Homeಕರ್ನಾಟಕ'ಪೇಮೆಂಟ್ ಸೀಟ್ ಅಧ್ಯಕ್ಷ' | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂದು ವ್ಯಂಗ್ಯವಾಡಿದ್ದಾರೆ. ನನ್ನ ಜೊತೆಗೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, “ಮಾನ್ಯ ವಿಜಯೇಂದ್ರ ಅವರೆ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ.” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್.ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ?” ಎಂದು ಅವರು ಕೇಳಿದ್ದಾರೆ.

“ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ.” ಎಂದು ಅವರಿಗೆ ಸಲಹೆ ನೀಡಿದ್ದಾರೆ.

“ನೀವಿನ್ನೂ ಆಡಳಿತಕ್ಕೆ ಹೊಸಬರು, ತೆರಿಗೆ – ಅನುದಾನ – ಜಿಎಸ್‌ಟಿ ಇತ್ಯಾದಿ ವಿಚಾರಗಳೆಲ್ಲ ನಿಮ್ಮ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರಿಗೇ ಅರ್ಥವಾಗಿಲ್ಲ, ನಿಮಗೆಷ್ಟು ಅರ್ಥವಾಗಬಹುದು? ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ತೆರಿಗೆ ಪಾಲನ್ನು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ ಮಾತ್ರ” ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

“ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಕರ್ನಾಟಕದ ಜನತೆ, ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಏಳು ಕೋಟಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತುವ ದಮ್-ತಾಖತ್ ನಿಮಗಾಗಲಿ ನಿಮ್ಮ ಹದಿನೇಳು ಎಂಪಿಗಳಿಗಾಗಲಿ ಎಲ್ಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನಿಮ್ಮದೇ ಶಾಸಕರು ಹೇಗೆ ದುರ್ಯೋಧನ – ದುಶ್ಯಾಸನರ ರೀತಿಯಲ್ಲಿ ನಡೆದುಕೊಂಡಿದ್ದರು ಎನ್ನುವ ಇತಿಹಾಸವನ್ನು ನಾನು ಕೆದಕಲು ಹೋಗುವುದಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ಪೂಜ್ಯ ತಂದೆಯವರನ್ನು ಮನೆಯಲ್ಲಿಟ್ಟುಕೊಂಡು ನಮಗೆ ಹೆಣ್ಣುಮಕ್ಕಳ ರಕ್ಷಣೆಯ ಪಾಠ ಮಾಡಲು ಕನಿಷ್ಠ ನಿಮಗೆ ನಾಚಿಕೆ ಆಗುವುದಿಲ್ಲವೇ?” ಎಂದು ಅವರು ಹೇಳಿದ್ದಾರೆ.

‘‘ಬೇಟಿ ಬಚಾವೋ ಬೇಟಿ ಪಡಾವೋ’’ ಎಂದು ಆಗಾಗ ಘೋಷಣೆ ಕೂಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಗೆ ಬದ್ಧರಾಗಿದ್ದರೆ ಪೋಕ್ಸೋ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ ಸ್ಥಾನದಿಂದ ಮತ್ತು ಅವರನ್ನು ರಕ್ಷಿಸುತ್ತಿರುವ ನಿಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ನನ್ನ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೆ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಪೀಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್ ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ.” ಎಂದು ಅವರು ಹೇಳಿದ್ದಾರೆ.

“ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು..!! ಅದಕ್ಕೆ ಸಿದ್ಧರಾಗಿರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...