Homeಕರ್ನಾಟಕ'ಪೇಮೆಂಟ್ ಸೀಟ್ ಅಧ್ಯಕ್ಷ' | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂದು ವ್ಯಂಗ್ಯವಾಡಿದ್ದಾರೆ. ನನ್ನ ಜೊತೆಗೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, “ಮಾನ್ಯ ವಿಜಯೇಂದ್ರ ಅವರೆ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ.” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್.ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ?” ಎಂದು ಅವರು ಕೇಳಿದ್ದಾರೆ.

“ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ.” ಎಂದು ಅವರಿಗೆ ಸಲಹೆ ನೀಡಿದ್ದಾರೆ.

“ನೀವಿನ್ನೂ ಆಡಳಿತಕ್ಕೆ ಹೊಸಬರು, ತೆರಿಗೆ – ಅನುದಾನ – ಜಿಎಸ್‌ಟಿ ಇತ್ಯಾದಿ ವಿಚಾರಗಳೆಲ್ಲ ನಿಮ್ಮ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರಿಗೇ ಅರ್ಥವಾಗಿಲ್ಲ, ನಿಮಗೆಷ್ಟು ಅರ್ಥವಾಗಬಹುದು? ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ತೆರಿಗೆ ಪಾಲನ್ನು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ ಮಾತ್ರ” ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

“ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಕರ್ನಾಟಕದ ಜನತೆ, ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಏಳು ಕೋಟಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತುವ ದಮ್-ತಾಖತ್ ನಿಮಗಾಗಲಿ ನಿಮ್ಮ ಹದಿನೇಳು ಎಂಪಿಗಳಿಗಾಗಲಿ ಎಲ್ಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನಿಮ್ಮದೇ ಶಾಸಕರು ಹೇಗೆ ದುರ್ಯೋಧನ – ದುಶ್ಯಾಸನರ ರೀತಿಯಲ್ಲಿ ನಡೆದುಕೊಂಡಿದ್ದರು ಎನ್ನುವ ಇತಿಹಾಸವನ್ನು ನಾನು ಕೆದಕಲು ಹೋಗುವುದಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ಪೂಜ್ಯ ತಂದೆಯವರನ್ನು ಮನೆಯಲ್ಲಿಟ್ಟುಕೊಂಡು ನಮಗೆ ಹೆಣ್ಣುಮಕ್ಕಳ ರಕ್ಷಣೆಯ ಪಾಠ ಮಾಡಲು ಕನಿಷ್ಠ ನಿಮಗೆ ನಾಚಿಕೆ ಆಗುವುದಿಲ್ಲವೇ?” ಎಂದು ಅವರು ಹೇಳಿದ್ದಾರೆ.

‘‘ಬೇಟಿ ಬಚಾವೋ ಬೇಟಿ ಪಡಾವೋ’’ ಎಂದು ಆಗಾಗ ಘೋಷಣೆ ಕೂಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಗೆ ಬದ್ಧರಾಗಿದ್ದರೆ ಪೋಕ್ಸೋ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ ಸ್ಥಾನದಿಂದ ಮತ್ತು ಅವರನ್ನು ರಕ್ಷಿಸುತ್ತಿರುವ ನಿಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ನನ್ನ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೆ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಪೀಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್ ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ.” ಎಂದು ಅವರು ಹೇಳಿದ್ದಾರೆ.

“ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು..!! ಅದಕ್ಕೆ ಸಿದ್ಧರಾಗಿರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...