Homeಕರ್ನಾಟಕ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

- Advertisement -
- Advertisement -

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌, ವಿವಿಧ ರೀತಿಯಲ್ಲಿ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಅದರ ಮುಂದುವರಿದ ಭಾಗವಾಗಿ, ‘ಪೇಸಿಎಂ’ (PAYCM) ಪೋಸ್ಟರ್‌ಗಳು ವೈರಲ್ ಆಗಿವೆ.

“ನಲವತ್ತು ಪರ್ಸೆಂಟ್‌ ಇಲ್ಲಿ ಸ್ವೀಕರಿಸಲಾಗುತ್ತದೆ”, “ಮುಖ್ಯಮಂತ್ರಿಗಳ ಭ್ರಷ್ಟಾಚಾರಕ್ಕೆ ಸಂದಾಯ ಮಾಡಲು ನೀವು ಇಲ್ಲಿ ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್‌” ಮಾಡಿ ಎಂಬ ಸಂದೇಶವನ್ನು ಇಂಗ್ಲಿಷ್‌ನಲ್ಲಿ ಬರೆದಿರುವ ಪೋಸ್ಟರ್‌ಗಳು ಹರಿದಾಡುತ್ತಿವೆ. ‘ಪೇಟಿಎಂ’ ಜಾಹೀರಾತಿನಂತೆ ಈ ಪೋಸ್ಟರ್‌‌ಗಳು ಗಮನ ಸೆಳೆಯುತ್ತಿವೆ. ಕ್ಯೂಆರ್‌ ಕೋಡ್‌ನೊಳಗೆ ಬೊಮ್ಮಾಯಿಯವರ ರೇಖಾಚಿತ್ರವನ್ನು ಬಳಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಿಧೆಡೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಈಗ ಚರ್ಚೆಗೆ ಕಾರಣವಾಗಿದ್ದು, ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿನ ಕ್ಯೂ.ಆರ್‌.ಕೋಡ್ ಸ್ಕ್ಯಾನ್‌ ಮಾಡಿದರೆ, ಕಾಂಗ್ರೆಸ್‌ ಆರಂಭಿಸಿರುವ ‘www.40percentsarkara.com’ ಜಾಲತಾಣ ಓಪನ್‌ ಆಗುತ್ತದೆ.

ಅನೇಕರು ಈ PayCM ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

‘40ಪರ್ಸೆಂಟ್‌ಸರ್ಕಾರ.ಕಾಂ’ ವಿಶೇಷತೆ ಏನು?

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...