Homeಕರ್ನಾಟಕ'ಪೇಮೆಂಟ್ ಸೀಟ್ ಅಧ್ಯಕ್ಷ' | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂದು ವ್ಯಂಗ್ಯವಾಡಿದ್ದಾರೆ. ನನ್ನ ಜೊತೆಗೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, “ಮಾನ್ಯ ವಿಜಯೇಂದ್ರ ಅವರೆ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ.” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್.ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ?” ಎಂದು ಅವರು ಕೇಳಿದ್ದಾರೆ.

“ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ.” ಎಂದು ಅವರಿಗೆ ಸಲಹೆ ನೀಡಿದ್ದಾರೆ.

“ನೀವಿನ್ನೂ ಆಡಳಿತಕ್ಕೆ ಹೊಸಬರು, ತೆರಿಗೆ – ಅನುದಾನ – ಜಿಎಸ್‌ಟಿ ಇತ್ಯಾದಿ ವಿಚಾರಗಳೆಲ್ಲ ನಿಮ್ಮ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರಿಗೇ ಅರ್ಥವಾಗಿಲ್ಲ, ನಿಮಗೆಷ್ಟು ಅರ್ಥವಾಗಬಹುದು? ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ತೆರಿಗೆ ಪಾಲನ್ನು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ ಮಾತ್ರ” ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

“ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಕರ್ನಾಟಕದ ಜನತೆ, ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಏಳು ಕೋಟಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತುವ ದಮ್-ತಾಖತ್ ನಿಮಗಾಗಲಿ ನಿಮ್ಮ ಹದಿನೇಳು ಎಂಪಿಗಳಿಗಾಗಲಿ ಎಲ್ಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನಿಮ್ಮದೇ ಶಾಸಕರು ಹೇಗೆ ದುರ್ಯೋಧನ – ದುಶ್ಯಾಸನರ ರೀತಿಯಲ್ಲಿ ನಡೆದುಕೊಂಡಿದ್ದರು ಎನ್ನುವ ಇತಿಹಾಸವನ್ನು ನಾನು ಕೆದಕಲು ಹೋಗುವುದಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ಪೂಜ್ಯ ತಂದೆಯವರನ್ನು ಮನೆಯಲ್ಲಿಟ್ಟುಕೊಂಡು ನಮಗೆ ಹೆಣ್ಣುಮಕ್ಕಳ ರಕ್ಷಣೆಯ ಪಾಠ ಮಾಡಲು ಕನಿಷ್ಠ ನಿಮಗೆ ನಾಚಿಕೆ ಆಗುವುದಿಲ್ಲವೇ?” ಎಂದು ಅವರು ಹೇಳಿದ್ದಾರೆ.

‘‘ಬೇಟಿ ಬಚಾವೋ ಬೇಟಿ ಪಡಾವೋ’’ ಎಂದು ಆಗಾಗ ಘೋಷಣೆ ಕೂಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಗೆ ಬದ್ಧರಾಗಿದ್ದರೆ ಪೋಕ್ಸೋ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ ಸ್ಥಾನದಿಂದ ಮತ್ತು ಅವರನ್ನು ರಕ್ಷಿಸುತ್ತಿರುವ ನಿಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ನನ್ನ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೆ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಪೀಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್ ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ.” ಎಂದು ಅವರು ಹೇಳಿದ್ದಾರೆ.

“ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು..!! ಅದಕ್ಕೆ ಸಿದ್ಧರಾಗಿರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...