Homeಕರ್ನಾಟಕ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

- Advertisement -
- Advertisement -

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌, ವಿವಿಧ ರೀತಿಯಲ್ಲಿ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಅದರ ಮುಂದುವರಿದ ಭಾಗವಾಗಿ, ‘ಪೇಸಿಎಂ’ (PAYCM) ಪೋಸ್ಟರ್‌ಗಳು ವೈರಲ್ ಆಗಿವೆ.

“ನಲವತ್ತು ಪರ್ಸೆಂಟ್‌ ಇಲ್ಲಿ ಸ್ವೀಕರಿಸಲಾಗುತ್ತದೆ”, “ಮುಖ್ಯಮಂತ್ರಿಗಳ ಭ್ರಷ್ಟಾಚಾರಕ್ಕೆ ಸಂದಾಯ ಮಾಡಲು ನೀವು ಇಲ್ಲಿ ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್‌” ಮಾಡಿ ಎಂಬ ಸಂದೇಶವನ್ನು ಇಂಗ್ಲಿಷ್‌ನಲ್ಲಿ ಬರೆದಿರುವ ಪೋಸ್ಟರ್‌ಗಳು ಹರಿದಾಡುತ್ತಿವೆ. ‘ಪೇಟಿಎಂ’ ಜಾಹೀರಾತಿನಂತೆ ಈ ಪೋಸ್ಟರ್‌‌ಗಳು ಗಮನ ಸೆಳೆಯುತ್ತಿವೆ. ಕ್ಯೂಆರ್‌ ಕೋಡ್‌ನೊಳಗೆ ಬೊಮ್ಮಾಯಿಯವರ ರೇಖಾಚಿತ್ರವನ್ನು ಬಳಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಿಧೆಡೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಈಗ ಚರ್ಚೆಗೆ ಕಾರಣವಾಗಿದ್ದು, ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿನ ಕ್ಯೂ.ಆರ್‌.ಕೋಡ್ ಸ್ಕ್ಯಾನ್‌ ಮಾಡಿದರೆ, ಕಾಂಗ್ರೆಸ್‌ ಆರಂಭಿಸಿರುವ ‘www.40percentsarkara.com’ ಜಾಲತಾಣ ಓಪನ್‌ ಆಗುತ್ತದೆ.

ಅನೇಕರು ಈ PayCM ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

‘40ಪರ್ಸೆಂಟ್‌ಸರ್ಕಾರ.ಕಾಂ’ ವಿಶೇಷತೆ ಏನು?

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...