Homeಕರ್ನಾಟಕ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

- Advertisement -
- Advertisement -

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌, ವಿವಿಧ ರೀತಿಯಲ್ಲಿ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಅದರ ಮುಂದುವರಿದ ಭಾಗವಾಗಿ, ‘ಪೇಸಿಎಂ’ (PAYCM) ಪೋಸ್ಟರ್‌ಗಳು ವೈರಲ್ ಆಗಿವೆ.

“ನಲವತ್ತು ಪರ್ಸೆಂಟ್‌ ಇಲ್ಲಿ ಸ್ವೀಕರಿಸಲಾಗುತ್ತದೆ”, “ಮುಖ್ಯಮಂತ್ರಿಗಳ ಭ್ರಷ್ಟಾಚಾರಕ್ಕೆ ಸಂದಾಯ ಮಾಡಲು ನೀವು ಇಲ್ಲಿ ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್‌” ಮಾಡಿ ಎಂಬ ಸಂದೇಶವನ್ನು ಇಂಗ್ಲಿಷ್‌ನಲ್ಲಿ ಬರೆದಿರುವ ಪೋಸ್ಟರ್‌ಗಳು ಹರಿದಾಡುತ್ತಿವೆ. ‘ಪೇಟಿಎಂ’ ಜಾಹೀರಾತಿನಂತೆ ಈ ಪೋಸ್ಟರ್‌‌ಗಳು ಗಮನ ಸೆಳೆಯುತ್ತಿವೆ. ಕ್ಯೂಆರ್‌ ಕೋಡ್‌ನೊಳಗೆ ಬೊಮ್ಮಾಯಿಯವರ ರೇಖಾಚಿತ್ರವನ್ನು ಬಳಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿವಿಧೆಡೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಈಗ ಚರ್ಚೆಗೆ ಕಾರಣವಾಗಿದ್ದು, ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿನ ಕ್ಯೂ.ಆರ್‌.ಕೋಡ್ ಸ್ಕ್ಯಾನ್‌ ಮಾಡಿದರೆ, ಕಾಂಗ್ರೆಸ್‌ ಆರಂಭಿಸಿರುವ ‘www.40percentsarkara.com’ ಜಾಲತಾಣ ಓಪನ್‌ ಆಗುತ್ತದೆ.

ಅನೇಕರು ಈ PayCM ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

‘40ಪರ್ಸೆಂಟ್‌ಸರ್ಕಾರ.ಕಾಂ’ ವಿಶೇಷತೆ ಏನು?

‘40 ಪರ್ಸೆಂಟ್‌ ಕಮಿಷನ್‌ ಭ್ರಷ್ಟ ಸರ್ಕಾರ’ ಎಂಬ ಆರೋಪ ರಾಜ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌, ಸರ್ಕಾರವನ್ನು ಟೀಕಿಸಲು ಹೊಸಹೊಸ ಪ್ರಯೋಗಗಳಿಗೆ ಕೈಹಾಕಿದೆ. ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನು ಕಾಂಗ್ರೆಸ್ ತೆರೆದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ರಾಜ್ಯದ ವಿವಿಧ ಪತ್ರಿಕೆಗಳಿಗೆ, ಸುದ್ದಿಮಾಧ್ಯಮಗಳಿಗೆ ಅಪಾರ ಜಾಹೀರಾತನ್ನು ನೀಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿತ್ತು. ‘ಇದು ಹತ್ತು ಪರ್ಸೆಂಟ್ ಸರ್ಕಾರ’ ಎಂದು ಮೂದಲಿಸಿತ್ತು. ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಕೂಡ ತಮ್ಮ ಪ್ರಚಾರ ಭಾಷಣಗಳಲ್ಲಿ ಇದನ್ನೇ ಪುನರುಚ್ಚರಿಸಿದ್ದರು.

ಚುನಾವಣೆ ಮುಗಿದು ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಏರ್ಪಟ್ಟು ಸರ್ಕಾರ ರಚನೆಯಾಯಿತು. ನಂತರ ಆಪರೇಷನ್‌ ಕಮಲವೂ ಆಗಿ, ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು. ನಂತರ ಅಧಿಕಾರಕ್ಕೇರಿದ ಬಿ.ಎಸ್.ಯಡಿಯೂರಪ್ಪನವರು ಕೆಲಕಾಲ ಆಡಳಿತ ನಡೆಸಿದರು. ಅವರನ್ನೂ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಬಳಿಕ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೇರಿದರು.

ಅಧಿಕಾರ ಹಿಡಿದಾಗಿನಿಂದ ಭ್ರಷ್ಟಾಚಾರ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ವಿರುದ್ಧ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ನಲವತ್ತು ಪರ್ಸೆಂಟ್‌ ಕಮಿಷನ್‌ ನೀಡಬೇಕಾಗಿದೆ ಎಂದು ದೂರುತ್ತಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಕೆ.ಎಸ್.ಈಶ್ವರಪ್ಪನವರ ವಿರುದ್ಧ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಚುರುಕಾಗಿದ್ದು, ಭ್ರಷ್ಟಾಚಾರ ವಿಚಾರವನ್ನೇ ಮುನ್ನೆಲೆಗೆ ತಂದು ಪ್ರಚಾರ ಮಾಡುವ ಸೂಚನೆಯನ್ನು ನೀಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಯಾವ ತಂತ್ರವನ್ನು ರೂಪಿಸಿತ್ತೋ ಅದೇ ತಂತ್ರವನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಸುತ್ತಿರುವಂತೆ ಕಾಣುತ್ತಿದೆ.

‘ಭ್ರಷ್ಟ ಸರ್ಕಾರ’ ಎಂಬ ಆರೋಪ ಹೊರಿಸಿ ಹಾಡನ್ನೂ ಕಾಂಗ್ರೆಸ್ ಬಿಡುಗಡೆ ಮಾಡಿದೆ. ‘ನಲವತ್ತು ಪರ್ಸೆಂಟ್ ಸರ್ಕಾರ’ ಎಂಬ ಫೇಸ್‌ಬುಕ್‌ ಪೇಜ್‌ ತೆರೆಯಲಾಗಿದೆ. ಈಗ ‘40ಪರ್ಸೆಂಟ್‌ಸರ್ಕಾರ.ಕಾಂ’ (www.40percentsarkara.com) ಎಂಬ ಜಾಲತಾಣವನ್ನೂ ತೆರೆದು ಬಿಜೆಪಿಗೆ ತಿರುಗೇಟು ನೀಡಲಾಗುತ್ತಿದೆ.

‘40ಪರ್ಸೆಂಟ್‌ಸರ್ಕಾರ.ಕಾಂ’ನಲ್ಲಿ ಏನೇನಿದೆ?

‘ಇಂಗ್ಲಿಷ್ ಹಾಗೂ ಕನ್ನಡ’ ಎರಡು ಭಾಷೆಯಲ್ಲೂ ಓದಲು ಲಭ್ಯವಿರುವ ಈ ವೆಬ್‌ಸೈಟ್‌ನಲ್ಲಿ ‘40% ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಕರ್ನಾಟಕದ ಚಿತ್ರವಿರುವ ಲೋಗೋವನ್ನು ಡಿಸೈನ್ ಮಾಡಲಾಗಿದೆ. ಎಷ್ಟು ಜನ ದನಿ ಎತ್ತಿದ್ದಾರೆಂಬ ಲೆಕ್ಕವನ್ನು ಪ್ರದರ್ಶಿಸಲಾಗುತ್ತಿದೆ. ತಮ್ಮ ಆಕ್ಷೇಪಗಳನ್ನು ದಾಖಲಿಸಲು ‘8447704040′ ನಂಬರ್‌ ನೀಡಲಾಗಿದೆ.

ಬಿಟ್‌ಕಾಯಿನ್‌ ಸ್ಕ್ಯಾಮ್, ಪಿಎಸ್‌ಐ ಹಗರಣ, ರೋಡ್‌ ಸ್ಕ್ಯಾಮ್‌- ಮೊದಲಾದ ಪೋಸ್ಟರ್‌ಗಳ ಸ್ಲೈಡ್ ರಚಿಸಲಾಗಿದೆ. ಜೊತೆಗೆ ‘ನಿಮ್ಮ ಧ್ವನಿ ಏರಿಸಿ’ ಎಂಬ ಕೋರಿಕೆಯನ್ನು ಸಲ್ಲಿಸಲಾಗಿದೆ. “ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯಿರಿ. ನಿಮ್ಮ ಧ್ವನಿ ಏರಿಸಿ” ಎಂಬ ಕಾಲಂ ಮಾಡಲಾಗಿದ್ದು, ಹೆಸರು, ಕ್ಷೇತ್ರ, ಮೊಬೈಲ್‌ ನಂಬರ್‌ ಹಾಗೂ ಅಭಿಪ್ರಾಯನ್ನು ನಮೂದಿಸಿ ಸಬ್‌ಮಿಟ್ ಮಾಡಿದರೆ, ನಿಮ್ಮ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನಮೂದಿಸಿದರೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಾಗುತ್ತದೆ.

‘ಜನರ ಧ್ವನಿಗಳು’ ಎಂಬ ಶೀರ್ಷಿಕೆಯಲ್ಲಿ ಸ್ಲೈಡ್ ರಚಿಸಲಾಗಿದ್ದು, ಅಲ್ಲಿ ಜನರ ಅಭಿಪ್ರಾಯಗಳನ್ನು ಪ್ರದರ್ಶಿಸಲಾಗುತ್ತಿದೆ.

ವೆಬ್‌ಸೈಟ್ ಸ್ಕ್ರಾಲ್‌ ಮಾಡಿದರೆ, ‘ಗುಳುಂ ಸ್ವಾಹಃ ರಿಪೋರ್ಟ್’ ಎಂಬ ಶೀರ್ಷಿಕೆಯಲ್ಲಿ ಭ್ರಷ್ಟಾಚಾರ ಹಗರಣಗಳನ್ನು ಪಟ್ಟಿ ಮಾಡಲಾಗಿದೆ.

`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ
`40ಪರ್ಸೆಂಟ್ ಸರ್ಕಾರ’ ವೆಬ್‌ಸೈಟ್‌ನಿಂದ ಆಯ್ದ ಚಿತ್ರ

‘ಬಿಜೆಪಿ ಬಂಪರ್‌ ಆಫರ್‌’ ಎಂಬ ಶೀರ್ಷಿಕೆಯಡಿ, ‘ಯಾವ ಹುದ್ದೆಗೆೆ ಎಷ್ಟು ಹಣ’ ಎಂದು ಗೇಲಿ ಮಾಡಲಾಗಿದೆ.

ಕೊನೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದೆ. ವಿವಿಧ ಹಗರಣಗಳ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಇಲ್ಲಿ ನೀಡಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಆಗಿರುವ ವರದಿಗಳನ್ನು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....