Homeಕರ್ನಾಟಕ'ಪೇಮೆಂಟ್ ಸೀಟ್ ಅಧ್ಯಕ್ಷ' | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂದು ವ್ಯಂಗ್ಯವಾಡಿದ್ದಾರೆ. ನನ್ನ ಜೊತೆಗೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, “ಮಾನ್ಯ ವಿಜಯೇಂದ್ರ ಅವರೆ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ.” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್.ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ?” ಎಂದು ಅವರು ಕೇಳಿದ್ದಾರೆ.

“ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ.” ಎಂದು ಅವರಿಗೆ ಸಲಹೆ ನೀಡಿದ್ದಾರೆ.

“ನೀವಿನ್ನೂ ಆಡಳಿತಕ್ಕೆ ಹೊಸಬರು, ತೆರಿಗೆ – ಅನುದಾನ – ಜಿಎಸ್‌ಟಿ ಇತ್ಯಾದಿ ವಿಚಾರಗಳೆಲ್ಲ ನಿಮ್ಮ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರಿಗೇ ಅರ್ಥವಾಗಿಲ್ಲ, ನಿಮಗೆಷ್ಟು ಅರ್ಥವಾಗಬಹುದು? ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ತೆರಿಗೆ ಪಾಲನ್ನು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ ಮಾತ್ರ” ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

“ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಕರ್ನಾಟಕದ ಜನತೆ, ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಏಳು ಕೋಟಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತುವ ದಮ್-ತಾಖತ್ ನಿಮಗಾಗಲಿ ನಿಮ್ಮ ಹದಿನೇಳು ಎಂಪಿಗಳಿಗಾಗಲಿ ಎಲ್ಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನಿಮ್ಮದೇ ಶಾಸಕರು ಹೇಗೆ ದುರ್ಯೋಧನ – ದುಶ್ಯಾಸನರ ರೀತಿಯಲ್ಲಿ ನಡೆದುಕೊಂಡಿದ್ದರು ಎನ್ನುವ ಇತಿಹಾಸವನ್ನು ನಾನು ಕೆದಕಲು ಹೋಗುವುದಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ಪೂಜ್ಯ ತಂದೆಯವರನ್ನು ಮನೆಯಲ್ಲಿಟ್ಟುಕೊಂಡು ನಮಗೆ ಹೆಣ್ಣುಮಕ್ಕಳ ರಕ್ಷಣೆಯ ಪಾಠ ಮಾಡಲು ಕನಿಷ್ಠ ನಿಮಗೆ ನಾಚಿಕೆ ಆಗುವುದಿಲ್ಲವೇ?” ಎಂದು ಅವರು ಹೇಳಿದ್ದಾರೆ.

‘‘ಬೇಟಿ ಬಚಾವೋ ಬೇಟಿ ಪಡಾವೋ’’ ಎಂದು ಆಗಾಗ ಘೋಷಣೆ ಕೂಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಗೆ ಬದ್ಧರಾಗಿದ್ದರೆ ಪೋಕ್ಸೋ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ ಸ್ಥಾನದಿಂದ ಮತ್ತು ಅವರನ್ನು ರಕ್ಷಿಸುತ್ತಿರುವ ನಿಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ನನ್ನ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೆ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಪೀಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್ ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ.” ಎಂದು ಅವರು ಹೇಳಿದ್ದಾರೆ.

“ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು..!! ಅದಕ್ಕೆ ಸಿದ್ಧರಾಗಿರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...