HomeUncategorizedಪೂಂಛ್‌ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾದ ಮೆಹಬೂಬಾ ಮುಫ್ತಿಗೆ ಗೃಹಬಂಧನ

ಪೂಂಛ್‌ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾದ ಮೆಹಬೂಬಾ ಮುಫ್ತಿಗೆ ಗೃಹಬಂಧನ

- Advertisement -
- Advertisement -

ಪೂಂಛ್‌ ಜಿಲ್ಲೆಯ ಸುರನ್‌ಕೋಟೆ ಬಳಿ ಸೇನೆಯ ವಶದಲ್ಲಿದ್ದ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬಸ್ಥರು ಮತ್ತು ಸ್ಥಳೀಯರು ಸೇನಾಧಿಕಾರಿಗಳು ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಇದರಿಂದಾಗಿ ಪೂಂಛ್‌ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯನ್ನು ಪಿಡಿಪಿ ಸೇರಿದಂತೆ ಹಲವು ಪಕ್ಷಗಳು ಖಂಡಿಸಿದೆ. ಇದೀಗ ಮೃತರ ಕಟುಂಬಸ್ಥರನ್ನು ಭೇಟಿಗೆ ಮುಂದಾಗಿದ್ದ ಜಮ್ಮು-ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)  ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಸುರನ್‌ಕೋಟೆಗೆ ಭೇಟಿ ನೀಡದಂತೆ ಬಲವಂತವಾಗಿ ಗೃಹಬಂಧನದಲ್ಲಿ ಇರಿಸಲಾಗಿದೆ. ಅವರು ಪರಿಸ್ಥಿತಿಯನ್ನು ತಿಳಿಯಲು ಮತ್ತು ಸೇನಾ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ನೀಡುವ ಗುರಿಯನ್ನು ಹೊಂದಿದ್ದರು ಎಂದು ಪಿಡಿಪಿ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದೆ.

ಮೆಹಬೂಬಾ ಮುಫ್ತಿ ಅವರ ಅನ್ಯಾಯದ ಗೃಹಬಂಧನವನ್ನು ಪಿಡಿಪಿ ತೀವ್ರವಾಗಿ ಖಂಡಿಸುತ್ತದೆ. ಅವರ ನಿವಾಸದ ಗೇಟ್‌ಗಳಿಗೆ ಸೀಲ್‌ ಮಾಡಿರುವುದು ಮತ್ತು ಅವರ ಸುರನ್‌ಕೋಟೆ ಭೇಟಿಗೆ ಅಡ್ಡಿಯುಂಟುಮಾಡಿರುವುದು  ಅನಗತ್ಯ. ಇದನ್ನು ಪಕ್ಷವು ತೀವ್ರವಾಗಿ ಖಂಡಿಸುತ್ತದೆ ಎಂದು ಪಿಡಿಪಿ ಹೇಳಿಕೊಂಡಿದೆ.

ಈ ಮೊದಲು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಮೆಹಬೂಬಾ ಮುಫ್ತಿ,  ಕುಟುಂಬಗಳಿಗೆ ಮಾಹಿತಿ ನೀಡದೆ ಹೆಚ್ಚಿನ ಯುವಕರನ್ನು ಭದ್ರತಾ ಪಡೆಗಳು ಬಂಧಿಸಿರುವ ಕಾರಣ ಮಧ್ಯಪ್ರವೇಶಿಸುವಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಒತ್ತಾಯಿಸಿದ್ದರು. ಸೇನೆಯು ತಾಣಮಂಡಿ ಪ್ರದೇಶದ ಬಾಂಗಿಯಾದಿಂದ ನಾಗರಿಕರನ್ನು ವಶಕ್ಕೆ ತೆಗೆದುಕೊಂಡಿದೆ ಮತ್ತು ಅವರ ಬಗ್ಗೆ ಮಾಹಿತಿಯನ್ನು ಮುಚ್ಚಿಡುತ್ತಿದೆ. ನಾಗರಿಕರಿಗೆ ಚಿತ್ರಹಿಂಸೆ ನೀಡಿದ ಹತ್ಯೆಯ ಈ ಘಟನೆ ಬಳಿಕ ಅವರ ಕುಟುಂಬಸ್ತರು ಮತ್ತಷ್ಟು ಆತಂಕಿತರಾಗಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ಅವರನ್ನು ನೋಡಲು ಅವಕಾಶ ನೀಡುತ್ತಿಲ್ಲ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಮೆಹಬೂಬಾ ಮುಫ್ತಿ ಆಗ್ರಹಿಸಿದ್ದರು.

ಇದು ಬೇರೆ ಯಾವುದೇ ಸರ್ಕಾರದ ಅಡಿಯಲ್ಲಿ ಸಂಭವಿಸಿದ್ದರೆ, ಗೋದಿ ಮಾದ್ಯ ಮವು ಪ್ರಶ್ನೆಗಳನ್ನು ಎತ್ತುತ್ತಿತ್ತು. ಅವರು ಚಿತ್ರಹಿಂಸೆಗೊಳಗಾದ 15 ಜನರನ್ನು ತಮ್ಮ ಮನೆಗಳಿಂದ ಎಳೆದುಕೊಂಡು ಹೋಗಿದ್ದರು. ಅವರಲ್ಲಿ ಮೂವರು ಈಗಾಗಲೇ ಸಾವನ್ನಪ್ಪಿದ್ದಾರೆ. ಈ ನಯಾ ಕಾಶ್ಮೀರ ಹೇಗಿದೆ? ಅಲ್ಲಿ ಸೈನಿಕರಾಗಲಿ ಅಥವಾ ಸಾಮಾನ್ಯ ಜನರಾಗಲಿ ಸುರಕ್ಷಿತವಾಗಿಲ್ಲ ಎಂದು ಮುಫ್ತಿ ಆಕ್ರೋಶ ವ್ಯಕ್ತಪಡಿಸಿದ್ದರು.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ  ಐವರು ಯೋಧರು, ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಘಟನೆ ಬಳಿಕ ಪೂಂಛ್‌ನಲ್ಲಿ ಭಾರೀ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಕರ್ಪ್ಯೂ ವಿಧಿಸಲಾಗಿದೆ. ಇಂಟರ್ನೆಟ್‌ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ.

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...