Homeಮುಖಪುಟನಾಸಿರ್ ಮದನಿ ಕುರಿತು ಟೀಕೆ : ಸಿಪಿಐ(ಎಂ) ನಾಯಕ ಜಯರಾಜನ್ ಪುಸ್ತಕದ ವಿರುದ್ದ ಸಿಡಿದೆದ್ದ ಪಿಡಿಪಿ...

ನಾಸಿರ್ ಮದನಿ ಕುರಿತು ಟೀಕೆ : ಸಿಪಿಐ(ಎಂ) ನಾಯಕ ಜಯರಾಜನ್ ಪುಸ್ತಕದ ವಿರುದ್ದ ಸಿಡಿದೆದ್ದ ಪಿಡಿಪಿ ಕಾರ್ಯಕರ್ತರು

- Advertisement -
- Advertisement -

ಅಕ್ಟೋಬರ್ 26,2024ರಂದು ಕೋಝೀಕ್ಕೋಡ್‌ನಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಡುಗಡೆ ಮಾಡಿರುವ ಸಿಪಿಐ(ಎಂ) ನಾಯಕ ಪಿ ಜಯರಾಜನ್ ಅವರ ಪುಸ್ತಕ, ‘ಕೇರಳಂ: ಮುಸ್ಲಿಂ ರಾಷ್ಟ್ರಿಯಂ, ರಾಷ್ಟ್ರೀಯ ಇಸ್ಲಾಂ’ ಎಂಬ ಪುಸ್ತಕ ವಿವಾದದ ಕಿಡಿ ಹೊತ್ತಿಸಿದೆ.

ವಿಶೇಷವಾಗಿ ಪುಸ್ತಕದ ವಿರುದ್ದ ನಾಸಿರ್ ಮದನಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಸಿಡಿದೆದ್ದಿದೆ. ವರದಿಗಳ ಪ್ರಕಾರ, ಪುಸ್ತಕವು ಅಬ್ದುಲ್ ನಾಸಿರ್ ಮದನಿ ಅವರನ್ನು ವಿಮರ್ಶೆ ಮಾಡಿದ್ದು, ಮದನಿ ಕೇರಳದ ಮುಸ್ಲಿಂ ಯುವಕರನ್ನು ಮೂಲಭೂತವಾದದ ಕಡೆಗೆ ಪ್ರಭಾವಿಸಿದ ವ್ಯಕ್ತಿ ಎಂದು ವಿವರಿಸಿದೆ.

ಮದನಿಯ ಭಾಷಣಗಳು ಉಗ್ರವಾದಿ ಚಿಂತನೆಗಳನ್ನು ಬೆಳೆಸುವಲ್ಲಿ ಪ್ರಮುಖವಾಗಿದೆ ಎಂದು ಪುಸ್ತಕವು ಆರೋಪಿಸಿದೆ. ಆದರೂ, ಅವರು ಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ ಬಂಧನ ಮತ್ತು ನಂತರದ ಜೈಲುವಾಸದ ಬಳಿಕ ವಿಭಿನ್ನ ವಿಧಾನವನ್ನು ಅಳವಡಿಸಿಕೊಂಡರು ಎಂದಿದೆ.

ಜಯರಾಜನ್ ವಿರುದ್ದ ಪಿಡಿಪಿ ಕಾರ್ಯಕರ್ತರು ಕೋಝಿಕ್ಕೋಡ್‌ನಲ್ಲಿ ಪ್ರತಿಭಟನೆ ನಡೆಸಿದ್ದು, ಪುಸ್ತಕದ ಪ್ರತಿಗಳನ್ನು ಸುಟ್ಟು ಹಾಕಿದ್ದಾರೆ. ಪಿಡಿಪಿ ನಾಯಕರು ಪುಸ್ತಕದಲ್ಲಿನ ಆರೋಪಗಳನ್ನು ತಳ್ಳಿ ಹಾಕಿದ್ದು, “ಮದನಿ ಯಾರನ್ನೂ ಮೂಲಭೂತವಾದಿಗಳನ್ನಾಗಿಸಿಲ್ಲ ಎಂದು ಸ್ವತಃ ಸಿಪಿಐ(ಎಂ) ಈ ಹಿಂದೆ ಸಮರ್ಥಿಸಿಕೊಂಡಿದೆ. ಪಿಣರಾಯಿ ವಿಜಯನ್ ಸೇರಿದಂತೆ ಸಿಪಿಐ(ಎಂ) ನಾಯಕರು ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು 2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಿಡಿಪಿ ಎಡ ಪ್ರಜಾಸತ್ತಾತ್ಮಕ ರಂಗವನ್ನು (ಎಲ್‌ಡಿಎಫ್) ಬೆಂಬಲಿಸಿದೆ” ಎಂದಿದ್ದಾರೆ.

ಜಯರಾಜನ್ ಅವರನ್ನು ಸಮರ್ಥಿಸಿಕೊಂಡಿರುವ ಸಿಎಂ ಪಿಣರಾಯಿ ವಿಜಯನ್, ಲೇಖಕರ ಅಭಿಪ್ರಾಯಗಳನ್ನು ಪಕ್ಷದ ನಿಲುವಿನಿಂದ ಸ್ವತಂತ್ರವಾಗಿ ನೋಡಬೇಕು ಎಂದು ಒತ್ತಿ ಹೇಳಿದ್ದಾರೆ. “ಲೇಖಕನಿಗೆ ತನ್ನದೇ ಆದ ದೃಷ್ಟಿಕೋನವಿದೆ, ಅದು ಚಳವಳಿಯ ರಾಜಕೀಯ ಸಿದ್ಧಾಂತದಿಂದ ಭಿನ್ನವಾಗಿರಬಹುದು. ಪುಸ್ತಕ ಬಿಡುಗಡೆ ಮಾಡಲು ವೈಯಕ್ತಿಕ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವ ಅಗತ್ಯವಿಲ್ಲ. ಅಭಿಪ್ರಾಯವು ವ್ಯಕ್ತಿಯ ದೃಷ್ಟಿಕೋನವಾಗಿದೆ ಮತ್ತು ಅದನ್ನು ಹಾಗೆ ನೋಡಬೇಕು” ಎಂದಿದ್ದಾರೆ.

ಇದೇ ವೇಳೆ ಮುಸ್ಲಿಂ ಲೀಗ್ (ಐಯುಎಂಎಲ್‌) ಮತ್ತು ಜಮಾಅತೇ ಇಸ್ಲಾಮಿ ಬಗ್ಗೆ ಮಾತನಾಡಿದ ಪಿಣರಾಯಿ ವಿಜಯನ್, “ಲೀಗ್ ಮತ್ತು ಜಮಾಅತೇ ಇಸ್ಲಾಮಿಯನ್ನು ಒಂದೇ ಲೆನ್ಸ್ ಮೂಲಕ ನೋಡಲು ಸಾಧ್ಯವಿಲ್ಲ. ಜಮಾತ್‌ನ ಗುರಿ ಇಸ್ಲಾಮಿಕ್ ರಾಜ್ಯವಾಗಿದೆ, ಆದರೆ ಲೀಗ್ ಭಾರತದ ಹೊರಗೆ ಮೈತ್ರಿಗಳಿಲ್ಲದ ಸುಧಾರಣಾವಾದಿ ಚಳುವಳಿಯಾಗಿದೆ. ಜಮಾತ್ ವಿದೇಶದಲ್ಲಿ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಮತ್ತು ಲೀಗ್‌ಗಿಂತ ಭಿನ್ನವಾಗಿ ಇಸ್ಲಾಮಿಕ್ ಸಾರ್ವತ್ರಿಕತೆಯ ಗುರಿಯನ್ನು ಹೊಂದಿದೆ. ಆರ್‌ಎಸ್‌ಎಸ್ ಮತ್ತು ಜಮಾತ್ ಒಂದೇ ಗರಿಗಳ ಪಕ್ಷಿಗಳು. ಲೀಗ್ ತನ್ನ ಕಮ್ಯುನಿಸ್ಟ್ ವಿರೋಧಿ ಕಾರ್ಯಸೂಚಿಯಲ್ಲಿ ಮಾತ್ರ ಈ ಕೋಮು ಗುಂಪುಗಳೊಂದಿಗೆ ಸಹಕರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...