Homeಮುಖಪುಟನಾಸಿರ್ ಮದನಿ ಕುರಿತು ಟೀಕೆ : ಸಿಪಿಐ(ಎಂ) ನಾಯಕ ಜಯರಾಜನ್ ಪುಸ್ತಕದ ವಿರುದ್ದ ಸಿಡಿದೆದ್ದ ಪಿಡಿಪಿ...

ನಾಸಿರ್ ಮದನಿ ಕುರಿತು ಟೀಕೆ : ಸಿಪಿಐ(ಎಂ) ನಾಯಕ ಜಯರಾಜನ್ ಪುಸ್ತಕದ ವಿರುದ್ದ ಸಿಡಿದೆದ್ದ ಪಿಡಿಪಿ ಕಾರ್ಯಕರ್ತರು

- Advertisement -
- Advertisement -

ಅಕ್ಟೋಬರ್ 26,2024ರಂದು ಕೋಝೀಕ್ಕೋಡ್‌ನಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಡುಗಡೆ ಮಾಡಿರುವ ಸಿಪಿಐ(ಎಂ) ನಾಯಕ ಪಿ ಜಯರಾಜನ್ ಅವರ ಪುಸ್ತಕ, ‘ಕೇರಳಂ: ಮುಸ್ಲಿಂ ರಾಷ್ಟ್ರಿಯಂ, ರಾಷ್ಟ್ರೀಯ ಇಸ್ಲಾಂ’ ಎಂಬ ಪುಸ್ತಕ ವಿವಾದದ ಕಿಡಿ ಹೊತ್ತಿಸಿದೆ.

ವಿಶೇಷವಾಗಿ ಪುಸ್ತಕದ ವಿರುದ್ದ ನಾಸಿರ್ ಮದನಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಸಿಡಿದೆದ್ದಿದೆ. ವರದಿಗಳ ಪ್ರಕಾರ, ಪುಸ್ತಕವು ಅಬ್ದುಲ್ ನಾಸಿರ್ ಮದನಿ ಅವರನ್ನು ವಿಮರ್ಶೆ ಮಾಡಿದ್ದು, ಮದನಿ ಕೇರಳದ ಮುಸ್ಲಿಂ ಯುವಕರನ್ನು ಮೂಲಭೂತವಾದದ ಕಡೆಗೆ ಪ್ರಭಾವಿಸಿದ ವ್ಯಕ್ತಿ ಎಂದು ವಿವರಿಸಿದೆ.

ಮದನಿಯ ಭಾಷಣಗಳು ಉಗ್ರವಾದಿ ಚಿಂತನೆಗಳನ್ನು ಬೆಳೆಸುವಲ್ಲಿ ಪ್ರಮುಖವಾಗಿದೆ ಎಂದು ಪುಸ್ತಕವು ಆರೋಪಿಸಿದೆ. ಆದರೂ, ಅವರು ಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ ಬಂಧನ ಮತ್ತು ನಂತರದ ಜೈಲುವಾಸದ ಬಳಿಕ ವಿಭಿನ್ನ ವಿಧಾನವನ್ನು ಅಳವಡಿಸಿಕೊಂಡರು ಎಂದಿದೆ.

ಜಯರಾಜನ್ ವಿರುದ್ದ ಪಿಡಿಪಿ ಕಾರ್ಯಕರ್ತರು ಕೋಝಿಕ್ಕೋಡ್‌ನಲ್ಲಿ ಪ್ರತಿಭಟನೆ ನಡೆಸಿದ್ದು, ಪುಸ್ತಕದ ಪ್ರತಿಗಳನ್ನು ಸುಟ್ಟು ಹಾಕಿದ್ದಾರೆ. ಪಿಡಿಪಿ ನಾಯಕರು ಪುಸ್ತಕದಲ್ಲಿನ ಆರೋಪಗಳನ್ನು ತಳ್ಳಿ ಹಾಕಿದ್ದು, “ಮದನಿ ಯಾರನ್ನೂ ಮೂಲಭೂತವಾದಿಗಳನ್ನಾಗಿಸಿಲ್ಲ ಎಂದು ಸ್ವತಃ ಸಿಪಿಐ(ಎಂ) ಈ ಹಿಂದೆ ಸಮರ್ಥಿಸಿಕೊಂಡಿದೆ. ಪಿಣರಾಯಿ ವಿಜಯನ್ ಸೇರಿದಂತೆ ಸಿಪಿಐ(ಎಂ) ನಾಯಕರು ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು 2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಿಡಿಪಿ ಎಡ ಪ್ರಜಾಸತ್ತಾತ್ಮಕ ರಂಗವನ್ನು (ಎಲ್‌ಡಿಎಫ್) ಬೆಂಬಲಿಸಿದೆ” ಎಂದಿದ್ದಾರೆ.

ಜಯರಾಜನ್ ಅವರನ್ನು ಸಮರ್ಥಿಸಿಕೊಂಡಿರುವ ಸಿಎಂ ಪಿಣರಾಯಿ ವಿಜಯನ್, ಲೇಖಕರ ಅಭಿಪ್ರಾಯಗಳನ್ನು ಪಕ್ಷದ ನಿಲುವಿನಿಂದ ಸ್ವತಂತ್ರವಾಗಿ ನೋಡಬೇಕು ಎಂದು ಒತ್ತಿ ಹೇಳಿದ್ದಾರೆ. “ಲೇಖಕನಿಗೆ ತನ್ನದೇ ಆದ ದೃಷ್ಟಿಕೋನವಿದೆ, ಅದು ಚಳವಳಿಯ ರಾಜಕೀಯ ಸಿದ್ಧಾಂತದಿಂದ ಭಿನ್ನವಾಗಿರಬಹುದು. ಪುಸ್ತಕ ಬಿಡುಗಡೆ ಮಾಡಲು ವೈಯಕ್ತಿಕ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವ ಅಗತ್ಯವಿಲ್ಲ. ಅಭಿಪ್ರಾಯವು ವ್ಯಕ್ತಿಯ ದೃಷ್ಟಿಕೋನವಾಗಿದೆ ಮತ್ತು ಅದನ್ನು ಹಾಗೆ ನೋಡಬೇಕು” ಎಂದಿದ್ದಾರೆ.

ಇದೇ ವೇಳೆ ಮುಸ್ಲಿಂ ಲೀಗ್ (ಐಯುಎಂಎಲ್‌) ಮತ್ತು ಜಮಾಅತೇ ಇಸ್ಲಾಮಿ ಬಗ್ಗೆ ಮಾತನಾಡಿದ ಪಿಣರಾಯಿ ವಿಜಯನ್, “ಲೀಗ್ ಮತ್ತು ಜಮಾಅತೇ ಇಸ್ಲಾಮಿಯನ್ನು ಒಂದೇ ಲೆನ್ಸ್ ಮೂಲಕ ನೋಡಲು ಸಾಧ್ಯವಿಲ್ಲ. ಜಮಾತ್‌ನ ಗುರಿ ಇಸ್ಲಾಮಿಕ್ ರಾಜ್ಯವಾಗಿದೆ, ಆದರೆ ಲೀಗ್ ಭಾರತದ ಹೊರಗೆ ಮೈತ್ರಿಗಳಿಲ್ಲದ ಸುಧಾರಣಾವಾದಿ ಚಳುವಳಿಯಾಗಿದೆ. ಜಮಾತ್ ವಿದೇಶದಲ್ಲಿ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಮತ್ತು ಲೀಗ್‌ಗಿಂತ ಭಿನ್ನವಾಗಿ ಇಸ್ಲಾಮಿಕ್ ಸಾರ್ವತ್ರಿಕತೆಯ ಗುರಿಯನ್ನು ಹೊಂದಿದೆ. ಆರ್‌ಎಸ್‌ಎಸ್ ಮತ್ತು ಜಮಾತ್ ಒಂದೇ ಗರಿಗಳ ಪಕ್ಷಿಗಳು. ಲೀಗ್ ತನ್ನ ಕಮ್ಯುನಿಸ್ಟ್ ವಿರೋಧಿ ಕಾರ್ಯಸೂಚಿಯಲ್ಲಿ ಮಾತ್ರ ಈ ಕೋಮು ಗುಂಪುಗಳೊಂದಿಗೆ ಸಹಕರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...