HomeUncategorizedಪೂಂಛ್‌ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾದ ಮೆಹಬೂಬಾ ಮುಫ್ತಿಗೆ ಗೃಹಬಂಧನ

ಪೂಂಛ್‌ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾದ ಮೆಹಬೂಬಾ ಮುಫ್ತಿಗೆ ಗೃಹಬಂಧನ

- Advertisement -
- Advertisement -

ಪೂಂಛ್‌ ಜಿಲ್ಲೆಯ ಸುರನ್‌ಕೋಟೆ ಬಳಿ ಸೇನೆಯ ವಶದಲ್ಲಿದ್ದ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬಸ್ಥರು ಮತ್ತು ಸ್ಥಳೀಯರು ಸೇನಾಧಿಕಾರಿಗಳು ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಇದರಿಂದಾಗಿ ಪೂಂಛ್‌ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯನ್ನು ಪಿಡಿಪಿ ಸೇರಿದಂತೆ ಹಲವು ಪಕ್ಷಗಳು ಖಂಡಿಸಿದೆ. ಇದೀಗ ಮೃತರ ಕಟುಂಬಸ್ಥರನ್ನು ಭೇಟಿಗೆ ಮುಂದಾಗಿದ್ದ ಜಮ್ಮು-ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)  ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಸುರನ್‌ಕೋಟೆಗೆ ಭೇಟಿ ನೀಡದಂತೆ ಬಲವಂತವಾಗಿ ಗೃಹಬಂಧನದಲ್ಲಿ ಇರಿಸಲಾಗಿದೆ. ಅವರು ಪರಿಸ್ಥಿತಿಯನ್ನು ತಿಳಿಯಲು ಮತ್ತು ಸೇನಾ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ನೀಡುವ ಗುರಿಯನ್ನು ಹೊಂದಿದ್ದರು ಎಂದು ಪಿಡಿಪಿ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದೆ.

ಮೆಹಬೂಬಾ ಮುಫ್ತಿ ಅವರ ಅನ್ಯಾಯದ ಗೃಹಬಂಧನವನ್ನು ಪಿಡಿಪಿ ತೀವ್ರವಾಗಿ ಖಂಡಿಸುತ್ತದೆ. ಅವರ ನಿವಾಸದ ಗೇಟ್‌ಗಳಿಗೆ ಸೀಲ್‌ ಮಾಡಿರುವುದು ಮತ್ತು ಅವರ ಸುರನ್‌ಕೋಟೆ ಭೇಟಿಗೆ ಅಡ್ಡಿಯುಂಟುಮಾಡಿರುವುದು  ಅನಗತ್ಯ. ಇದನ್ನು ಪಕ್ಷವು ತೀವ್ರವಾಗಿ ಖಂಡಿಸುತ್ತದೆ ಎಂದು ಪಿಡಿಪಿ ಹೇಳಿಕೊಂಡಿದೆ.

ಈ ಮೊದಲು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಮೆಹಬೂಬಾ ಮುಫ್ತಿ,  ಕುಟುಂಬಗಳಿಗೆ ಮಾಹಿತಿ ನೀಡದೆ ಹೆಚ್ಚಿನ ಯುವಕರನ್ನು ಭದ್ರತಾ ಪಡೆಗಳು ಬಂಧಿಸಿರುವ ಕಾರಣ ಮಧ್ಯಪ್ರವೇಶಿಸುವಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಒತ್ತಾಯಿಸಿದ್ದರು. ಸೇನೆಯು ತಾಣಮಂಡಿ ಪ್ರದೇಶದ ಬಾಂಗಿಯಾದಿಂದ ನಾಗರಿಕರನ್ನು ವಶಕ್ಕೆ ತೆಗೆದುಕೊಂಡಿದೆ ಮತ್ತು ಅವರ ಬಗ್ಗೆ ಮಾಹಿತಿಯನ್ನು ಮುಚ್ಚಿಡುತ್ತಿದೆ. ನಾಗರಿಕರಿಗೆ ಚಿತ್ರಹಿಂಸೆ ನೀಡಿದ ಹತ್ಯೆಯ ಈ ಘಟನೆ ಬಳಿಕ ಅವರ ಕುಟುಂಬಸ್ತರು ಮತ್ತಷ್ಟು ಆತಂಕಿತರಾಗಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ಅವರನ್ನು ನೋಡಲು ಅವಕಾಶ ನೀಡುತ್ತಿಲ್ಲ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಮೆಹಬೂಬಾ ಮುಫ್ತಿ ಆಗ್ರಹಿಸಿದ್ದರು.

ಇದು ಬೇರೆ ಯಾವುದೇ ಸರ್ಕಾರದ ಅಡಿಯಲ್ಲಿ ಸಂಭವಿಸಿದ್ದರೆ, ಗೋದಿ ಮಾದ್ಯ ಮವು ಪ್ರಶ್ನೆಗಳನ್ನು ಎತ್ತುತ್ತಿತ್ತು. ಅವರು ಚಿತ್ರಹಿಂಸೆಗೊಳಗಾದ 15 ಜನರನ್ನು ತಮ್ಮ ಮನೆಗಳಿಂದ ಎಳೆದುಕೊಂಡು ಹೋಗಿದ್ದರು. ಅವರಲ್ಲಿ ಮೂವರು ಈಗಾಗಲೇ ಸಾವನ್ನಪ್ಪಿದ್ದಾರೆ. ಈ ನಯಾ ಕಾಶ್ಮೀರ ಹೇಗಿದೆ? ಅಲ್ಲಿ ಸೈನಿಕರಾಗಲಿ ಅಥವಾ ಸಾಮಾನ್ಯ ಜನರಾಗಲಿ ಸುರಕ್ಷಿತವಾಗಿಲ್ಲ ಎಂದು ಮುಫ್ತಿ ಆಕ್ರೋಶ ವ್ಯಕ್ತಪಡಿಸಿದ್ದರು.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ  ಐವರು ಯೋಧರು, ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಘಟನೆ ಬಳಿಕ ಪೂಂಛ್‌ನಲ್ಲಿ ಭಾರೀ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಕರ್ಪ್ಯೂ ವಿಧಿಸಲಾಗಿದೆ. ಇಂಟರ್ನೆಟ್‌ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ.

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...