು ನೀವು ಇಲ್ಲಿ ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್‌” ಮಾಡಿ ಎಂಬ ಸಂದೇಶವನ್ನು ಇಂಗ್ಲಿಷ್‌ನಲ್ಲಿ ಬರೆದಿರುವ ಪೋಸ್ಟರ್‌ಗಳು ಹರಿದಾಡುತ್ತಿವೆ. ‘ಪೇಟಿಎಂ’ ಜಾಹೀರಾತಿನಂತೆ ಈ ಪೋಸ್ಟರ್‌‌ಗಳು ಗಮನ ಸೆಳೆಯುತ್ತಿವೆ. ಕ್ಯೂಆರ್‌ ಕೋಡ್‌ನೊಳಗೆ ಬೊಮ್ಮಾಯಿಯವರ ರೇಖಾಚಿತ್ರವನ್ನು ಬಳಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಿಧೆಡೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಈಗ ಚರ್ಚೆಗೆ ಕಾರಣವಾಗಿದ್ದು, ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿನ ಕ್ಯೂ.ಆರ್‌.ಕೋಡ್ ಸ್ಕ್ಯಾನ್‌ ಮಾಡಿದರೆ, ಕಾಂಗ್ರೆಸ್‌ ಆರಂಭಿಸಿರುವ ‘www.40percentsarkara.com’ ಜಾಲತಾಣ ಓಪನ್‌ ಆಗುತ್ತದೆ.

ಅನೇಕರು ಈ PayCM ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

‘40ಪರ್ಸೆಂಟ್‌ಸರ್ಕಾರ.ಕಾಂ’ ವಿಶೇಷತೆ ಏನು?

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...