Homeಕರ್ನಾಟಕ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

- Advertisement -
- Advertisement -

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌, ವಿವಿಧ ರೀತಿಯಲ್ಲಿ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಅದರ ಮುಂದುವರಿದ ಭಾಗವಾಗಿ, ‘ಪೇಸಿಎಂ’ (PAYCM) ಪೋಸ್ಟರ್‌ಗಳು ವೈರಲ್ ಆಗಿವೆ.

“ನಲವತ್ತು ಪರ್ಸೆಂಟ್‌ ಇಲ್ಲಿ ಸ್ವೀಕರಿಸಲಾಗುತ್ತದೆ”, “ಮುಖ್ಯಮಂತ್ರಿಗಳ ಭ್ರಷ್ಟಾಚಾರಕ್ಕೆ ಸಂದಾಯ ಮಾಡಲು ನೀವು ಇಲ್ಲಿ ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್‌” ಮಾಡಿ ಎಂಬ ಸಂದೇಶವನ್ನು ಇಂಗ್ಲಿಷ್‌ನಲ್ಲಿ ಬರೆದಿರುವ ಪೋಸ್ಟರ್‌ಗಳು ಹರಿದಾಡುತ್ತಿವೆ. ‘ಪೇಟಿಎಂ’ ಜಾಹೀರಾತಿನಂತೆ ಈ ಪೋಸ್ಟರ್‌‌ಗಳು ಗಮನ ಸೆಳೆಯುತ್ತಿವೆ. ಕ್ಯೂಆರ್‌ ಕೋಡ್‌ನೊಳಗೆ ಬೊಮ್ಮಾಯಿಯವರ ರೇಖಾಚಿತ್ರವನ್ನು ಬಳಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಿಧೆಡೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಈಗ ಚರ್ಚೆಗೆ ಕಾರಣವಾಗಿದ್ದು, ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿನ ಕ್ಯೂ.ಆರ್‌.ಕೋಡ್ ಸ್ಕ್ಯಾನ್‌ ಮಾಡಿದರೆ, ಕಾಂಗ್ರೆಸ್‌ ಆರಂಭಿಸಿರುವ ‘www.40percentsarkara.com’ ಜಾಲತಾಣ ಓಪನ್‌ ಆಗುತ್ತದೆ.

ಅನೇಕರು ಈ PayCM ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

‘40ಪರ್ಸೆಂಟ್‌ಸರ್ಕಾರ.ಕಾಂ’ ವಿಶೇಷತೆ ಏನು?

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...