Homeಮುಖಪುಟಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

ಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಕರ್ನಾಟಕದಲ್ಲಿ ಜೆಡಿಎಸ್‌, ಬಿಹಾರದಲ್ಲಿ ಜೆಡಿಯು ಸೇರಿದಂತೆ ಅನೇಕ ಪಕ್ಷಗಳು ಈಗಾಗಲೇ ಬಿಜೆಪಿಯ ತೆಕ್ಕೆಗೆ ಬಿದ್ದಿವೆ. ಇದರ ಮುಂದಿವರಿದ ಭಾಗವಾಗಿ ಕೇರಳದ ಜನಪಕ್ಷಂ (ಜಾತ್ಯತೀತ) ಬಿಜೆಪಿ ಜೊತೆ ವಿಲೀನಗೊಂಡಿದೆ.

ಏಳು ಬಾರಿಯ ಕೇರಳ ಶಾಸಕ ಪಿಸಿ ಜಾರ್ಜ್ ನೇತೃತ್ವದ ಕೇರಳ ಜನಪಕ್ಷಂ (ಜಾತ್ಯತೀತ) ಬುಧವಾರ ನವದೆಹಲಿಯಲ್ಲಿ ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಪಕ್ಷ ವಿಲೀನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬೆಂಬಲಿಸಬೇಕು ಎಂಬುವುದು ಪಕ್ಷದ ಕಾರ್ಯಕರ್ತರ ಸಾಮಾನ್ಯ ಭಾವನೆಯಾಗಿದೆ. ಹೀಗಾಗಿ, ನಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದೇವೆ ಎಂದಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಕೈ ಬಲಪಡಿಸುವ ಸಲುವಾಗಿ ಕೇರಳ ಜನಪಕ್ಷಂ (ಜಾತ್ಯತೀತ) ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಈ ಮೂಲಕ ಕೇರಳದಲ್ಲಿ ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಬೆಂಬಲಕ್ಕೆ ಪ್ರಬಲ ತಂಡವೊಂದು ಸೃಷ್ಟಿಯಾಗಿದೆ ಎಂದು ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಹೇಳಿದ್ದಾರೆ.

ಪಿಸಿ ಜಾರ್ಜ್ ಅವರ ಪಕ್ಷವನ್ನು ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಳ್ಳುವುದು ಬಿಜೆಪಿಯ ಯೋಜನೆಯಾಗಿತ್ತು. ಆದರೆ, ಮುಂದಿನ ದಿನಗಳಲ್ಲಿ ಜಾರ್ಜ್‌ ಒಕ್ಕೂಟ ತೊರೆದರೆ ಸಮಸ್ಯೆಯಾಗಲಿದೆ. ಅವರು ಆಗಾಗ ಪಕ್ಷದಿಂದ ಪಕ್ಷಕ್ಕೆ ಬೆಂಬಲವನ್ನು ಬದಲಾಯಿಸುತ್ತಿರುತ್ತಾರೆ. ಹಾಗಾಗಿ, ಪಕ್ಷವನ್ನೇ ವಿಲೀನ ಮಾಡಲು ಬಿಜೆಪಿ ಆಯ್ಕೆ ನೀಡಿತ್ತು. ಅದರಂತೆ, ಜಾರ್ಜ್‌ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ಜಾರ್ಜ್ ಅವರು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಸಿಪಿಎಂ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್ ಫ್ರಂಟ್ ಎರಡರ ಭಾಗವಾಗಿದ್ದ ಪ್ರಾದೇಶಿಕ ಪಕ್ಷಗಳಾದ ಕೇರಳ ಕಾಂಗ್ರೆಸ್ (ಮಣಿ) ಮತ್ತು ಕೇರಳ ಕಾಂಗ್ರೆಸ್ (ಜೋಸೆಫ್) ನ ಪ್ರಮುಖ ನಾಯಕರಾಗಿದ್ದರು.

ನಂತರ ಅವರು ಎರಡೂ ರಂಗಗಳಿಂದ ದೂರವಿದ್ದರು. 2016 ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಕೊಟ್ಟಾಯಂ ಜಿಲ್ಲೆಯ ತಮ್ಮ ತವರು ಪೂಣಜಾರ್‌ನಿಂದ ಸ್ಪರ್ಧಿಸಿದ್ದ ಅವರು ಯಶಸ್ಸು ಗಳಿಸಿದ್ದರು. ಆದರೆ 2021ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು.

2000 ಇಸವಿಯ ಆರಂಭದಲ್ಲಿ ಕೇರಳ ಕಾಂಗ್ರೆಸ್ (ಜೋಸೆಫ್) ನಿಂದ ಬೇರ್ಪಟ್ಟ ನಂತರ ಕೇರಳ ಕಾಂಗ್ರೆಸ್ (ಜಾತ್ಯತೀತ) ಪಕ್ಷವನ್ನು ಪಿಸಿ ಜಾರ್ಜ್ ಸ್ಥಾಪಿಸಿದ್ದರು. ಜಾರ್ಜ್ ಅವರ ಪಕ್ಷದ ವಿಲೀನವನ್ನು ಬಿಜೆಪಿಯ ಕ್ರಿಶ್ಚಿಯನ್ ಪ್ರಚಾರ ಕಾರ್ಯಕ್ರಮದ ಭಾಗವಾಗಿ ಪರಿಗಣಿಸಬಹುದು ಎಂದು ಮಾಧ್ಯಮಗಳು ಹೇಳಿವೆ.

ಇದನ್ನೂ ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...