Homeಮುಖಪುಟಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

ಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಕರ್ನಾಟಕದಲ್ಲಿ ಜೆಡಿಎಸ್‌, ಬಿಹಾರದಲ್ಲಿ ಜೆಡಿಯು ಸೇರಿದಂತೆ ಅನೇಕ ಪಕ್ಷಗಳು ಈಗಾಗಲೇ ಬಿಜೆಪಿಯ ತೆಕ್ಕೆಗೆ ಬಿದ್ದಿವೆ. ಇದರ ಮುಂದಿವರಿದ ಭಾಗವಾಗಿ ಕೇರಳದ ಜನಪಕ್ಷಂ (ಜಾತ್ಯತೀತ) ಬಿಜೆಪಿ ಜೊತೆ ವಿಲೀನಗೊಂಡಿದೆ.

ಏಳು ಬಾರಿಯ ಕೇರಳ ಶಾಸಕ ಪಿಸಿ ಜಾರ್ಜ್ ನೇತೃತ್ವದ ಕೇರಳ ಜನಪಕ್ಷಂ (ಜಾತ್ಯತೀತ) ಬುಧವಾರ ನವದೆಹಲಿಯಲ್ಲಿ ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಪಕ್ಷ ವಿಲೀನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬೆಂಬಲಿಸಬೇಕು ಎಂಬುವುದು ಪಕ್ಷದ ಕಾರ್ಯಕರ್ತರ ಸಾಮಾನ್ಯ ಭಾವನೆಯಾಗಿದೆ. ಹೀಗಾಗಿ, ನಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದೇವೆ ಎಂದಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಕೈ ಬಲಪಡಿಸುವ ಸಲುವಾಗಿ ಕೇರಳ ಜನಪಕ್ಷಂ (ಜಾತ್ಯತೀತ) ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಈ ಮೂಲಕ ಕೇರಳದಲ್ಲಿ ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಬೆಂಬಲಕ್ಕೆ ಪ್ರಬಲ ತಂಡವೊಂದು ಸೃಷ್ಟಿಯಾಗಿದೆ ಎಂದು ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಹೇಳಿದ್ದಾರೆ.

ಪಿಸಿ ಜಾರ್ಜ್ ಅವರ ಪಕ್ಷವನ್ನು ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಳ್ಳುವುದು ಬಿಜೆಪಿಯ ಯೋಜನೆಯಾಗಿತ್ತು. ಆದರೆ, ಮುಂದಿನ ದಿನಗಳಲ್ಲಿ ಜಾರ್ಜ್‌ ಒಕ್ಕೂಟ ತೊರೆದರೆ ಸಮಸ್ಯೆಯಾಗಲಿದೆ. ಅವರು ಆಗಾಗ ಪಕ್ಷದಿಂದ ಪಕ್ಷಕ್ಕೆ ಬೆಂಬಲವನ್ನು ಬದಲಾಯಿಸುತ್ತಿರುತ್ತಾರೆ. ಹಾಗಾಗಿ, ಪಕ್ಷವನ್ನೇ ವಿಲೀನ ಮಾಡಲು ಬಿಜೆಪಿ ಆಯ್ಕೆ ನೀಡಿತ್ತು. ಅದರಂತೆ, ಜಾರ್ಜ್‌ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ಜಾರ್ಜ್ ಅವರು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಸಿಪಿಎಂ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್ ಫ್ರಂಟ್ ಎರಡರ ಭಾಗವಾಗಿದ್ದ ಪ್ರಾದೇಶಿಕ ಪಕ್ಷಗಳಾದ ಕೇರಳ ಕಾಂಗ್ರೆಸ್ (ಮಣಿ) ಮತ್ತು ಕೇರಳ ಕಾಂಗ್ರೆಸ್ (ಜೋಸೆಫ್) ನ ಪ್ರಮುಖ ನಾಯಕರಾಗಿದ್ದರು.

ನಂತರ ಅವರು ಎರಡೂ ರಂಗಗಳಿಂದ ದೂರವಿದ್ದರು. 2016 ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಕೊಟ್ಟಾಯಂ ಜಿಲ್ಲೆಯ ತಮ್ಮ ತವರು ಪೂಣಜಾರ್‌ನಿಂದ ಸ್ಪರ್ಧಿಸಿದ್ದ ಅವರು ಯಶಸ್ಸು ಗಳಿಸಿದ್ದರು. ಆದರೆ 2021ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು.

2000 ಇಸವಿಯ ಆರಂಭದಲ್ಲಿ ಕೇರಳ ಕಾಂಗ್ರೆಸ್ (ಜೋಸೆಫ್) ನಿಂದ ಬೇರ್ಪಟ್ಟ ನಂತರ ಕೇರಳ ಕಾಂಗ್ರೆಸ್ (ಜಾತ್ಯತೀತ) ಪಕ್ಷವನ್ನು ಪಿಸಿ ಜಾರ್ಜ್ ಸ್ಥಾಪಿಸಿದ್ದರು. ಜಾರ್ಜ್ ಅವರ ಪಕ್ಷದ ವಿಲೀನವನ್ನು ಬಿಜೆಪಿಯ ಕ್ರಿಶ್ಚಿಯನ್ ಪ್ರಚಾರ ಕಾರ್ಯಕ್ರಮದ ಭಾಗವಾಗಿ ಪರಿಗಣಿಸಬಹುದು ಎಂದು ಮಾಧ್ಯಮಗಳು ಹೇಳಿವೆ.

ಇದನ್ನೂ ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...