Homeಮುಖಪುಟ'ಪಿಡಿಪಿ-ಬಿಜೆಪಿ ಮೈತ್ರಿಯು ಅಖಂಡವಾಗಿ ಉಳಿದಿದೆಯೇ..?'; ಮುಫ್ತಿ ವಿರುದ್ಧ ಒಮರ್ ಅಬ್ದುಲ್ಲಾ ಕಿಡಿ

‘ಪಿಡಿಪಿ-ಬಿಜೆಪಿ ಮೈತ್ರಿಯು ಅಖಂಡವಾಗಿ ಉಳಿದಿದೆಯೇ..?’; ಮುಫ್ತಿ ವಿರುದ್ಧ ಒಮರ್ ಅಬ್ದುಲ್ಲಾ ಕಿಡಿ

- Advertisement -
- Advertisement -

ಅನಂತನಾಗ್ ರಜೌರಿ ಸಂಸದೀಯ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಮತ ನೀಡುವಂತೆ, ಬಿಜೆಪಿ ಪ್ರಮುಖ ನಾಯಕರೊಬ್ಬರು ತಮ್ಮ ಪಹಾರಿ ಸಮುದಾಯದ ಸದಸ್ಯರನ್ನು ಕೇಳಿದ್ದು, ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ‘ಪಿಡಿಪಿ-ಬಿಜೆಪಿ ಮೈತ್ರಿಯು ಅಖಂಡವಾಗಿ ಉಳಿದಿದೆ’ ಎಂಬುದನ್ನು ಸಾಬೀತುಪಡಿಸಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

ಅನಂತನಾಗ್ ಕ್ಷೇತ್ರದ ಭಾಗವಾಗಿರುವ ಜಮ್ಮುವಿನ ಪಿರ್ ಪಂಜಾಲ್ ಪ್ರದೇಶದ ಬಿಜೆಪಿಯ ಪಹಾರಿ ನಾಯಕ ಸೈಯದ್ ಮುಷ್ತಾಕ್ ಬುಖಾರಿ, ಮೆಹಬೂಬಾ ಅವರು ಈ ಹಿಂದೆ ಸಮುದಾಯಕ್ಕಾಗಿ ಕೆಲಸ ಮಾಡಿದ್ದರಿಂದ ಅವರಿಗೆ ಮತ ಹಾಕುವುದು ಉತ್ತಮ ಎಂದು ಹೇಳಿದರು.

ಬಿಜೆಪಿ ಈ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ ಮತ್ತು ಅಪ್ನಿ ಪಕ್ಷದ ಅಭ್ಯರ್ಥಿ ಜಾಫರ್ ಇಕ್ಬಾಲ್ ಮನ್ಹಾಸ್ ಅವರನ್ನು ಬೆಂಬಲಿಸುತ್ತದೆ ಎಂದು ನಂಬಲಾಗಿದೆ.

ಮಾಜಿ ನ್ಯಾಷನಲ್ ಕಾನ್ಫರೆನ್ಸ್ ಸಚಿವರಾಗಿದ್ದ ಬುಖಾರಿ ಅವರು ತಮ್ಮ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಿದ ನಂತರ ಬಿಜೆಪಿ ಸೇರಿದರು. ಕ್ಷೇತ್ರದ ಜನಸಂಖ್ಯೆಯ ನಾಲ್ಕನೇ ಒಂದು ಭಾಗದ ಪಹಾರಿಗಳು, ಮೆಹಬೂಬಾಗೆ ಮತ ಹಾಕಿದರೆ, ಅದು ಅವರ ಸ್ಥಾನವನ್ನು ಬಲಪಡಿಸುವ ಸಾಧ್ಯತೆಯಿದೆ.

ಬುಖಾರಿ ಅವರ ಕರೆಗೆ ಬಿಜೆಪಿ ಸ್ಪಂದಿಸಿಲ್ಲ. ಆದರೆ, ಒಮರ್ ಪಿಡಿಪಿ ಮತ್ತು ಬಿಜೆಪಿ ಮಿತ್ರಪಕ್ಷಗಳಾಗಿ ಉಳಿದಿವೆ ಎಂದು ಹೇಳಿದ್ದಾರೆ. ಮೆಹಬೂಬಾ ಮತ್ತು ಆಕೆಯ ತಂದೆ ಮುಫ್ತಿ ಮೊಹಮ್ಮದ್ ಸಯೀದ್ ಅವರು 2015 ರಿಂದ 2018 ರವರೆಗೆ ಬಿಜೆಪಿ ತನ್ನ ಬೆಂಬಲವನ್ನು ಹಿಂತೆಗೆದುಕೊಳ್ಳುವವರೆಗೂ ಪಿಡಿಪಿ-ಬಿಜೆಪಿ ಸರ್ಕಾರದ ನೇತೃತ್ವ ವಹಿಸಿದ್ದರು.

“ನಮ್ಮ ಪಿಡಿಪಿ ಅಭ್ಯರ್ಥಿ ಎಲ್ಲೆಡೆ ನ್ಯಾಷನಲ್ ಕಾನ್ಪರೆನ್ಸ್‌ ಪಕ್ಷವನ್ನು ಅನ್ನು ಗುರಿಯಾಗಿಸಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿನಾಶವನ್ನು ತಂದ ನಮ್ಮ ನಿಜವಾದ ಪ್ರತಿಸ್ಪರ್ಧಿ ಬಿಜೆಪಿಯೇ ಎಂದು ನಾನು ಆಶ್ಚರ್ಯ ಪಡುತ್ತಿದ್ದೆ, ಮೆಹಬೂಬಾಜಿ ಏಕೆ ಬಿಜೆಪಿಯನ್ನು ಹೆಚ್ಚು ಗುರಿಯಾಗಿಸಿಕೊಂಡಿಲ್ಲ” ಎಂದು ಒಮರ್ ಪ್ರಶ್ನಿಸಿದ್ದಾರೆ.

“ನನಗೆ ನಿನ್ನೆ (ಸೋಮವಾರ) ಉತ್ತರ ಸಿಕ್ಕಿತು; ನಾನು ಹೆಚ್ಚು ಆಶ್ಚರ್ಯಪಡಲಿಲ್ಲ. ಏಕೆಂದರೆ, ಒಳಗೆ ಏನು ಬೇಯಿಸಲಾಗುತ್ತಿದೆ ಎಂದು ನನಗೆ ತಿಳಿದಿತ್ತು. ಮುಂದೊಂದು ದಿನ ಬಹಿರಂಗವಾಗಿ ಬರುತ್ತೆ ಅಂತ ಗೊತ್ತಿರಲಿಲ್ಲ. ಬಿಜೆಪಿ ಪಿಡಿಪಿಯನ್ನು ಬೆಂಬಲಿಸುತ್ತಿದೆ ಎಂದು ಹೇಳಿದ ಮುಷ್ತಾಕ್ ಬುಖಾರಿ ಎಂಬ ವ್ಯಕ್ತಿಗೆ ನಾನು ಕೃತಜ್ಞನಾಗಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ; ಅಮೇಥಿಯಲ್ಲಿ ‘ಅಬ್ ಕಿ ಬಾರ್ ರಾಬರ್ಟ್ ವಾದ್ರಾ’ ಪೋಸ್ಟರ್; ಪ್ರಿಯಾಂಕಾ ಪತಿ ಸ್ಪರ್ಧೆಗೆ ಹೆಚ್ಚಿದ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...