Homeಕರ್ನಾಟಕ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

- Advertisement -
- Advertisement -

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌, ವಿವಿಧ ರೀತಿಯಲ್ಲಿ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಅದರ ಮುಂದುವರಿದ ಭಾಗವಾಗಿ, ‘ಪೇಸಿಎಂ’ (PAYCM) ಪೋಸ್ಟರ್‌ಗಳು ವೈರಲ್ ಆಗಿವೆ.

“ನಲವತ್ತು ಪರ್ಸೆಂಟ್‌ ಇಲ್ಲಿ ಸ್ವೀಕರಿಸಲಾಗುತ್ತದೆ”, “ಮುಖ್ಯಮಂತ್ರಿಗಳ ಭ್ರಷ್ಟಾಚಾರಕ್ಕೆ ಸಂದಾಯ ಮಾಡಲು ನೀವು ಇಲ್ಲಿ ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್‌” ಮಾಡಿ ಎಂಬ ಸಂದೇಶವನ್ನು ಇಂಗ್ಲಿಷ್‌ನಲ್ಲಿ ಬರೆದಿರುವ ಪೋಸ್ಟರ್‌ಗಳು ಹರಿದಾಡುತ್ತಿವೆ. ‘ಪೇಟಿಎಂ’ ಜಾಹೀರಾತಿನಂತೆ ಈ ಪೋಸ್ಟರ್‌‌ಗಳು ಗಮನ ಸೆಳೆಯುತ್ತಿವೆ. ಕ್ಯೂಆರ್‌ ಕೋಡ್‌ನೊಳಗೆ ಬೊಮ್ಮಾಯಿಯವರ ರೇಖಾಚಿತ್ರವನ್ನು ಬಳಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಿಧೆಡೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಈಗ ಚರ್ಚೆಗೆ ಕಾರಣವಾಗಿದ್ದು, ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿನ ಕ್ಯೂ.ಆರ್‌.ಕೋಡ್ ಸ್ಕ್ಯಾನ್‌ ಮಾಡಿದರೆ, ಕಾಂಗ್ರೆಸ್‌ ಆರಂಭಿಸಿರುವ ‘www.40percentsarkara.com’ ಜಾಲತಾಣ ಓಪನ್‌ ಆಗುತ್ತದೆ.

ಅನೇಕರು ಈ PayCM ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

‘40ಪರ್ಸೆಂಟ್‌ಸರ್ಕಾರ.ಕಾಂ’ ವಿಶೇಷತೆ ಏನು?

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...