Homeಕರ್ನಾಟಕಪಿಡಿಒ ಹುದ್ದೆ ನೇಮಕಾತಿ ವಿವಾದ | ತನಿಖೆಗೆ ಸಮಿತಿ ರಚನೆ - ಸಿಎಂ ಸಿದ್ದರಾಮಯ್ಯ

ಪಿಡಿಒ ಹುದ್ದೆ ನೇಮಕಾತಿ ವಿವಾದ | ತನಿಖೆಗೆ ಸಮಿತಿ ರಚನೆ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಲ್ಯಾಣ ಕರ್ನಾಟಕದ 97 ಪಿಡಿಒ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ವೇಳೆ ನಡೆದ ಗೊಂದಲದ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ಮೂವರು ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಿಳಿಸಿದ್ದಾರೆ. ಪಿಡಿಒ ಹುದ್ದೆ ನೇಮಕಾತಿ

ಕಲ್ಯಾಣ ಕರ್ನಾಟಕದ 97 ಪಿಡಿಒ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿತ್ತು. ಈ ಗೊಂದಲದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದ ಮುಖ್ಯಮಂತ್ರಿ, “ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದೆ. ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಕಲಿ ಇನ್ವಾಯ್ಸ್ ಸೃಷ್ಟಿ – ತಡೆಗೆ ಕ್ರಮ ಪಿಡಿಒ ಹುದ್ದೆ ನೇಮಕಾತಿ

ರಾಜ್ಯದಲ್ಲಿ ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿ.ಎಸ್.ಟಿ ವಂಚನೆ ಮಾಡದಂತೆ ತಡೆಯಲು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಂ. ನಾಗರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದ್ದಾರೆ.

“ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿ ಯಾವುದೇ ಸರಕುಗಳನ್ನು ಪೂರೈಸದೆ ನಕಲಿ ಇನ್ವಾಯ್ಸ್ ಸೃಷ್ಟಿಸಿ ಇನ್ ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಪ್ರಯತ್ನಿಸಿ 2437 ಕಂಪೆನಿಗಳು ಸಿಕ್ಕಿಬಿದ್ದಿವೆ” ಎಂದು ಅವರು ಹೇಳಿದ್ದಾರೆ.

“ಈ ರೀತಿಯ ತೆರಿಗೆ ವಂಚನೆ ಅಕ್ರಮವನ್ನು ತಡೆಗಟ್ಟಲು ಸರ್ಕಾರದಿಂದ ನೇಮಕಗೊಂಡ ರಾಜ್ಯ ವಾಣಿಜ್ಯ ತೆರಿಗೆಗಳ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು 752 ಪ್ರಕರಣಗಳಲ್ಲಿ ತಪಾಸಣೆ ಭಾಗದ ಕೈಗೊಂಡಿದ್ದಾರೆ. ಸದರಿ ಪ್ರಕರಣಗಳಲ್ಲಿ 429 ವಂಚನೆ ಪ್ರಕರಣಗಳಿಗೆ ನ್ಯಾಯನಿರ್ಣಯ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಪ್ರಕರಣ ಗಳು ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ಹಂತದಲ್ಲಿವೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ನಕಲಿ ಇನ್ವಾಯ್ಸ್ ಗಳ ಮೂಲಕ ರಾಜ್ಯದ ತೆರಿಗೆ ಸೋರಿಕೆಯಾಗದಂತೆ ರಾಜ್ಯದ ಜಿ.ಎಸ್.ಟಿ. ಜಾರಿ ವಿಭಾಗದ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ: ಟೆಕ್ಕಿ ಆತ್ಮಹತ್ಯೆ ಪ್ರಕರಣ: ‘ನನ್ನನ್ನು ಮೃಗದಂತೆ ನಡೆಸಿಕೊಂಡರು..’ ಎಂದು ಪತಿ ವಿರುದ್ಧ ದೂರು ನೀಡಿದ್ದ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...